Advertisement
ಅನುಕ್ರಮ

ಹಕ್ಕಿಗಳ ಲೋಕದಲ್ಲಿ ನಮ್ಮ “ಚಿಲಿಪಿಲಿ”

Share

ಪ್ರಕೃತಿಯೊಂದಿಗೆ ಬದುಕುವುದು ಇಷ್ಟವಾದ ಸಂಗತಿ. ಅದೆಷ್ಟೋ ಬಗೆಯ ಪ್ರಾಣಿ, ಪಕ್ಷಿಗಳು ಪರಿಸರದಲ್ಲಿ  ಕಾಣಸಿಗುತ್ತವೆ. ಅದರಲ್ಲೂ ಹಕ್ಕಿಗಳು ಎಷ್ಟೋ ಬಗೆಯವು. ಬಣ್ಣ ಬಣ್ಣದ ಹಕ್ಕಿಗಳು ಹಾರಾಡುತ್ತಾ ಸಾಗಿದಾಗ ದಿನವೂ ಹೊಸತು ಹೊಸತು. ಅಂತಹ ಹಕ್ಕಿಗಳ ಛಾಯಾಗ್ರಹಣ ಒಂದು ಹವ್ಯಾಸವಾದರೆ, ಆ ಹಕ್ಕಿಗಳ ಪರಿಚಯ ಇನ್ನೂ ಆಸಕ್ತಿದಾಯಕ. ಈಗ ಅಂತಹದ್ದೊಂದು ಪ್ರಯತ್ನದಲ್ಲಿ ನಾವಿದ್ದೇವೆ.

ಪ್ರಕೃತಿಯ ಹಲವು ಅಚ್ಚರಿಗಳಲ್ಲಿ ಈ ಪಕ್ಷಿ ಪ್ರಪಂಚವೂ ಒಂದು. ಗಮನಿಸಿದಷ್ಟು ಹೊಸ ಹೊಸ ಸಂಗತಿಗಳು .‌ ಪರಿಸರದಲ್ಲಿರುವ ಪ್ರತಿಯೊಂದು ಜೀವಿಗೂ ಅದರದೇ ಮಹತ್ವವಿದೆ. ಪ್ರಕೃತಿಯ ಸಮತೋಲನ ಕಾಪಾಡುವಲ್ಲಿ ಸಣ್ಣ ದೊಡ್ಡ ಪ್ರಾಣಿ , ಪಕ್ಷಿಗಳೆನ್ನದೆ ಎಲ್ಲವೂ ಅನಿವಾರ್ಯ. ಯಾವುದೇ ಒಂದು ಜೀವಿಯ ಅಳಿವು ಅಥವಾ ನಿರ್ನಾಮವಾದರೆ ಪರಿಸರದಲ್ಲಿ ವಿಷಮ ಪರಿಸ್ಥಿತಿ ತಲೆದೋರಬಹುದು. ಆರೋಗ್ಯಯುತ ಪರಿಸರದ ನಿರ್ಮಾಣ ಕಾರ್ಯದಲ್ಲಿ ಪಕ್ಷಿಗಳ ಕೊಡುಗೆ ಅಪಾರ.
ನಮ್ಮ ಪರಿಸರದಲ್ಲಿ ವೈವಿಧ್ಯಮಯ ಪಕ್ಷಿಗಳಿವೆ. ಅವುಗಳ ಹಗುರ ದೇಹ ರಚನೆ, ಬಣ್ಣ, ವಿನ್ಯಾಸ, ಸ್ವರ, ಸಾಮರ್ಥ್ಯ ಎಲ್ಲವೂ ಭಿನ್ನ. ಪ್ರತಿಯೊಂದು ಅದರದೇ ಶೈಲಿಯಲ್ಲಿ ಆಹಾರ ಸಂಗ್ರಹಿಸುತ್ತವೆ. ಗೂಡು ಕಟ್ಟುತ್ತವೆ. ಇವುಗಳ ಜೀವನ ಕ್ರಮವೇ ಅಧ್ಯಯನ ಯೋಗ್ಯವಾದುದು.

ತಾಳ್ಮೆ , ಕಲಿಯುವ ಉತ್ಸಾಹ, ಪಕ್ಷಿಗಳ ಕುರಿತು ಒಂದು ಪುಟ್ಟ ಕುತೂಹಲವಿದ್ದರೆ ಪಕ್ಷಿಗಳು ಆಸಕ್ತಿದಾಯಕ ವಿಷಯ. ಸುಮ್ಮನೆ ಕುಳಿತು ಹಕ್ಕಿಗಳನ್ನು ವೀಕ್ಷಿಸಿದರೂ ಆನಂದವೇ. ಫೋಟೋಗ್ರಫಿಯನ್ನು ಹವ್ಯಾಸವಾಗಿ ರೂಡಿಸಿಕೊಂಡವರು ಹಕ್ಕಿಗಳ ಜೀವನದ ಹೆಚ್ಚಿನ ವಿಷಯಗಳನ್ನು ಆಸಕ್ತಿದಾಯಕವಾಗಿ ಸೆರೆ ಹಿಡಿಯ ಬಲ್ಲರು. ಅವುಗಳ ದಿನನಿತ್ಯದ ಚಟುವಟಿಕೆಗಳನ್ನು ಸೂಕ್ಷ್ಮ ವಾಗಿ ಅಭ್ಯಸಿಸಿ ಹೇಳಬಲ್ಲರು. ಪಕ್ಷಿಗಳ ಸುಂದರ ಪ್ರಪಂಚದತ್ತ ಸ್ವಲ್ಪ ‌ಇಣುಕಿ ನೋಡುವ ಪ್ರಯತ್ನವನ್ನು ಲೇಖಕಿ, ಗೃಹಿಣಿ, ಪರಿಸರ ಆಸಕ್ತಿಯನ್ನು ಹೊಂದಿರುವ ಅಶ್ವಿನಿಮೂರ್ತಿ ಅಯ್ಯನಕಟ್ಟೆ ಅವರು ರೂರಲ್‌ ಮಿರರ್‌ ನಲ್ಲಿ ಚಿಲಿಪಿಲಿ ಅಂಕಣದ ಮೂಲಕ ಬರೆಯುತ್ತಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರೀ ಮಳೆ ಹಿನ್ನೆಲೆ – ಆಗಸ್ಟ್‌ 1ರಂದು ದಕ್ಷಿಣ ಕನ್ನಡದಲ್ಲಿ ಶಾಲೆ-ಕಾಲೇಜುಗಳಿಗೆ ರಜೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು, ಐಟಿಐ…

9 minutes ago

ಹವಾಮಾನ ವರದಿ | 31-06-2026 | ಆಗಸ್ಟ್ 4ಕ್ಕೆ ಇನ್ನೊಂದು ವಾಯುಭಾರ ಕುಸಿತ ಸಾಧ್ಯತೆ..?

ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 1ರವರೆಗೆ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ…

2 hours ago

ಸುಳ್ಯ ಸುತ್ತಮುತ್ತ ಭಾರೀ ಮಳೆ – ಬಾಳುಗೋಡಿನಲ್ಲಿ ಈ ವರ್ಷದ ಮೊದಲ ಸೇತುವೆ ಮುಳುಗಡೆ, ಹೊಳೆ-ತೋಡುಗಳು ತುಂಬಿ ಹರಿವು

ಸುಳ್ಯ ತಾಲೂಕಿನ ಬಾಳುಗೋಡು, ಹರಿಹರ, ಬಳ್ಪ, ಗುತ್ತಿಗಾರು, ಸುಬ್ರಹ್ಮಣ್ಯ ಸೇರಿದಂತೆ ಹಲವು ಗ್ರಾಮಗಳಲ್ಲಿ…

3 hours ago

ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ – ಬಾಂಗ್ಲಾದೇಶದ ವಿಜ್ಞಾನಿಗಳಿಂದ ಹೊಸ ತಂತ್ರಜ್ಞಾನಕ್ಕೆ ಪೇಟೆಂಟ್

ಬಾಂಗ್ಲಾದೇಶದ ವಿಜ್ಞಾನಿಗಳು ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ ತಯಾರಿಸುವ ತಂತ್ರಜ್ಞಾನಕ್ಕೆ ಪೇಟೆಂಟ್…

10 hours ago

ಹೊಂಬಾಳೆ ಕಳ್ಳರ ಹಾವಳಿ : ಅಡಿಕೆ ಬೆಳೆಗಾರರ ನಿದ್ದೆಗೆಡಿಸಿದ ಕಳ್ಳತನ

ದೊಡ್ಡಬಳ್ಳಾಪುರ ಭಾಗದಲ್ಲಿ ಅಡಿಕೆ ಹೊಂಬಾಳೆಗಳನ್ನು ಕಳ್ಳರು ಕದ್ದೊಯ್ಯುತ್ತಿರುವ ಘಟನೆಗಳು ಹೆಚ್ಚಾಗಿವೆ. ಇದರಿಂದ ರೈತರು…

11 hours ago