Advertisement
ಅನುಕ್ರಮ

“ಚಿಲಿಪಿಲಿ” ಹಕ್ಕಿ ನೀಡುವ ರಾಧಾಕೃಷ್ಣ ರಾವ್ ಬಾಳಿಲ

Share
ರೂರಲ್‌ ಮಿರರ್‌ ಹೊಸತೊಂದು ಅಂಕಣ ಶುರು ಮಾಡುತ್ತಿದೆ. ಹಕ್ಕಿಗಳ ಲೋಕವನ್ನು ಪರಿಚಯ ಮಾಡುವ ಚಿಲಿಪಿಲಿ ಅಂಕಣ ಇದು. ಬರಹಗಾರ್ತಿ ಅಶ್ವಿನಿಮೂರ್ತಿ ಬಾಳಿಲ ಈ ಅಂಕಣ ಬರೆಯುವರು. ಹಕ್ಕಿಗಳ ಪರಿಚಯ ಮಾಡುವರು. ಇದಕ್ಕೆ ಚಿತ್ರವನ್ನು ನೀಡುವವರು  ರಾಧಾಕೃಷ್ಣ ರಾವ್ ಯು ಬಾಳಿಲ. ಫೋಟೋಗ್ರಫಿ ಒಂದು ತಪಸ್ಸು. ಅದರಲ್ಲೂ ಹಕ್ಕಿ, ಪರಿಸರದ ಛಾಯಾಚಿತ್ರ ತೆಗೆಯುವುದು  ಎಂದರೆ ಅದು ಬಹುದೊಡ್ಡ ತಪಸ್ಸು.
ಸಾವಿರ ಶಬ್ದಗಳಲ್ಲಿ ಹೇಳಲಾಗದ್ದನ್ನು ಒಂದು ಛಾಯಾಚಿತ್ರ ಅರ್ಥಮಾಡಿಸಿ ಬಿಡುತ್ತದೆ. ಮಾತನಾಡುವ ಫೋಟೋವನ್ನು ತೆಗೆಯುವುದೂ ಒಂದು ಕಲೆ. ಛಾಯಾಗ್ರಹಣ ಕಲೆಯನ್ನು ಒಲಿಸಿಕೊಂಡವರಲ್ಲಿ ಪ್ರಮುಖರಾಗಿ ಕಂಡು ಬರುವವರು ರಾಧಾಕೃಷ್ಣ ರಾವ್ ಯು ಬಾಳಿಲ ಅವರು. ಇವರು ಸೆರೆ ಹಿಡಿಯುವ ಪ್ರತಿ ಫೋಟೋ ವೂ ಒಂದು ಸಂಭಾಷಣೆಯೇ. ಅದರಲ್ಲೂ ಪಕ್ಷಿ ಚಿತ್ರಣವಂತೂ ಅದ್ಭುತ.  ಕೃಷಿಕರಾಗಿರುವ ಇವರು ವನ್ಯಜೀವಿ ಛಾಯಾಗ್ರಾಹಕರು.  ಅಪಾರ ಶ್ರದ್ಧೆ, ಪರಿಶ್ರಮ , ತಾಳ್ಮೆ, ಹಾಗೂ ನೂತನ ತಂತ್ರಜ್ಞಾನದ ಅರಿವು ವನ್ಯಜೀವಿ ಛಾಯಾಗ್ರಹಣಕ್ಕೆ ಬಹಳ ಅಗತ್ಯ. ಕೆಲವೊಂದು ಫೋಟೋಗಳನ್ನು ತೆಗೆಯಲು ಗಂಟೆಗಟ್ಟಲೆ ಕಾಯಬೇಕಾಗುತ್ತದೆ. ಹಕ್ಕಿಗಳ ಮನಸ್ಥಿಯನ್ನು ಅರ್ಥಮಾಡಿಕೊಂಡು , ವಿವಿಧ ಭಂಗಿಗಳನ್ನು ಸಮರ್ಥವಾಗಿ ಸೆರೆಹಿಡಿಯ ಬಲ್ಲರು. ಇವರು ತೆಗೆದ ಪ್ರತಿಯೊಂದು ಹಕ್ಕಿಗಳ ಛಾಯಾಚಿತ್ರವೂ ಏನನ್ನೋ ಧ್ವನಿಸುತ್ತದೆ. ಬರಿಗಣ್ಣಿನಲ್ಲಿ ಗೋಚರಿಸದ ಸೂಕ್ಷ್ಮ ಸಂಗತಿಗಳು ಕ್ಯಾಮರಾ ಕಣ್ಣಿನಿಂದ ತಪ್ಪಿಸಿ ಕೊಳ್ಳಲಾಗದು.  ಇವರ ಫೋಟೋಗಳು ಪಕ್ಷಿ ಲೋಕದ ಸುಂದರ‌ ಚಿತ್ರಣಗಳು. ಇವರು ಅಶ್ವಿನಿಮೂರ್ತಿ ಅವರಿಗೆ ಹಕ್ಕಿಗಳ ಲೋಕವನ್ನು ಪರಿಚಯಿಸುವ ಉದ್ದೇಶದಿಂದ ಛಾಯಾಚಿತ್ರಗಳನ್ನು ನೀಡುತ್ತಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ

ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…

16 hours ago

ಅಡಿಕೆ ಎಲೆಚುಕ್ಕೆರೋಗ – ಸಿಪಿಸಿಆರ್‌ಐ ನೇತೃತ್ವದಲ್ಲಿ ಸುಳ್ಯದ ಗುತ್ತಿಗಾರಿನಲ್ಲಿ ಸಂವಾದ

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…

23 hours ago

2026 ಎಲ್ ನಿನೊ ಎಚ್ಚರಿಕೆ..! ಭಾರತ ಸೇರಿ ಏಷ್ಯಾದಲ್ಲಿ ಬರ-ಬಿಸಿಲಿನ ಡಬಲ್ ಶಾಕ್

2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…

1 day ago

ಭಾರೀ ಬಿಸಿ ಹೊಡೆತ..! ಜಗತ್ತಿನ 1 ಬಿಲಿಯನ್ ಜನರ ಬದುಕಿಗೆ ಬಿಸಿ ಹೊಡೆತ

ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…

1 day ago

ಹವಾಮಾನ ವರದಿ | 25-04-2026 | ಕರಾವಳಿ, ಮಲೆನಾಡಿನಲ್ಲಿ ಗುಡುಗು ಮಳೆ – ಮಳೆ ಹೆಚ್ಚಳ ಯಾವಾಗಿನಿಂದ…?

ರಾಜ್ಯದಲ್ಲಿ ಏಪ್ರಿಲ್ 26ರಿಂದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಆರಂಭವಾಗುವ ಸಾಧ್ಯತೆ ಇದೆ.…

2 days ago

ಹವಾಮಾನ ವರದಿ | 24-04-2026 | ಕರಾವಳಿ–ಮಲೆನಾಡು–ಒಳನಾಡಿನಲ್ಲಿ ಮಳೆ ಸೂಚನೆ

ರಾಜ್ಯದಲ್ಲಿ ಬಿಸಿಲಿನ ನಡುವೆ ಏಪ್ರಿಲ್ 25-26ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ. ಕರಾವಳಿ,…

3 days ago