ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ಐತಿಹಾಸಿಕ ವಾಣಿ ವಿಲಾಸ ಜಲಾಶಯ ತುಂಬಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಾಗಿನ ಅರ್ಪಿಸಿ , ಗಂಗಾ ಪೂಜೆ ನೆರವೇರಿಸಿದರು.
ಬಳಿಕ ಸಿದ್ದರಾಮಯ್ಯ, ನೀರಾವರಿಗೆ ರಾಜ್ಯ ಸರ್ಕಾರ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದು, ಸಾವಿರದ 274 ಕೋಟಿ ರೂಪಾಯಿ ವೆಚ್ಚದಲ್ಲಿ ಮತ್ತೊಂದು ಯೋಜನೆಯನ್ನು ಸಿದ್ಧಪಡಿಸಲಾಗುತ್ತಿದ್ದು, ಯೋಜನೆ ಜಾರಿಯಾದರೆ ಈ ಭಾಗದ ಕಟ್ಟಕಡೆಯ ಜಮೀನಿಗೂ ನೀರಿನ ಸೌಲಭ್ಯ ದೊರೆಯಲಿದೆ ಎಂದು ಹೇಳಿದರು. 115 ವರ್ಷಗಳ ಇತಿಹಾಸ ಇರುವ ಹಾಗೂ ರಾಜ್ಯದಲ್ಲಿ ನಿರ್ಮಾಣವಾದ ಮೊದಲ ಜಲಾಶಯ ವಾಣಿವಿಲಾಸ ಸಾಗರ ಆಗಿದ್ದು, ಮೂರನೇ ಬಾರಿಗೆ ಕೋಡಿ ಬಿದ್ದಿದೆ. ಇದರಿಂದ 30 ಸಾವಿರ ಎಕರೆಗೆ ನೀರಿನ ಸೌಲಭ್ಯ ದೊರೆಯುತ್ತಿದೆ ಎಂದು ಹೇಳಿದರು.
ಈ ವೇಳೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಸೇರಿದಂತೆ ಜಿಲ್ಲೆಯ ಶಾಸಕರು, ಮುಖಂಡರು ಹಾಗೂ ಅಧಿಕಾರಿಘಲು ಉಪಸ್ಥಿತರಿದ್ದರು.
ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…
ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ವ್ಯವಸ್ಥೆ ಮಾಡಿ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿಯಾಗಿದೆ. ಟ್ಯಾಂಕರ್,…
ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಏಪ್ರಿಲ್ 15ರಿಂದ 17ರವರೆಗೆ ಬಿಸಿಗಾಳಿ ತೀವ್ರವಾಗುವ ಸಾಧ್ಯತೆ…
ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭವಾಗಿದೆ. ಇದು ರೈತರಿಗೆ ನಿಖರ…
ವನ್ಯಜೀವಿಗಳಿಗೆ ಸಂತಾನಹರಣ ಚಿಂತನೆಗೆ ವಿರೋಧಿಸಿ ಚಾಮರಾಜನಗರದಲ್ಲಿ ರೈತರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.…