ಮಾ.16 | ಚೊಕ್ಕಾಡಿ ಶ್ರೀರಾಮ ದೇವಾಲಯದಲ್ಲಿ “ರಾಮಸ್ಮರಣ-ರುದ್ರಪಠನ” |

March 12, 2022
12:09 PM

ಸುಳ್ಯ ತಾಲೂಕಿನ ಚೊಕ್ಕಾಡಿಯ ಶ್ರೀರಾಮ ದೇವಾಲಯದಲ್ಲಿ ಮಾ.16 ರಂದು ಲೋಕಕಲ್ಯಾಣಾರ್ಥವಾಗಿ ಅಹರ್ನಿಶಿ ರುದ್ರ ಪಾರಾಯಣ ನಡೆಯಲಿದೆ. ರಾಮಸ್ಮರಣ-ರುದ್ರಪಠನ ಕಾರ್ಯಕ್ರಮದ ಮೂಲಕ ರುದ್ರಾಧ್ಯಾಯಿಗಳು ನಿರಂತರ ರುದ್ರಪಾರಾಯಣ ಮಾಡುವರು ಎಂದು ಚೊಕ್ಕಾಡಿಯ ಶ್ರೀರಾಮ ದೇವಾಲಯದ ಶ್ರೀರಾಮ ಸೇವಾ ಸಮಿತಿ  ಅಧ್ಯಕ್ಷ ಮಹೇಶ್‌ ಭಟ್‌ ಚೂಂತಾರು ತಿಳಿಸಿದ್ದಾರೆ.

ಶ್ರೀ ರಾಮಚಂದ್ರಾಪುರ ಮಠದ ಅಧೀನ ಸಂಸ್ಥೆಯಾದ  ಚೊಕ್ಕಾಡಿಯ ಶ್ರೀ ರಾಮ ದೇವಾಲಯದಲ್ಲಿ ಲೋಕಕಲ್ಯಾಣಾರ್ಥವಾಗಿ  ನಿರಂತರ ರುದ್ರಪಠಣ ನಡೆಯಲಿದೆ. ಶಿವೋಪಾಸನೆಯ ಈ ಕಾರ್ಯದಲ್ಲಿ 24 ಗಂಟೆಗಳ ಕಾಲ ನಿರಂತರವಾಗಿ ರುದ್ರ ಪಠಣ ನಡೆಯಲಿದೆ. ಊರಿನ ಹಾಗೂ ಪರವೂರಿನ ರುದ್ರಾಧ್ಯಾಯಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ರುದ್ರ ಪಠಣ ನಡೆಸುವರು. ಅತ್ಯಂತ ವಿಶಿಷ್ಟ ಹಾಗೂ ಅಪರೂಪದ ಈ ಕಾರ್ಯಕ್ರಮಕ್ಕೆ ಸಿದ್ಧತೆಗಳು ಈಗಾಗಲೇ ಆರಂಭಗೊಂಡಿದೆ. ಮಾರ್ಚ್‌ 16 ರ ಸೂರ್ಯೋದಯದಿಂದ ಆರಂಭವಾಗಿ ಮಾರ್ಚ್‌ 17 ಸೂರ್ಯೋದಯದವರೆಗೆ ಈ ರುದ್ರ ಪಠಣ ನಡೆಯಲಿದೆ.

ಲೋಕಕಲ್ಯಾಣ ಹಾಗೂ ಶ್ರೀ ಕ್ಷೇತ್ರದ ಅಭಿವೃದ್ಧಿಯ ಸಂಕಲ್ಪದೊಂದಿಗೆ ನಡೆಯುವ ಈ ಕಾರ್ಯಕ್ರಮದಲ್ಲಿ ರುದ್ರ ಪಾರಾಯಣ ನಡೆಸುವ ಭಕ್ತರು ಚೊಕ್ಕಾಡಿಯ ಶ್ರೀ ರಾಮ ದೇವಾಲಯದ ಶ್ರೀರಾಮ ಸೇವಾ ಸಮಿತಿಯನ್ನು ಸಂಪರ್ಕ ಮಾಡಬಹುದು. ಅಂದು ರುದ್ರ ಪಠಣವು ಸೇವಾ ರೂಪದಲ್ಲಿ ನಡೆಯಲಿದ್ದು ಶ್ರೀ ದೇವತಾ ಕಾರ್ಯಗಳೆಲ್ಲವೂ ಸೇವಾ ರೂಪದಲ್ಲಿ ನಡೆಯಲಿದೆ ಎಂದು ಮಹೇಶ್‌ ಭಟ್‌ ಚೂಂತಾರು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ
March 27, 2026
6:50 AM
by: ದ ರೂರಲ್ ಮಿರರ್.ಕಾಂ
ವೈಜ್ಞಾನಿಕ ಬೆಂಬಲ ಬೆಲೆ ಮತ್ತು ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ಕೋಡಿಹಳ್ಳಿ ಚಂದ್ರಶೇಖರ್ ಆಗ್ರಹ
March 27, 2026
6:45 AM
by: ದ ರೂರಲ್ ಮಿರರ್.ಕಾಂ
ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ
March 27, 2026
6:34 AM
by: ದ ರೂರಲ್ ಮಿರರ್.ಕಾಂ
ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!
March 26, 2026
7:04 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror