ಸುದ್ದಿಗಳು

ಚೊಕ್ಕಾಡಿಯ ಸತ್ಯಸಾಯಿ ವಿದ್ಯಾಕೇಂದ್ರದಲ್ಲಿ ವಿಶೇಷ ಉಪನ್ಯಾಸ | ಭಾರತದ ಯುವಸಮೂಹ ಜಾಗೃತವಾಗಿರಬೇಕಾದ್ದು ಅಗತ್ಯ | ಸುಬ್ರಹ್ಮಣ್ಯ ನಟ್ಟೋಜ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಭಾರತವನ್ನು ಹಾಳುಗೆಡಹುವುದಕ್ಕೆ ಪಾಕಿಸ್ಥಾನದಿಂದ ನಿರಂತರ ಪ್ರಯತ್ನ ನಡೆಯುತ್ತಿದೆ. ಹಾಗಾಗಿಯೇ ಇಲ್ಲಿನ ಯುವಸಮೂಹವನ್ನು ಗುರಿಯಾಗಿರಿಸಿಕೊಂಡು ಗಾಂಜಾ, ಹೆರಾಯಿನ್‍ಗಳು ಭಾರತದ ಗಡಿಯಿಂದ ಒಳನುಸುಳುತ್ತಿವೆ. ಇಂತಹ ಸಂದರ್ಭದಲ್ಲಿ ನಮ್ಮನ್ನು ನಾವು ಕಾಪಾಡಿಕೊಳ್ಳುವ ಮತ್ತು ದೇಶವನ್ನು ಉಳಿಸಿಕೊಳ್ಳುವ ಹೊಣೆಗಾರಿಕೆ ಪ್ರತಿಯೊಬ್ಬ ವಿದ್ಯಾರ್ಥಿಯ ಮೇಲೂ ಇದೆ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಹೇಳಿದರು.

Advertisement
ಅವರು ಸುಳ್ಯ ಸಮೀಪದ ಚೊಕ್ಕಾಡಿಯ ಸತ್ಯಸಾಯಿ ವಿದ್ಯಾಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ‘ರಾಷ್ಟ್ರಜಾಗೃತಿಯಲ್ಲಿ ವಿದ್ಯಾರ್ಥಿಗಳ ಜವಾಬ್ದಾರಿ’ ಎಂಬ ವಿಷಯದ ಬಗ್ಗೆ ಮಾತನಾಡಿದರು. ಬ್ರದರ್ಸ್ ಅಂಡ್ ಸಿಸ್ಟರ್ಸ್ ಅನ್ನುವ ಪದ ವಿವೇಕಾನಂದರು ಚಿಕಾಗೋ ಸಮ್ಮೇಳನದಲ್ಲಿ ಬಳಸುವ ಮೊದಲೂ ಅಸ್ತಿತ್ವದಲ್ಲಿತ್ತು. ಆದರೆ ವಿವೇಕಾನಂದರು ಬಳಸಿದ ಧ್ವನಿ, ಬಳಸಿದ ಸಂದರ್ಭ ಹಾಗೂ ಭಾವನೆ ಎಲ್ಲರನ್ನೂ ಚಕಿತಗೊಳಿಸಿತು. ಇದು ಕೇವಲ ವಿವೇಕಾನಂದರದಷ್ಟೇ ಅಲ್ಲ, ಭಾರತದ ಹೆಚ್ಚುಗಾರಿಕೆ. ಇಂತಹ ಭಾವಪೂರ್ಣ, ಧ್ವನಿಯುಕ್ತ ಮಾತುಗಳ ಹಿಂದೆ ಈ ಮಣ್ಣಿನ ಸಂಸ್ಕಾರ ಅಡಗಿದೆ. ಹಾಗಾಗಿ ಭಾರತದ ಹಿರಿಮೆಯನ್ನು ಯುವಸಮೂಹ ಅರ್ಥ ಮಾಡಿಕೊಂಡು ಹೆಮ್ಮೆಯಿಂದ ಬಾಳಬೇಕು ಎಂದು ಹೇಳಿದರು.

ವೇದಿಕೆಯಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಗಣೇಶ್ ಪ್ರಸಾದ್ ಎ, ಸಾರ್ವಜನಿಕ ಸಂಪರ್ಕಾಧಿಕಾರಿ ರಾಕೇಶ ಕುಮಾರ್ ಕಮ್ಮಜೆ, ನೆಲ್ಲಿಕಟ್ಟೆ ಅಂಬಿಕಾ ಪದವಿಪಪೂರ್ವ ವಿದ್ಯಾಲಯದ ಪ್ರಾಚಾರ್ಯ ಸತ್ಯಜಿತ್ ಉಪಾಧ್ಯಾಯ ಎಂ. ಉಪಸ್ಥಿತರಿದ್ದರು.

ಸತ್ಯಸಾಯಿ ವಿದ್ಯಾಸಂಸ್ಥೆಯ ಮುಖ್ಯೋಪಾಧ್ಯಾಯ ಗುಣಶೇಖರ ಭಟ್‌ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಕೊಳೆರೋಗ | ಸಿಎಂ ಜೊತೆ ಶಾಸಕ ಅಶೋಕ್ ಕುಮಾರ್ ರೈ ಚರ್ಚೆ

ದ ಕ ಜಿಲ್ಲೆಯಲ್ಲಿ ಅಡಿಕೆಗೆ ಕೊಳೆರೋಗ ಭಾದಿಸಿದ್ದು ಇದರಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ…

2 hours ago

ಹವಾಮಾನ ವರದಿ | 14-08-2025 | ಆ.20 ರವರೆಗೂ ಮಳೆ -ತುಂತುರು ಮಳೆ

15.08.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

2 hours ago

ಸಗಣಿಯಿಂದ 5500 ಕಿಮೀ ಮಾಲಿನ್ಯ ರಹಿತ ಪ್ರಯಾಣ..!

ಒಂದು ಹಸುವಿನ ಸಗಣಿಯಿಂದ ಪ್ರತಿ ವರ್ಷ 225 ಲೀಟರ್ ಪೆಟ್ರೋಲ್‌ಗೆ ಸಮಾನವಾದ ಮೀಥೇನ್…

9 hours ago

ಬಾಗಿಲು ಇಲ್ಲದ ಮನೆಯಂತಾದ ಕನ್ನಡ ಸ್ಥಿತಿ : ರಾಘವೇಶ್ವರ ಶ್ರೀ

ಕನ್ನಡದ ಸ್ಥಿತಿ ಇಂದು ಬೇಲಿ ಇಲ್ಲದ ತೋಟದಂತೆ, ಬಾಗಿಲಿಲ್ಲದ ಮನೆಯಂತಾಗಿದ್ದು, ನಾಲಿಗೆ ಶುದ್ಧೀಕರಣ,…

10 hours ago

ಅಕ್ರಮ ಅಡಿಕೆ ಸಾಗಾಟ ಪತ್ತೆ | 466 ಚೀಲ ಅಡಿಕೆ ವಶಕ್ಕೆ ಪಡೆದ ಅಸ್ಸಾಂ ರೈಫಲ್ಸ್‌

ಮಿಜೋರಾಂನ ಚಾಂಫೈನಲ್ಲಿ ಅಸ್ಸಾಂ ರೈಫಲ್ಸ್ 466 ಚೀಲ ಅಡಿಕೆಯನ್ನು ವಶಕ್ಕೆ ಪಡೆದಿದೆ. ಈ…

18 hours ago

ಆ.15 ರಿಂದ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ನಿಷೇಧಿಸಿ ಸರ್ಕಾರ ಆದೇಶ

ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಇರುವ ದೇವಾಲಯಗಳಲ್ಲಿ ಕಡ್ಡಾಯವಾಗಿ ನೀರಿನ ಬಾಟಲ್ ಸೇರಿದಂತೆ ಪ್ಲಾಸ್ಟಿಕ್ …

20 hours ago