ಚಿತ್ರದುರ್ಗ ಜಿಲ್ಲೆಯಲ್ಲಿ ಕಳೆದ ಅಕ್ಟೋಬರ್ ಮಾಹೆಯಲ್ಲಿ ನೈಸರ್ಗಿಕ ವಿಕೋಪಗಳಾದ ಪ್ರವಾಹ, ಅತಿವೃಷ್ಠಿಯಿಂದ ಬೆಳೆಹಾನಿ ಆದ ರೈತರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಈ ಕುರಿತು ಆಕ್ಷೇಪಣೆ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ. ಚಿತ್ರದುರ್ಗ, ಚಳ್ಳಕೆರೆ, ಹಿರಿಯೂರು, ಮೊಳಕಾಲ್ಮೂರು ತಾಲ್ಲೂಕುಗಳಲ್ಲಿ ಉಂಟಾದ ಬೆಳೆ ಹಾನಿ ಬಗ್ಗೆ ಜಂಟಿ ಸಮೀಕ್ಷಾ ತಂಡವು ಸ್ಥಳ ಪರಿಶೀಲನೆ ನಡೆಸಿ, ಬೆಳೆ ಹಾನಿ ಕ್ಷೇತ್ರಗಳ ಮಾಹಿತಿ ನೀಡಿದೆ. ಜಿಲ್ಲೆಯಲ್ಲಿ ಒಟ್ಟು 914.45 ಹೆಕ್ಟೇರ್ ಕೃಷಿ ಬೆಳೆ ಹಾಗೂ 241.80 ತೋಟಗಾರಿಕೆ ಬೆಳೆ ಸೇರಿ ಒಟ್ಟು 1156 ಹೆಕ್ಟೇರ್ ಕ್ಷೇತ್ರದಲ್ಲಿ ಬೆಳೆ ಹಾನಿಯಾಗಿದೆ. ಯಾವುದೇ ಆಕ್ಷೇಪಣೆಗಳು ಸಲ್ಲಿಕೆಯಾಗದಿದ್ದರೆ ಪಟ್ಟಿಯನ್ನು ಅಂತಿಮಗೊಳಿಸಿ ನಿಯಮಾನುಸಾರ ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…