Advertisement
ಅನುಕ್ರಮ

ಹಕ್ಕಿಗಳ ಲೋಕದಲ್ಲಿ ನಮ್ಮ “ಚಿಲಿಪಿಲಿ”

Share

ಪ್ರಕೃತಿಯೊಂದಿಗೆ ಬದುಕುವುದು ಇಷ್ಟವಾದ ಸಂಗತಿ. ಅದೆಷ್ಟೋ ಬಗೆಯ ಪ್ರಾಣಿ, ಪಕ್ಷಿಗಳು ಪರಿಸರದಲ್ಲಿ  ಕಾಣಸಿಗುತ್ತವೆ. ಅದರಲ್ಲೂ ಹಕ್ಕಿಗಳು ಎಷ್ಟೋ ಬಗೆಯವು. ಬಣ್ಣ ಬಣ್ಣದ ಹಕ್ಕಿಗಳು ಹಾರಾಡುತ್ತಾ ಸಾಗಿದಾಗ ದಿನವೂ ಹೊಸತು ಹೊಸತು. ಅಂತಹ ಹಕ್ಕಿಗಳ ಛಾಯಾಗ್ರಹಣ ಒಂದು ಹವ್ಯಾಸವಾದರೆ, ಆ ಹಕ್ಕಿಗಳ ಪರಿಚಯ ಇನ್ನೂ ಆಸಕ್ತಿದಾಯಕ. ಈಗ ಅಂತಹದ್ದೊಂದು ಪ್ರಯತ್ನದಲ್ಲಿ ನಾವಿದ್ದೇವೆ.

ಪ್ರಕೃತಿಯ ಹಲವು ಅಚ್ಚರಿಗಳಲ್ಲಿ ಈ ಪಕ್ಷಿ ಪ್ರಪಂಚವೂ ಒಂದು. ಗಮನಿಸಿದಷ್ಟು ಹೊಸ ಹೊಸ ಸಂಗತಿಗಳು .‌ ಪರಿಸರದಲ್ಲಿರುವ ಪ್ರತಿಯೊಂದು ಜೀವಿಗೂ ಅದರದೇ ಮಹತ್ವವಿದೆ. ಪ್ರಕೃತಿಯ ಸಮತೋಲನ ಕಾಪಾಡುವಲ್ಲಿ ಸಣ್ಣ ದೊಡ್ಡ ಪ್ರಾಣಿ , ಪಕ್ಷಿಗಳೆನ್ನದೆ ಎಲ್ಲವೂ ಅನಿವಾರ್ಯ. ಯಾವುದೇ ಒಂದು ಜೀವಿಯ ಅಳಿವು ಅಥವಾ ನಿರ್ನಾಮವಾದರೆ ಪರಿಸರದಲ್ಲಿ ವಿಷಮ ಪರಿಸ್ಥಿತಿ ತಲೆದೋರಬಹುದು. ಆರೋಗ್ಯಯುತ ಪರಿಸರದ ನಿರ್ಮಾಣ ಕಾರ್ಯದಲ್ಲಿ ಪಕ್ಷಿಗಳ ಕೊಡುಗೆ ಅಪಾರ.
ನಮ್ಮ ಪರಿಸರದಲ್ಲಿ ವೈವಿಧ್ಯಮಯ ಪಕ್ಷಿಗಳಿವೆ. ಅವುಗಳ ಹಗುರ ದೇಹ ರಚನೆ, ಬಣ್ಣ, ವಿನ್ಯಾಸ, ಸ್ವರ, ಸಾಮರ್ಥ್ಯ ಎಲ್ಲವೂ ಭಿನ್ನ. ಪ್ರತಿಯೊಂದು ಅದರದೇ ಶೈಲಿಯಲ್ಲಿ ಆಹಾರ ಸಂಗ್ರಹಿಸುತ್ತವೆ. ಗೂಡು ಕಟ್ಟುತ್ತವೆ. ಇವುಗಳ ಜೀವನ ಕ್ರಮವೇ ಅಧ್ಯಯನ ಯೋಗ್ಯವಾದುದು.

ತಾಳ್ಮೆ , ಕಲಿಯುವ ಉತ್ಸಾಹ, ಪಕ್ಷಿಗಳ ಕುರಿತು ಒಂದು ಪುಟ್ಟ ಕುತೂಹಲವಿದ್ದರೆ ಪಕ್ಷಿಗಳು ಆಸಕ್ತಿದಾಯಕ ವಿಷಯ. ಸುಮ್ಮನೆ ಕುಳಿತು ಹಕ್ಕಿಗಳನ್ನು ವೀಕ್ಷಿಸಿದರೂ ಆನಂದವೇ. ಫೋಟೋಗ್ರಫಿಯನ್ನು ಹವ್ಯಾಸವಾಗಿ ರೂಡಿಸಿಕೊಂಡವರು ಹಕ್ಕಿಗಳ ಜೀವನದ ಹೆಚ್ಚಿನ ವಿಷಯಗಳನ್ನು ಆಸಕ್ತಿದಾಯಕವಾಗಿ ಸೆರೆ ಹಿಡಿಯ ಬಲ್ಲರು. ಅವುಗಳ ದಿನನಿತ್ಯದ ಚಟುವಟಿಕೆಗಳನ್ನು ಸೂಕ್ಷ್ಮ ವಾಗಿ ಅಭ್ಯಸಿಸಿ ಹೇಳಬಲ್ಲರು. ಪಕ್ಷಿಗಳ ಸುಂದರ ಪ್ರಪಂಚದತ್ತ ಸ್ವಲ್ಪ ‌ಇಣುಕಿ ನೋಡುವ ಪ್ರಯತ್ನವನ್ನು ಲೇಖಕಿ, ಗೃಹಿಣಿ, ಪರಿಸರ ಆಸಕ್ತಿಯನ್ನು ಹೊಂದಿರುವ ಅಶ್ವಿನಿಮೂರ್ತಿ ಅಯ್ಯನಕಟ್ಟೆ ಅವರು ರೂರಲ್‌ ಮಿರರ್‌ ನಲ್ಲಿ ಚಿಲಿಪಿಲಿ ಅಂಕಣದ ಮೂಲಕ ಬರೆಯುತ್ತಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎತ್ತಿನಹೊಳೆ ಯೋಜನೆಗೆ ಮತ್ತೆ ಚುರುಕು – ಒಂದು ವಾರದಲ್ಲಿ ಕಾಮಗಾರಿ ಆರಂಭಕ್ಕೆ ಡಿಕೆ ಶಿವಕುಮಾರ್ ಕಟ್ಟುನಿಟ್ಟಿನ ಸೂಚನೆ

