ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ಐತಿಹಾಸಿಕ ವಾಣಿ ವಿಲಾಸ ಜಲಾಶಯ ತುಂಬಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಾಗಿನ ಅರ್ಪಿಸಿ , ಗಂಗಾ ಪೂಜೆ ನೆರವೇರಿಸಿದರು.
ಬಳಿಕ ಸಿದ್ದರಾಮಯ್ಯ, ನೀರಾವರಿಗೆ ರಾಜ್ಯ ಸರ್ಕಾರ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದು, ಸಾವಿರದ 274 ಕೋಟಿ ರೂಪಾಯಿ ವೆಚ್ಚದಲ್ಲಿ ಮತ್ತೊಂದು ಯೋಜನೆಯನ್ನು ಸಿದ್ಧಪಡಿಸಲಾಗುತ್ತಿದ್ದು, ಯೋಜನೆ ಜಾರಿಯಾದರೆ ಈ ಭಾಗದ ಕಟ್ಟಕಡೆಯ ಜಮೀನಿಗೂ ನೀರಿನ ಸೌಲಭ್ಯ ದೊರೆಯಲಿದೆ ಎಂದು ಹೇಳಿದರು. 115 ವರ್ಷಗಳ ಇತಿಹಾಸ ಇರುವ ಹಾಗೂ ರಾಜ್ಯದಲ್ಲಿ ನಿರ್ಮಾಣವಾದ ಮೊದಲ ಜಲಾಶಯ ವಾಣಿವಿಲಾಸ ಸಾಗರ ಆಗಿದ್ದು, ಮೂರನೇ ಬಾರಿಗೆ ಕೋಡಿ ಬಿದ್ದಿದೆ. ಇದರಿಂದ 30 ಸಾವಿರ ಎಕರೆಗೆ ನೀರಿನ ಸೌಲಭ್ಯ ದೊರೆಯುತ್ತಿದೆ ಎಂದು ಹೇಳಿದರು.
ಈ ವೇಳೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಸೇರಿದಂತೆ ಜಿಲ್ಲೆಯ ಶಾಸಕರು, ಮುಖಂಡರು ಹಾಗೂ ಅಧಿಕಾರಿಘಲು ಉಪಸ್ಥಿತರಿದ್ದರು.
ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…
ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…
2026ರಲ್ಲಿ ಎಲ್ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್ನಿನೊ" ಆಗುವ…
ಉತ್ತರ ಪ್ರದೇಶ ಸರ್ಕಾರವು ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳನ್ನು ಪೂರೈಸಲು…
ಎಳೆಕಾಯಿ ಹಾಗೂ ಬಲಿತ ಅಡಿಕೆ ಒಡೆದು ಬೀಳುತ್ತಿರುವ ಸಮಸ್ಯೆ ಹಲವು ಭಾಗಗಳಲ್ಲಿ ಕಂಡುಬರುತ್ತಿದೆ.…