Advertisement
MIRROR FOCUS

ಅಡಿಕೆ ಆಮದು ಹೆಚ್ಚಿಸಿಕೊಂಡಿರುವ ಚೀನಾ..? ಕಾರಣ ಏನು..?

Share

ಚೀನಾವು ವಿಯೆಟ್ನಾಂನಿಂದ ಅಡಿಕೆ ಆಮದು ಮಾಡುವ ಪ್ರಕ್ರಿಯೆಲ್ಲಿ ಹೆಚ್ಚು ಆಸಕ್ತಿ ತೋರಿಸಿದೆ. ಈ ಬಾರಿ ಅಂದರೆ ಕಳೆದ 9 ತಿಂಗಳಲ್ಲಿ ವಿಯೆಟ್ನಾಂನಿಂದ ಅಧಿಕ ಪ್ರಮಾಣದಲ್ಲಿ ಅಡಿಕೆ ಆಮದು ಮಾಡಿಕೊಂಡಿದೆ. ಪ್ರತಿಕೂಲ ಹವಾಮಾನ ಪರಿಸ್ಥಿತಿಗಳಿಂದ ಅಡಿಕೆಯ ಪೂರೈಕೆಯಲ್ಲಿನ ವ್ಯತ್ಯಾಸದ  ಕಾರಣದಿಂದ ಆಮದು ಹೆಚ್ಚಿಸಿಕೊಂಡಿದೆ.…..ಮುಂದೆ ಓದಿ….

ಚೀನಾದ ಲ್ಲಿ ಹೆಚ್ಚು ಅಡಿಕೆ ಉತ್ಪಾದಿಸುವ ಹೈಯಾನ್ ದ್ವೀಪ ಪ್ರಾಂತ್ಯವು ಚಂಡಮಾರುತಗಳಿಂದ ಹಾನಿಗೊಳಗಾಗಿತ್ತು, ಹಾಗೂ ಹವಾಮಾನದ ಕಾರಣದಿಂದ ಉತ್ಪಾದನೆಯಲ್ಲಿ ಕೊರತೆಯೂ ಕಂಡುಬಂದಿತ್ತು. ಹೀಗಾಗಿ ಚೀನಾವು ವಿಯೆಟ್ನಾಂ ಮತ್ತು ಇಂಡೋನೇಷ್ಯಾದಂತಹ ಇತರ ದೇಶಗಳಿಂದ ಅಡಿಕೆ ಆಮದು ಮಾಡಿಕೊಳ್ಳುತ್ತಿದೆ. ಚೀನಾ ಆಮದು ಕಾರಣದಿಂದ ವಿಯೆಟ್ನಾಂನಲ್ಲೂ ಅಡಿಕೆ ಧಾರಣೆ ಏರಿಕೆಯಾಗಿದೆ.

ಚೀನಾದಲ್ಲಿ ಅಡಿಕೆಯನ್ನು ಕ್ಯಾಂಡಿ ತಯಾರಿಸಲು ಬಳಕೆ ಮಾಡಲಾಗುತ್ತದೆ. ಅಡಿಕೆಯಲ್ಲಿ ಅರೆಕೋಲಿನ್‌ ಅಂಶಗಳ ಪ್ರಭಾವ ಕಡಿಮೆ ಮಾಡಲು ಮೌಲ್ಯವರ್ಧನೆ ಮಾಡಿ ಎಚ್ಚರಿಕೆಯಿಂದ ಬಳಕೆ ಮಾಡಲಾಗುತ್ತಿದೆ. ಹೀಗಾಗಿ ಚೀನಾದಲ್ಲಿ ಅಡಿಕೆಯ ಮೌಲ್ಯವರ್ಧನೆಯು ವೇಗ ಪಡೆದಿದೆ, ಕ್ಯಾಂಡಿ ಬಳಕೆ ಹೆಚ್ಚಾಗುತ್ತಿದೆ. ಹೀಗಾಗಿ ಅಡಿಕೆ ಆಮದು ಪ್ರಮಾಣವೂ ಏರಿಕೆಯಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

2 hours ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

8 hours ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

9 hours ago

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ

ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…

22 hours ago

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

1 day ago

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ – ಮಾವಿನ ರಫ್ತು ಕುಸಿತ, ರೈತರಿಗೆ ಹೊಡೆತ | ಅಲ್ಫೋನ್ಸೊ ಬೆಲೆ ಅರ್ಧಕ್ಕೆ ಇಳಿಕೆ

ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…

1 day ago