Advertisement
ಸುದ್ದಿಗಳು

ಚೊಕ್ಕಾಡಿಯ ಸತ್ಯಸಾಯಿ ವಿದ್ಯಾಕೇಂದ್ರದಲ್ಲಿ ವಿಶೇಷ ಉಪನ್ಯಾಸ | ಭಾರತದ ಯುವಸಮೂಹ ಜಾಗೃತವಾಗಿರಬೇಕಾದ್ದು ಅಗತ್ಯ | ಸುಬ್ರಹ್ಮಣ್ಯ ನಟ್ಟೋಜ |

Share

ಭಾರತವನ್ನು ಹಾಳುಗೆಡಹುವುದಕ್ಕೆ ಪಾಕಿಸ್ಥಾನದಿಂದ ನಿರಂತರ ಪ್ರಯತ್ನ ನಡೆಯುತ್ತಿದೆ. ಹಾಗಾಗಿಯೇ ಇಲ್ಲಿನ ಯುವಸಮೂಹವನ್ನು ಗುರಿಯಾಗಿರಿಸಿಕೊಂಡು ಗಾಂಜಾ, ಹೆರಾಯಿನ್‍ಗಳು ಭಾರತದ ಗಡಿಯಿಂದ ಒಳನುಸುಳುತ್ತಿವೆ. ಇಂತಹ ಸಂದರ್ಭದಲ್ಲಿ ನಮ್ಮನ್ನು ನಾವು ಕಾಪಾಡಿಕೊಳ್ಳುವ ಮತ್ತು ದೇಶವನ್ನು ಉಳಿಸಿಕೊಳ್ಳುವ ಹೊಣೆಗಾರಿಕೆ ಪ್ರತಿಯೊಬ್ಬ ವಿದ್ಯಾರ್ಥಿಯ ಮೇಲೂ ಇದೆ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಹೇಳಿದರು.

ಅವರು ಸುಳ್ಯ ಸಮೀಪದ ಚೊಕ್ಕಾಡಿಯ ಸತ್ಯಸಾಯಿ ವಿದ್ಯಾಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ‘ರಾಷ್ಟ್ರಜಾಗೃತಿಯಲ್ಲಿ ವಿದ್ಯಾರ್ಥಿಗಳ ಜವಾಬ್ದಾರಿ’ ಎಂಬ ವಿಷಯದ ಬಗ್ಗೆ ಮಾತನಾಡಿದರು. ಬ್ರದರ್ಸ್ ಅಂಡ್ ಸಿಸ್ಟರ್ಸ್ ಅನ್ನುವ ಪದ ವಿವೇಕಾನಂದರು ಚಿಕಾಗೋ ಸಮ್ಮೇಳನದಲ್ಲಿ ಬಳಸುವ ಮೊದಲೂ ಅಸ್ತಿತ್ವದಲ್ಲಿತ್ತು. ಆದರೆ ವಿವೇಕಾನಂದರು ಬಳಸಿದ ಧ್ವನಿ, ಬಳಸಿದ ಸಂದರ್ಭ ಹಾಗೂ ಭಾವನೆ ಎಲ್ಲರನ್ನೂ ಚಕಿತಗೊಳಿಸಿತು. ಇದು ಕೇವಲ ವಿವೇಕಾನಂದರದಷ್ಟೇ ಅಲ್ಲ, ಭಾರತದ ಹೆಚ್ಚುಗಾರಿಕೆ. ಇಂತಹ ಭಾವಪೂರ್ಣ, ಧ್ವನಿಯುಕ್ತ ಮಾತುಗಳ ಹಿಂದೆ ಈ ಮಣ್ಣಿನ ಸಂಸ್ಕಾರ ಅಡಗಿದೆ. ಹಾಗಾಗಿ ಭಾರತದ ಹಿರಿಮೆಯನ್ನು ಯುವಸಮೂಹ ಅರ್ಥ ಮಾಡಿಕೊಂಡು ಹೆಮ್ಮೆಯಿಂದ ಬಾಳಬೇಕು ಎಂದು ಹೇಳಿದರು.

ವೇದಿಕೆಯಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಗಣೇಶ್ ಪ್ರಸಾದ್ ಎ, ಸಾರ್ವಜನಿಕ ಸಂಪರ್ಕಾಧಿಕಾರಿ ರಾಕೇಶ ಕುಮಾರ್ ಕಮ್ಮಜೆ, ನೆಲ್ಲಿಕಟ್ಟೆ ಅಂಬಿಕಾ ಪದವಿಪಪೂರ್ವ ವಿದ್ಯಾಲಯದ ಪ್ರಾಚಾರ್ಯ ಸತ್ಯಜಿತ್ ಉಪಾಧ್ಯಾಯ ಎಂ. ಉಪಸ್ಥಿತರಿದ್ದರು.

ಸತ್ಯಸಾಯಿ ವಿದ್ಯಾಸಂಸ್ಥೆಯ ಮುಖ್ಯೋಪಾಧ್ಯಾಯ ಗುಣಶೇಖರ ಭಟ್‌ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 07-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು : ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ,

08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…

4 hours ago

ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ

ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…

10 hours ago

ಪರಿಸರ ಸಂರಕ್ಷಣೆಯಿಂದ ಮಾತ್ರ ಸುಸ್ಥಿರ ಆರೋಗ್ಯ ಸಾಧ್ಯ

ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…

10 hours ago

ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…

10 hours ago

ರೈತರಿಗೆ ಕನಿಷ್ಠ ಬೆಂಬಲ ಬೆಲೆ ಸೌಲಭ್ಯ ಘೋಷಣೆ : ರೈತರ ಆರ್ಥಿಕ ಭದ್ರತೆಗೆ ಕೇಂದ್ರ ಬದ್ಧ

ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…

10 hours ago

ವನ್ಯಜೀವಿಗಳ ಸಂತಾನ ನಿಯಂತ್ರಣಕ್ಕೆ ತಜ್ಞರ ಚರ್ಚೆ ಅಗತ್ಯ

ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ಆನೆ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಸಂತಾನ…

10 hours ago