Advertisement
ಸುದ್ದಿಗಳು

ಮಾ.16 | ಚೊಕ್ಕಾಡಿ ಶ್ರೀರಾಮ ದೇವಾಲಯದಲ್ಲಿ “ರಾಮಸ್ಮರಣ-ರುದ್ರಪಠನ” |

Share

ಸುಳ್ಯ ತಾಲೂಕಿನ ಚೊಕ್ಕಾಡಿಯ ಶ್ರೀರಾಮ ದೇವಾಲಯದಲ್ಲಿ ಮಾ.16 ರಂದು ಲೋಕಕಲ್ಯಾಣಾರ್ಥವಾಗಿ ಅಹರ್ನಿಶಿ ರುದ್ರ ಪಾರಾಯಣ ನಡೆಯಲಿದೆ. ರಾಮಸ್ಮರಣ-ರುದ್ರಪಠನ ಕಾರ್ಯಕ್ರಮದ ಮೂಲಕ ರುದ್ರಾಧ್ಯಾಯಿಗಳು ನಿರಂತರ ರುದ್ರಪಾರಾಯಣ ಮಾಡುವರು ಎಂದು ಚೊಕ್ಕಾಡಿಯ ಶ್ರೀರಾಮ ದೇವಾಲಯದ ಶ್ರೀರಾಮ ಸೇವಾ ಸಮಿತಿ  ಅಧ್ಯಕ್ಷ ಮಹೇಶ್‌ ಭಟ್‌ ಚೂಂತಾರು ತಿಳಿಸಿದ್ದಾರೆ.

ಶ್ರೀ ರಾಮಚಂದ್ರಾಪುರ ಮಠದ ಅಧೀನ ಸಂಸ್ಥೆಯಾದ  ಚೊಕ್ಕಾಡಿಯ ಶ್ರೀ ರಾಮ ದೇವಾಲಯದಲ್ಲಿ ಲೋಕಕಲ್ಯಾಣಾರ್ಥವಾಗಿ  ನಿರಂತರ ರುದ್ರಪಠಣ ನಡೆಯಲಿದೆ. ಶಿವೋಪಾಸನೆಯ ಈ ಕಾರ್ಯದಲ್ಲಿ 24 ಗಂಟೆಗಳ ಕಾಲ ನಿರಂತರವಾಗಿ ರುದ್ರ ಪಠಣ ನಡೆಯಲಿದೆ. ಊರಿನ ಹಾಗೂ ಪರವೂರಿನ ರುದ್ರಾಧ್ಯಾಯಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ರುದ್ರ ಪಠಣ ನಡೆಸುವರು. ಅತ್ಯಂತ ವಿಶಿಷ್ಟ ಹಾಗೂ ಅಪರೂಪದ ಈ ಕಾರ್ಯಕ್ರಮಕ್ಕೆ ಸಿದ್ಧತೆಗಳು ಈಗಾಗಲೇ ಆರಂಭಗೊಂಡಿದೆ. ಮಾರ್ಚ್‌ 16 ರ ಸೂರ್ಯೋದಯದಿಂದ ಆರಂಭವಾಗಿ ಮಾರ್ಚ್‌ 17 ಸೂರ್ಯೋದಯದವರೆಗೆ ಈ ರುದ್ರ ಪಠಣ ನಡೆಯಲಿದೆ.

ಲೋಕಕಲ್ಯಾಣ ಹಾಗೂ ಶ್ರೀ ಕ್ಷೇತ್ರದ ಅಭಿವೃದ್ಧಿಯ ಸಂಕಲ್ಪದೊಂದಿಗೆ ನಡೆಯುವ ಈ ಕಾರ್ಯಕ್ರಮದಲ್ಲಿ ರುದ್ರ ಪಾರಾಯಣ ನಡೆಸುವ ಭಕ್ತರು ಚೊಕ್ಕಾಡಿಯ ಶ್ರೀ ರಾಮ ದೇವಾಲಯದ ಶ್ರೀರಾಮ ಸೇವಾ ಸಮಿತಿಯನ್ನು ಸಂಪರ್ಕ ಮಾಡಬಹುದು. ಅಂದು ರುದ್ರ ಪಠಣವು ಸೇವಾ ರೂಪದಲ್ಲಿ ನಡೆಯಲಿದ್ದು ಶ್ರೀ ದೇವತಾ ಕಾರ್ಯಗಳೆಲ್ಲವೂ ಸೇವಾ ರೂಪದಲ್ಲಿ ನಡೆಯಲಿದೆ ಎಂದು ಮಹೇಶ್‌ ಭಟ್‌ ಚೂಂತಾರು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬಕ್ರೀದ್‌ಗೂ ಮುನ್ನ ದೇಶದಲ್ಲಿ ಹೊಸ ಚರ್ಚೆ | “ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” — ಮುಸ್ಲಿಂ ಸಂಘಟನೆಗಳ ಬೇಡಿಕೆ

ಬಕ್ರೀದ್‌ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…

6 hours ago

ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ

ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…

8 hours ago

ಹವಾಮಾನ ವರದಿ | 27-05-2026 | ಮಳೆಗಾಲ ಆರಂಭ ಯಾವಾಗ..? ಇಂದು ಎಲ್ಲೆಲ್ಲಾ ಮಳೆ ಇದೆ…?

ರಾಜ್ಯದ ಹಲವೆಡೆ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…

8 hours ago

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

5 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

5 days ago