Advertisement
ಅನುಕ್ರಮ

ಹಕ್ಕಿಗಳ ಲೋಕದಲ್ಲಿ ನಮ್ಮ “ಚಿಲಿಪಿಲಿ”

Share

ಪ್ರಕೃತಿಯೊಂದಿಗೆ ಬದುಕುವುದು ಇಷ್ಟವಾದ ಸಂಗತಿ. ಅದೆಷ್ಟೋ ಬಗೆಯ ಪ್ರಾಣಿ, ಪಕ್ಷಿಗಳು ಪರಿಸರದಲ್ಲಿ  ಕಾಣಸಿಗುತ್ತವೆ. ಅದರಲ್ಲೂ ಹಕ್ಕಿಗಳು ಎಷ್ಟೋ ಬಗೆಯವು. ಬಣ್ಣ ಬಣ್ಣದ ಹಕ್ಕಿಗಳು ಹಾರಾಡುತ್ತಾ ಸಾಗಿದಾಗ ದಿನವೂ ಹೊಸತು ಹೊಸತು. ಅಂತಹ ಹಕ್ಕಿಗಳ ಛಾಯಾಗ್ರಹಣ ಒಂದು ಹವ್ಯಾಸವಾದರೆ, ಆ ಹಕ್ಕಿಗಳ ಪರಿಚಯ ಇನ್ನೂ ಆಸಕ್ತಿದಾಯಕ. ಈಗ ಅಂತಹದ್ದೊಂದು ಪ್ರಯತ್ನದಲ್ಲಿ ನಾವಿದ್ದೇವೆ.

Advertisement

ಪ್ರಕೃತಿಯ ಹಲವು ಅಚ್ಚರಿಗಳಲ್ಲಿ ಈ ಪಕ್ಷಿ ಪ್ರಪಂಚವೂ ಒಂದು. ಗಮನಿಸಿದಷ್ಟು ಹೊಸ ಹೊಸ ಸಂಗತಿಗಳು .‌ ಪರಿಸರದಲ್ಲಿರುವ ಪ್ರತಿಯೊಂದು ಜೀವಿಗೂ ಅದರದೇ ಮಹತ್ವವಿದೆ. ಪ್ರಕೃತಿಯ ಸಮತೋಲನ ಕಾಪಾಡುವಲ್ಲಿ ಸಣ್ಣ ದೊಡ್ಡ ಪ್ರಾಣಿ , ಪಕ್ಷಿಗಳೆನ್ನದೆ ಎಲ್ಲವೂ ಅನಿವಾರ್ಯ. ಯಾವುದೇ ಒಂದು ಜೀವಿಯ ಅಳಿವು ಅಥವಾ ನಿರ್ನಾಮವಾದರೆ ಪರಿಸರದಲ್ಲಿ ವಿಷಮ ಪರಿಸ್ಥಿತಿ ತಲೆದೋರಬಹುದು. ಆರೋಗ್ಯಯುತ ಪರಿಸರದ ನಿರ್ಮಾಣ ಕಾರ್ಯದಲ್ಲಿ ಪಕ್ಷಿಗಳ ಕೊಡುಗೆ ಅಪಾರ.
ನಮ್ಮ ಪರಿಸರದಲ್ಲಿ ವೈವಿಧ್ಯಮಯ ಪಕ್ಷಿಗಳಿವೆ. ಅವುಗಳ ಹಗುರ ದೇಹ ರಚನೆ, ಬಣ್ಣ, ವಿನ್ಯಾಸ, ಸ್ವರ, ಸಾಮರ್ಥ್ಯ ಎಲ್ಲವೂ ಭಿನ್ನ. ಪ್ರತಿಯೊಂದು ಅದರದೇ ಶೈಲಿಯಲ್ಲಿ ಆಹಾರ ಸಂಗ್ರಹಿಸುತ್ತವೆ. ಗೂಡು ಕಟ್ಟುತ್ತವೆ. ಇವುಗಳ ಜೀವನ ಕ್ರಮವೇ ಅಧ್ಯಯನ ಯೋಗ್ಯವಾದುದು.

ತಾಳ್ಮೆ , ಕಲಿಯುವ ಉತ್ಸಾಹ, ಪಕ್ಷಿಗಳ ಕುರಿತು ಒಂದು ಪುಟ್ಟ ಕುತೂಹಲವಿದ್ದರೆ ಪಕ್ಷಿಗಳು ಆಸಕ್ತಿದಾಯಕ ವಿಷಯ. ಸುಮ್ಮನೆ ಕುಳಿತು ಹಕ್ಕಿಗಳನ್ನು ವೀಕ್ಷಿಸಿದರೂ ಆನಂದವೇ. ಫೋಟೋಗ್ರಫಿಯನ್ನು ಹವ್ಯಾಸವಾಗಿ ರೂಡಿಸಿಕೊಂಡವರು ಹಕ್ಕಿಗಳ ಜೀವನದ ಹೆಚ್ಚಿನ ವಿಷಯಗಳನ್ನು ಆಸಕ್ತಿದಾಯಕವಾಗಿ ಸೆರೆ ಹಿಡಿಯ ಬಲ್ಲರು. ಅವುಗಳ ದಿನನಿತ್ಯದ ಚಟುವಟಿಕೆಗಳನ್ನು ಸೂಕ್ಷ್ಮ ವಾಗಿ ಅಭ್ಯಸಿಸಿ ಹೇಳಬಲ್ಲರು. ಪಕ್ಷಿಗಳ ಸುಂದರ ಪ್ರಪಂಚದತ್ತ ಸ್ವಲ್ಪ ‌ಇಣುಕಿ ನೋಡುವ ಪ್ರಯತ್ನವನ್ನು ಲೇಖಕಿ, ಗೃಹಿಣಿ, ಪರಿಸರ ಆಸಕ್ತಿಯನ್ನು ಹೊಂದಿರುವ ಅಶ್ವಿನಿಮೂರ್ತಿ ಅಯ್ಯನಕಟ್ಟೆ ಅವರು ರೂರಲ್‌ ಮಿರರ್‌ ನಲ್ಲಿ ಚಿಲಿಪಿಲಿ ಅಂಕಣದ ಮೂಲಕ ಬರೆಯುತ್ತಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

2 hours ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

2 hours ago

ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ

ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…

2 hours ago

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

14 hours ago

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ

ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್‌ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…

1 day ago

ಪರರನ್ನು ಮೆಟ್ಟಿಲಾಗಿಸಿದ ಸಾಧನೆ ಶಾಶ್ವತವಲ್ಲ: ಆತ್ಮವಂಚನೆಯ ಅಂಧಕಾರದತ್ತ ಕರೆದೊಯ್ಯುವ ಮಾರ್ಗ

ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…

1 day ago