Advertisement
ಅನುಕ್ರಮ

ಚಿಲಿಪಿಲಿ | ಕಿರೀಟದಂತಹ ಈ ಹಕ್ಕಿ “ಚಂದ್ರಮಕುಟ”

Share

ಚಂದ್ರಮಕುಟ, Common hoopoe.( Upupa epops)  ಈ ಹಕ್ಕಿಯನ್ನು ನೆಲಕುಟುಕ ಎಂಬ ಹೆಸರಿನಿಂದಲೂ ಕರೆಯುತ್ತಾರೆ.ಪ್ರತಿಯೊಂದು ಹಕ್ಕಿಯೂ ವಿಶಿಷ್ಟವೇ.

ಕೆಲವೊಂದು ಹಕ್ಕಿ ತನ್ನ ಚಿತ್ರ ವಿಚಿತ್ರ ಬಣ್ಣದಿಂದ, ಇನ್ನೊಂದು , ತನ್ನ ಆಕರ್ಷಕ ಆಕಾರದಿಂದ, ಅಥವಾ ಉದ್ದನೆಯ ಬಾಲದಂತ ಗರಿಗಳಿಂದ , ಅಥವಾ ‌ದಪ್ಪನೆಯ ಕೊಕ್ಕಿನಿಂದ , ಮೊನಚಾದ ಕಣ್ಣುಗಳಿಂದ ಗುರುತಿಸ್ಪಟ್ಟರೆ ಈಗ ನಾವು ನೋಡುತ್ತಿರುವ ಈ ಹಕ್ಕಿ ತನ್ನ ಇಡೀ ಚೆಂದದ ರೂಪಿನಿಂದಲೇ ತನ್ನತ್ತ ಸೆಳೆಯುತ್ತದೆ. ಮೈ ಬಣ್ಣವೇ ಚೆಂದ, ಅದರಲ್ಲೂ ತಲೆಯ ಮೇಲಿನ ಕಿರೀಟದಂತಹ ರಚನೆಯುಂಟಲ್ಲಾ ಇನ್ನೂ ಚೆಂದ. ಇದೇ ಹಕ್ಕಿ ನೋಡಿ ಚಂದ್ರಮಕುಟ.

ನವೆಂಬರ್ ತಿಂಗಳಿನಲ್ಲಿ ನಮ್ಮ ಬಾಳಿಲ ಪರಿಸರದಲ್ಲಿ ಕಂಡು ಬರುತ್ತದೆ. ಪ್ರಾದೇಶಿಕ ವಲಸೆ ಹಕ್ಕಿಯಾಗಿದೆ. ಮೊನ್ನೆ ನಮ್ಮ ಮನೆಯಂಗಳದಲ್ಲಿ ನಲಿಯುತ್ತಿದ್ದ ಮೈನಾ ಗಾತ್ರ( 31 cm)ದ ಹಕ್ಕಿ ಒಂದರೆಗಳಿಗೆ ನಮ್ಮನ್ನು ತನ್ನತ್ತ ಸೆಳೆದದ್ದಂತು ಹೌದು.
ಇದರ ಮೈ ಮೇಲೆಲ್ಲಾ ಜೀಬ್ರಾ ಪಟ್ಟಿಗಳಂತೆ ಕಪ್ಪು ಬಿಳಿ ಪಟ್ಟಿಗಳಿವೆ. ಕುತ್ತಿಗೆ ಹಾಗೂ ಎದೆ ತಿಳಿಯಾದ ಕಿತ್ತಳೆ ಬಣ್ಣದಲ್ಲಿದೆ. ತಲೆಯ ಮೇಲಿರುವ ಜುಟ್ಟು ಹಿಮ್ಮುಖವಾಗಿ ಇನ್ನೊಂದು ಕೊಕ್ಕಿದೆಯೇನೋ ಎಂಬ ಭ್ರಮೆಯನ್ನೇ ಹುಟ್ಟಿಸುವಂತಿದೆ.
ಇವುಗಳು ಒಂಟಿಯಾಗಿ ಅಥವಾ ಜೊತೆಯಾಗಿಯೂ ಕಂಡು ಬರುತ್ತವೆ.

ಸದಾ ಚಟುವಟಿಕೆಯಿಂದ ಇರುವ ಹಕ್ಕಿಯಾಗಿದೆ. ಕ್ಷಣಾರ್ಧದಲ್ಲಿ ಹುಳು, ಹುಪ್ಪಟೆ ಕೀಟಗಳನ್ನು ಹಿಡಿದು ತಿನ್ನುತ್ತವೆ. ಮರಿಗಳನ್ನು ಬಹಳ ಜತನದಿಂದ ಲಾಲನೆ , ಪಾಲನೆ ಮಾಡಿ ಕೊಳ್ಳುತ್ತದೆ. ಮೆಲು ದನಿಯ ಈ ಹಕ್ಕಿ ಫೆಬ್ರವರಿ ಯಿಂದ ಮೇ ವರೆಗೆ ಮರದ ಪೊಟರೆಗಳಲ್ಲಿ ಗೂಡು ಕಟ್ಟುತ್ತವೆ.

