Advertisement
ಅನುಕ್ರಮ

ಚಿಲಿಪಿಲಿ | ಕಿರೀಟದಂತಹ ಈ ಹಕ್ಕಿ “ಚಂದ್ರಮಕುಟ”

Share

ಚಂದ್ರಮಕುಟ, Common hoopoe.( Upupa epops)  ಈ ಹಕ್ಕಿಯನ್ನು ನೆಲಕುಟುಕ ಎಂಬ ಹೆಸರಿನಿಂದಲೂ ಕರೆಯುತ್ತಾರೆ.ಪ್ರತಿಯೊಂದು ಹಕ್ಕಿಯೂ ವಿಶಿಷ್ಟವೇ.

ಕೆಲವೊಂದು ಹಕ್ಕಿ ತನ್ನ ಚಿತ್ರ ವಿಚಿತ್ರ ಬಣ್ಣದಿಂದ, ಇನ್ನೊಂದು , ತನ್ನ ಆಕರ್ಷಕ ಆಕಾರದಿಂದ, ಅಥವಾ ಉದ್ದನೆಯ ಬಾಲದಂತ ಗರಿಗಳಿಂದ , ಅಥವಾ ‌ದಪ್ಪನೆಯ ಕೊಕ್ಕಿನಿಂದ , ಮೊನಚಾದ ಕಣ್ಣುಗಳಿಂದ ಗುರುತಿಸ್ಪಟ್ಟರೆ ಈಗ ನಾವು ನೋಡುತ್ತಿರುವ ಈ ಹಕ್ಕಿ ತನ್ನ ಇಡೀ ಚೆಂದದ ರೂಪಿನಿಂದಲೇ ತನ್ನತ್ತ ಸೆಳೆಯುತ್ತದೆ. ಮೈ ಬಣ್ಣವೇ ಚೆಂದ, ಅದರಲ್ಲೂ ತಲೆಯ ಮೇಲಿನ ಕಿರೀಟದಂತಹ ರಚನೆಯುಂಟಲ್ಲಾ ಇನ್ನೂ ಚೆಂದ. ಇದೇ ಹಕ್ಕಿ ನೋಡಿ ಚಂದ್ರಮಕುಟ.

ನವೆಂಬರ್ ತಿಂಗಳಿನಲ್ಲಿ ನಮ್ಮ ಬಾಳಿಲ ಪರಿಸರದಲ್ಲಿ ಕಂಡು ಬರುತ್ತದೆ. ಪ್ರಾದೇಶಿಕ ವಲಸೆ ಹಕ್ಕಿಯಾಗಿದೆ. ಮೊನ್ನೆ ನಮ್ಮ ಮನೆಯಂಗಳದಲ್ಲಿ ನಲಿಯುತ್ತಿದ್ದ ಮೈನಾ ಗಾತ್ರ( 31 cm)ದ ಹಕ್ಕಿ ಒಂದರೆಗಳಿಗೆ ನಮ್ಮನ್ನು ತನ್ನತ್ತ ಸೆಳೆದದ್ದಂತು ಹೌದು.
ಇದರ ಮೈ ಮೇಲೆಲ್ಲಾ ಜೀಬ್ರಾ ಪಟ್ಟಿಗಳಂತೆ ಕಪ್ಪು ಬಿಳಿ ಪಟ್ಟಿಗಳಿವೆ. ಕುತ್ತಿಗೆ ಹಾಗೂ ಎದೆ ತಿಳಿಯಾದ ಕಿತ್ತಳೆ ಬಣ್ಣದಲ್ಲಿದೆ. ತಲೆಯ ಮೇಲಿರುವ ಜುಟ್ಟು ಹಿಮ್ಮುಖವಾಗಿ ಇನ್ನೊಂದು ಕೊಕ್ಕಿದೆಯೇನೋ ಎಂಬ ಭ್ರಮೆಯನ್ನೇ ಹುಟ್ಟಿಸುವಂತಿದೆ.
ಇವುಗಳು ಒಂಟಿಯಾಗಿ ಅಥವಾ ಜೊತೆಯಾಗಿಯೂ ಕಂಡು ಬರುತ್ತವೆ.

ಸದಾ ಚಟುವಟಿಕೆಯಿಂದ ಇರುವ ಹಕ್ಕಿಯಾಗಿದೆ. ಕ್ಷಣಾರ್ಧದಲ್ಲಿ ಹುಳು, ಹುಪ್ಪಟೆ ಕೀಟಗಳನ್ನು ಹಿಡಿದು ತಿನ್ನುತ್ತವೆ. ಮರಿಗಳನ್ನು ಬಹಳ ಜತನದಿಂದ ಲಾಲನೆ , ಪಾಲನೆ ಮಾಡಿ ಕೊಳ್ಳುತ್ತದೆ. ಮೆಲು ದನಿಯ ಈ ಹಕ್ಕಿ ಫೆಬ್ರವರಿ ಯಿಂದ ಮೇ ವರೆಗೆ ಮರದ ಪೊಟರೆಗಳಲ್ಲಿ ಗೂಡು ಕಟ್ಟುತ್ತವೆ.

# ಅಶ್ವಿನಿಮೂರ್ತಿ ಅಯ್ಯನಕಟ್ಟೆ
# ಛಾಯಾಚಿತ್ರ: ಯು. ರಾಧಾಕೃಷ್ಣ ರಾವ್ ಬಾಳಿಲ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…

7 hours ago

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು

ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…

11 hours ago

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

1 day ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

2 days ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

2 days ago

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

2 days ago