ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ಐತಿಹಾಸಿಕ ವಾಣಿ ವಿಲಾಸ ಜಲಾಶಯ ತುಂಬಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಾಗಿನ ಅರ್ಪಿಸಿ , ಗಂಗಾ ಪೂಜೆ ನೆರವೇರಿಸಿದರು.
ಬಳಿಕ ಸಿದ್ದರಾಮಯ್ಯ, ನೀರಾವರಿಗೆ ರಾಜ್ಯ ಸರ್ಕಾರ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದು, ಸಾವಿರದ 274 ಕೋಟಿ ರೂಪಾಯಿ ವೆಚ್ಚದಲ್ಲಿ ಮತ್ತೊಂದು ಯೋಜನೆಯನ್ನು ಸಿದ್ಧಪಡಿಸಲಾಗುತ್ತಿದ್ದು, ಯೋಜನೆ ಜಾರಿಯಾದರೆ ಈ ಭಾಗದ ಕಟ್ಟಕಡೆಯ ಜಮೀನಿಗೂ ನೀರಿನ ಸೌಲಭ್ಯ ದೊರೆಯಲಿದೆ ಎಂದು ಹೇಳಿದರು. 115 ವರ್ಷಗಳ ಇತಿಹಾಸ ಇರುವ ಹಾಗೂ ರಾಜ್ಯದಲ್ಲಿ ನಿರ್ಮಾಣವಾದ ಮೊದಲ ಜಲಾಶಯ ವಾಣಿವಿಲಾಸ ಸಾಗರ ಆಗಿದ್ದು, ಮೂರನೇ ಬಾರಿಗೆ ಕೋಡಿ ಬಿದ್ದಿದೆ. ಇದರಿಂದ 30 ಸಾವಿರ ಎಕರೆಗೆ ನೀರಿನ ಸೌಲಭ್ಯ ದೊರೆಯುತ್ತಿದೆ ಎಂದು ಹೇಳಿದರು.
ಈ ವೇಳೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಸೇರಿದಂತೆ ಜಿಲ್ಲೆಯ ಶಾಸಕರು, ಮುಖಂಡರು ಹಾಗೂ ಅಧಿಕಾರಿಘಲು ಉಪಸ್ಥಿತರಿದ್ದರು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…