ಎತ್ತಿನಹೊಳೆ ಯೋಜನೆಯ ಕಾಮಗಾರಿಯನ್ನು ಒಂದು ವಾರದಲ್ಲಿ ಪುನರಾರಂಭಿಸಲು ಉಪಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ. ಪ್ರಮುಖ…

2 hours ago

ಕೆಆರ್ಎಸ್ ಡ್ಯಾಂ ಎಚ್ಚರಿಕೆ- 15 ದಿನಗಳಲ್ಲಿ 8 ಅಡಿ ನೀರು ಕುಸಿತ – ಕಾವೇರಿ ಪ್ರದೇಶದಲ್ಲಿ ನೀರಿನ ಅಭಾವ ಭೀತಿ!

ಕೆಆರ್ಎಸ್ ಅಣೆಕಟ್ಟಿನ ನೀರಿನ ಮಟ್ಟ ಕೇವಲ 15 ದಿನಗಳಲ್ಲಿ 8 ಅಡಿ ಕುಸಿದಿದೆ.…

2 hours ago

ತುಮಕೂರಿನಲ್ಲಿ ನವಿಲುಗಳಿಗೆ H5N1 ಸೋಂಕು ದೃಢ: 4 ಗ್ರಾಮಗಳು ಕಂಟೋನ್ಮೆಂಟ್ ವಲಯ ಘೋಷಣೆ, ಕೋಳಿ ಫಾರಂಗಳ ಮೇಲೆ ಕಣ್ಣಿಟ್ಟ ಅಧಿಕಾರಿಗಳು

ತುಮಕೂರಿನಲ್ಲಿ ನವಿಲುಗಳಲ್ಲಿ H5N1 ಸೋಂಕು ದೃಢಪಟ್ಟಿದ್ದು, ನಾಲ್ಕು ಗ್ರಾಮಗಳನ್ನು ಕಂಟೋನ್ಮೆಂಟ್ ವಲಯಗಳಾಗಿ ಘೋಷಿಸಲಾಗಿದೆ.…

3 hours ago

ಯಾದಗಿರಿ ನೀರಿನ ಸಂಕಷ್ಟಕ್ಕೆ ತಾತ್ಕಾಲಿಕ ಪರಿಹಾರ – 45 ಗ್ರಾಮಗಳಿಗೆ ಬಾಡಿಗೆ ಕೊಳವೆಬಾವಿ ಮೂಲಕ ನೀರು ಪೂರೈಕೆ

ಯಾದಗಿರಿ ಜಿಲ್ಲೆಯ 45 ಗ್ರಾಮಗಳಿಗೆ ಬಾಡಿಗೆ ಕೊಳವೆಬಾವಿಗಳ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ.…

3 hours ago

ಗುರುವಾಯನಕೆರೆ–ಉಪ್ಪಿನಂಗಡಿ ಹೆದ್ದಾರಿ ಅಭಿವೃದ್ಧಿಗೆ ₹13 ಕೋಟಿ ಮಂಜೂರು – ಸಂಚಾರ ಸುಗಮ, ಪ್ರವಾಸೋದ್ಯಮಕ್ಕೂ ಉತ್ತೇಜನ

ಗುರುವಾಯನಕೆರೆ–ಉಪ್ಪಿನಂಗಡಿ ರಾಜ್ಯ ಹೆದ್ದಾರಿ ಅಭಿವೃದ್ಧಿಗೆ ₹13 ಕೋಟಿ ಅನುಮೋದನೆ ನೀಡಲಾಗಿದೆ. ಈ ಯೋಜನೆಯಿಂದ…

3 hours ago

ಹೊಳೆಹೊನ್ನೂರು ಅಡಿಕೆ ಕಳ್ಳತನ ದೊಡ್ಡ ಬೇಟೆ – 350 ಚೀಲ ಅಡಿಕೆ, ಲಾರಿ ವಶ – ಆರೋಪಿಗಳು ಪರಾರಿ

ಹೊಳೆಹೊನ್ನೂರಿನಲ್ಲಿ ನಡೆದ ಅಡಿಕೆ ಕಳ್ಳತನ ಪ್ರಕರಣದಲ್ಲಿ 350 ಚೀಲ ಅಡಿಕೆ ಮತ್ತು ಲಾರಿಯನ್ನು…

3 hours ago