ಕರ್ನಾಟಕದ ಚೋಳರ ರಾಜ್ಯವನ್ನು ಸಂರಕ್ಷಿಸಲು ಸ್ಥಳೀಯರ ಹಾಗೂ ಇತಿಹಾಸಕಾರರ ಒತ್ತಾಯ

January 10, 2022
3:32 PM

ಪ್ರಸಿದ್ಧ ಪಾರಂಪರಿಕ ಕೇಂದ್ರ ತಲಕಾಡು ಬಳಿಯ ಐತಿಹಾಸಿಕ ದೇವಾಲಯಗಳ ಬಗ್ಗೆ ನಿರ್ಲಕ್ಷ್ಯ ವಹಿಸಲಾಗಿದೆ. ಚೋಳರ ಕಾಲಕ್ಕೆ ಸೇರಿದ ದೇವಾಲಯಗಳು ಡಿಸೆಂಬರ್‌ನಲ್ಲಿ ನಿರ್ಲಕ್ಷಿಸಲ್ಟಟ್ಟು ಶಿಥಿಲಗೊಂಡಿರುವುದು ಕಂಡುಬಂದಿದ್ದು, ಅವುಗಳನ್ನು ಸಂಪೂರ್ಣ ನಾಶವಾಗದಂತೆ ರಕ್ಷಿಸಬೇಕು ಎಂದು ಆರೋಪಿಸಿ ಪ್ರವಾಸಿಗರು, ಸ್ಥಳೀಯರು ಮತ್ತು ಇತಿಹಾಸ ಆಸಕ್ತರು ರಾಜ್ಯ ಸರ್ಕಾರ ಮತ್ತು ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಪುರಾತತ್ವ ಇಲಾಖೆಗಳ ಗಮನಕ್ಕೆ ತಂದಿದ್ದಾರೆ.

ತಲಕಾಡಿನಿಂದ ಸುಮಾರು 10ಕಿ.ಮೀ ಮತ್ತು ಮೈಸೂರಿನಿಂದ 60 ಕಿ.ಮೀ ದೂರದಲ್ಲಿರುವ ತಡಿಮಲಂಗಿ ಮತ್ತು ಕಲಿಯೂರು ಗ್ರಾಮಗಳಲ್ಲಿ ಚೋಳರ ಕಾಲದಲ್ಲಿ ನಿರ್ಮಿಸಲಾದ ದೇವಾಲಯಗಳು ಈಗ ಧೂಳಿಪಟವಾಗುತ್ತಿದೆ. ಈ ದೇವಾಲಯಗಳ ಬಗ್ಗೆ ಹಳ್ಳಿಗರಿಗೂ ಈ ರಚನೆಗಳ ಬಗ್ಗೆ ಕಡಿಮೆ ಮಾಹಿತಿ ತಿಳಿದಿದೆ. ಇನ್ನು ಕಲಿಯೂರು ಗ್ರಾಮದಲ್ಲಿ ವೀರಗಲ್ಲು ಪಾಳು ಬಿದ್ದಿದೆ, ಪುರಾತತ್ವ ಪ್ರಮುಖ್ಯತೆಯನ್ನು ಅರಿತು ಬೆಂಗಳೂರು ವಸ್ತು ಸಂಗ್ರಹಾಲಯಕ್ಕೆ ಸ್ಥಳಾಂತರಿಸಬೇಕು ಎಂದು ಮೈಸೂರಿನ ಇತಿಹಾಸ ಪ್ರೇಮಿ ಗೋಪಾಲ್ ಬಾಲಕೃಷ್ಣನ್ ಹೇಳಿದ್ದಾರೆ.

ಐತಿಹಾಸಿಕ ಪ್ರಾಮುಖ್ಯತೆಯನ್ನು ಹೊಂದಿರುವ ಯಾವುದೇ ಆಸ್ತಿಯನ್ನು ಸಮೀಕ್ಷೆಗೆ ಒಳಪಡಿಸಲಾಗುತ್ತದೆ ಮತ್ತು ಸಂರಕ್ಷರಣೆಗಾಗಿ ಪಟ್ಟಿಗೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ಪಟ್ಟಿಮಾಡಲಾಗುತ್ತದೆ. ಈ ಸಂದರ್ಭದಲ್ಲಿಯೂ ಇದನ್ನು ಮಾಡಬಹುದು, ಕೇಂದ್ರದಿಂದ ಹಣದ ಲಭ್ಯತೆಗೆ ಒಳಪಟ್ಟಿರುತ್ತದೆ ಎಂದು ಐಎಎಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ
August 26, 2026
10:44 AM
by: ದ ರೂರಲ್ ಮಿರರ್.ಕಾಂ
ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ
August 26, 2026
6:52 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ
August 25, 2026
10:36 PM
by: ದ ರೂರಲ್ ಮಿರರ್.ಕಾಂ
ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ
August 25, 2026
10:30 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror