Advertisement
ಅನುಕ್ರಮ

ಹಕ್ಕಿಗಳ ಲೋಕದಲ್ಲಿ ನಮ್ಮ “ಚಿಲಿಪಿಲಿ”

Share

ಪ್ರಕೃತಿಯೊಂದಿಗೆ ಬದುಕುವುದು ಇಷ್ಟವಾದ ಸಂಗತಿ. ಅದೆಷ್ಟೋ ಬಗೆಯ ಪ್ರಾಣಿ, ಪಕ್ಷಿಗಳು ಪರಿಸರದಲ್ಲಿ  ಕಾಣಸಿಗುತ್ತವೆ. ಅದರಲ್ಲೂ ಹಕ್ಕಿಗಳು ಎಷ್ಟೋ ಬಗೆಯವು. ಬಣ್ಣ ಬಣ್ಣದ ಹಕ್ಕಿಗಳು ಹಾರಾಡುತ್ತಾ ಸಾಗಿದಾಗ ದಿನವೂ ಹೊಸತು ಹೊಸತು. ಅಂತಹ ಹಕ್ಕಿಗಳ ಛಾಯಾಗ್ರಹಣ ಒಂದು ಹವ್ಯಾಸವಾದರೆ, ಆ ಹಕ್ಕಿಗಳ ಪರಿಚಯ ಇನ್ನೂ ಆಸಕ್ತಿದಾಯಕ. ಈಗ ಅಂತಹದ್ದೊಂದು ಪ್ರಯತ್ನದಲ್ಲಿ ನಾವಿದ್ದೇವೆ.

ಪ್ರಕೃತಿಯ ಹಲವು ಅಚ್ಚರಿಗಳಲ್ಲಿ ಈ ಪಕ್ಷಿ ಪ್ರಪಂಚವೂ ಒಂದು. ಗಮನಿಸಿದಷ್ಟು ಹೊಸ ಹೊಸ ಸಂಗತಿಗಳು .‌ ಪರಿಸರದಲ್ಲಿರುವ ಪ್ರತಿಯೊಂದು ಜೀವಿಗೂ ಅದರದೇ ಮಹತ್ವವಿದೆ. ಪ್ರಕೃತಿಯ ಸಮತೋಲನ ಕಾಪಾಡುವಲ್ಲಿ ಸಣ್ಣ ದೊಡ್ಡ ಪ್ರಾಣಿ , ಪಕ್ಷಿಗಳೆನ್ನದೆ ಎಲ್ಲವೂ ಅನಿವಾರ್ಯ. ಯಾವುದೇ ಒಂದು ಜೀವಿಯ ಅಳಿವು ಅಥವಾ ನಿರ್ನಾಮವಾದರೆ ಪರಿಸರದಲ್ಲಿ ವಿಷಮ ಪರಿಸ್ಥಿತಿ ತಲೆದೋರಬಹುದು. ಆರೋಗ್ಯಯುತ ಪರಿಸರದ ನಿರ್ಮಾಣ ಕಾರ್ಯದಲ್ಲಿ ಪಕ್ಷಿಗಳ ಕೊಡುಗೆ ಅಪಾರ.
ನಮ್ಮ ಪರಿಸರದಲ್ಲಿ ವೈವಿಧ್ಯಮಯ ಪಕ್ಷಿಗಳಿವೆ. ಅವುಗಳ ಹಗುರ ದೇಹ ರಚನೆ, ಬಣ್ಣ, ವಿನ್ಯಾಸ, ಸ್ವರ, ಸಾಮರ್ಥ್ಯ ಎಲ್ಲವೂ ಭಿನ್ನ. ಪ್ರತಿಯೊಂದು ಅದರದೇ ಶೈಲಿಯಲ್ಲಿ ಆಹಾರ ಸಂಗ್ರಹಿಸುತ್ತವೆ. ಗೂಡು ಕಟ್ಟುತ್ತವೆ. ಇವುಗಳ ಜೀವನ ಕ್ರಮವೇ ಅಧ್ಯಯನ ಯೋಗ್ಯವಾದುದು.

ತಾಳ್ಮೆ , ಕಲಿಯುವ ಉತ್ಸಾಹ, ಪಕ್ಷಿಗಳ ಕುರಿತು ಒಂದು ಪುಟ್ಟ ಕುತೂಹಲವಿದ್ದರೆ ಪಕ್ಷಿಗಳು ಆಸಕ್ತಿದಾಯಕ ವಿಷಯ. ಸುಮ್ಮನೆ ಕುಳಿತು ಹಕ್ಕಿಗಳನ್ನು ವೀಕ್ಷಿಸಿದರೂ ಆನಂದವೇ. ಫೋಟೋಗ್ರಫಿಯನ್ನು ಹವ್ಯಾಸವಾಗಿ ರೂಡಿಸಿಕೊಂಡವರು ಹಕ್ಕಿಗಳ ಜೀವನದ ಹೆಚ್ಚಿನ ವಿಷಯಗಳನ್ನು ಆಸಕ್ತಿದಾಯಕವಾಗಿ ಸೆರೆ ಹಿಡಿಯ ಬಲ್ಲರು. ಅವುಗಳ ದಿನನಿತ್ಯದ ಚಟುವಟಿಕೆಗಳನ್ನು ಸೂಕ್ಷ್ಮ ವಾಗಿ ಅಭ್ಯಸಿಸಿ ಹೇಳಬಲ್ಲರು. ಪಕ್ಷಿಗಳ ಸುಂದರ ಪ್ರಪಂಚದತ್ತ ಸ್ವಲ್ಪ ‌ಇಣುಕಿ ನೋಡುವ ಪ್ರಯತ್ನವನ್ನು ಲೇಖಕಿ, ಗೃಹಿಣಿ, ಪರಿಸರ ಆಸಕ್ತಿಯನ್ನು ಹೊಂದಿರುವ ಅಶ್ವಿನಿಮೂರ್ತಿ ಅಯ್ಯನಕಟ್ಟೆ ಅವರು ರೂರಲ್‌ ಮಿರರ್‌ ನಲ್ಲಿ ಚಿಲಿಪಿಲಿ ಅಂಕಣದ ಮೂಲಕ ಬರೆಯುತ್ತಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದಕ್ಷಿಣ ಕನ್ನಡಕ್ಕೆ ಕೈಗಾರಿಕಾ ಬಲ : ಗಂಜಿಮಠ ಪ್ಲಾಸ್ಟಿಕ್ ಪಾರ್ಕ್ ಕಾಮಗಾರಿ ಪರಿಶೀಲಿಸಿದ ಸಂಸದ ಬ್ರಿಜೇಶ್ ಚೌಟ

ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…

3 hours ago

Gen Z ಮತದಾರರತ್ತ ಬಿಜೆಪಿ ಕಣ್ಣು- 18-25 ವಯೋಮಾನದ ಯುವಕರಿಗಾಗಿ ‘ತರುಣ ಮೋರ್ಚಾ’ ರಚನೆಗೆ ಚಿಂತನೆ

18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…

4 hours ago

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ಕುಸಿತ – ಚೀನಾದ ಬೇಡಿಕೆ ಇಳಿಕೆಯಿಂದ ರೈತರಿಗೆ ಸಂಕಷ್ಟ! – ಭಾರತದ ಅಡಿಕೆ ಮಾರುಕಟ್ಟೆಗೆ ಏನು ಎಚ್ಚರಿಕೆ..?

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…

4 hours ago

ಹವಾಮಾನ ವರದಿ | 17-06-2026 | ಜೂನ್ 21 ರವರೆಗೆ ಕರಾವಳಿಯಲ್ಲಿ ಅಲ್ಪ ಮಳೆ, ಎಲ್ ನಿನೋ ಹಿನ್ನೆಲೆ ರೈತರಿಗೆ ನೀರು ಸಂಗ್ರಹದ ಸಲಹೆ

ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…

12 hours ago

ಎಲ್ ನಿನೋ ಪರಿಣಾಮ – 10 ರಾಜ್ಯಗಳಲ್ಲಿ ಜಾಗೃತಿ ಅಭಿಯಾನ

2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…

12 hours ago

ಇಂಡೋನೇಷ್ಯಾದ ಸ್ಟಾರ್ಟ್‌ಅಪ್‌ನಿಂದ ಬಾಂಗ್ಲಾದೇಶ, ಮಾಲ್ಡೀವ್ಸ್‌ಗೆ ಅಡಿಕೆ ರಫ್ತು – ಜಾಗತಿಕ ಮಾರುಕಟ್ಟೆಯಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚಳ

ಇಂಡೋನೇಷ್ಯಾದ ಸ್ಟಾರ್ಟ್‌ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್‌ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…

1 day ago