# ಅಶ್ವಿನಿಮೂರ್ತಿ ಅಯ್ಯನಕಟ್ಟೆ
# ಛಾಯಾಚಿತ್ರ: ಯು. ರಾಧಾಕೃಷ್ಣ ರಾವ್ ಬಾಳಿಲ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಅಡಿಕೆಯಲ್ಲಿ ಎಲೆ ಚುಕ್ಕೆ ರೋಗದ ಸಮಗ್ರ ನಿರ್ವಹಣೆ ಹೇಗೆ..? ತಜ್ಞರಿಂದ ಸಮಗ್ರ ನಿರ್ವಹಣಾ ಮಾರ್ಗಸೂಚಿ – ಸಲಹೆ

ಅಡಿಕೆ ಎಲೆ ಚುಕ್ಕೆ ರೋಗವು ಗಾಳಿ ಮತ್ತು ತೇವಾಂಶದಿಂದ ವೇಗವಾಗಿ ಹರಡುತ್ತಿದ್ದು, ತೋಟಗಳಿಗೆ…

9 hours ago

ಬಿ ಎಸ್ ಎನ್ ಎಲ್ ವಿರುದ್ಧ ಸುಳ್ಯದ ಗ್ರಾಹಕನಿಗೆ ಜಯ – ಇಂಟರ್ನೆಟ್ ಸೇವೆಯಲ್ಲಿ ವ್ಯತ್ಯಯಕ್ಕೆ ₹30,000 ಪರಿಹಾರ ಆದೇಶ..!

ಇಂಟರ್ನೆಟ್ ಸೇವೆ ವ್ಯತ್ಯಯಕ್ಕೆ ಸುಳ್ಯದ ಗ್ರಾಹಕನಿಗೆ ₹30,000 ಪರಿಹಾರ ನೀಡಲು ಆದೇಶ. ಬಿ…

13 hours ago

ಹವಾಮಾನ ವರದಿ | 01-05-2026 | ಮಳೆಯ ಚಟುವಟಿಕೆ ಕಡಿಮೆಯಾಗುತ್ತಾ? ಮೇ 2ರಿಂದ ಕೆಲವು ದಿನ ಮಳೆ ಕಡಿಮೆ, ಬಳಿಕ ಮತ್ತೆ ಚುರುಕು..!?

ಮೇ 2ರಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಕಡಿಮೆಯಾಗುವ ಸೂಚನೆಗಳು ಕಂಡುಬರುತ್ತಿವೆ. ಮೇ…

14 hours ago

ಚಿಕ್ಕಮಗಳೂರಿನಲ್ಲಿ ದಾಳಿ – ಅಕ್ರಮವಾಗಿ ಸಂಗ್ರಹಿಸಿದ್ದ 181 ಯೂರಿಯಾ ಚೀಲಗಳು ಜಪ್ತಿ

ಚಿಕ್ಕಮಗಳೂರಿನಲ್ಲಿ ಅಕ್ರಮವಾಗಿ ಶೇಖರಿಸಿದ್ದ ಯೂರಿಯಾ ಗೊಬ್ಬರ ಜಪ್ತಿ ಮಾಡಲಾಗಿದೆ. 181 ಚೀಲಗಳು ಹಾಗೂ…

16 hours ago

ರಾಜ್ಯದ ಹಲವು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ – ಮುಂದಿನ ಕೆಲ ದಿನ ಮಳೆ ಎಚ್ಚರಿಕೆ..!

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲ ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ.…

17 hours ago

ಪದವಿಪೂರ್ವ ಶಿಕ್ಷಣ ಮತ್ತು ನೀಟ್ ಪರೀಕ್ಷೆಯ ಒತ್ತಡ : ಪರ್ಯಾಯ ದೃಷ್ಟಿಕೋನ

NEET ಪರೀಕ್ಷೆಯ ಒತ್ತಡದಿಂದ ವಿದ್ಯಾರ್ಥಿಗಳಲ್ಲಿ ಮಾನಸಿಕ ಸಮಸ್ಯೆಗಳು ಹೆಚ್ಚುತ್ತಿವೆ. ಒತ್ತಡರಹಿತ, ಅನುಭವಾಧಾರಿತ ಶಿಕ್ಷಣ…

18 hours ago