Opinion

ವಿದೇಶಿ ಗೋವುಗಳ ತಳಿಯ ಹಾಲು ಮಕ್ಕಳಿಗೆ ಒಳ್ಳೆಯದಲ್ಲ..| ಆಯಾ ಪ್ರದೇಶದ ಹಸುಗಳ ಹಾಲು ಮಕ್ಕಳಿಗೆ ಅತೀ ಶ್ರೇಷ್ಠ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಗುಜರಾತ್‌ನ ಜುಮ್ನಾರ್ಗ ಮೂಲದ ಆಯುರ್ವೇದ ಯೂನಿವರ್ಸಿಟಿಯ(Ayurvedic University) ಖ್ಯಾತ ಸಂಶೋಧಕ ಡಾ. ಹಿತೇಶ್ ಜಾನಿ, ಗೋವುಗಳ(Cattle) ಕುರಿತಂತೆ ನಡೆಸಿದ ಸಂಶೋಧನೆಯ(Research) ವರದಿ ವಿಶ್ವವ್ಯಾಪಿ ಚರ್ಚೆಯಾಗುತ್ತಿದೆ. ವಿಶ್ವದ ಖ್ಯಾತ ಸಂಶೋಧಕರು ಈ ಮಾಹಿತಿಯನ್ನು ಕಂಡು ಒಂದು ಕ್ಷಣ ಹೌಹಾರಿದ್ದಾರೆ. ಆ ವರದಿಯಲ್ಲಿ ವಿದೇಶಿ ತಳಿಗಳ ಹಾಲಿನಲ್ಲಿ ಬಿಸಿಎಂ-7 ಎಂಬ ರಾಸಾಯನಿಕ(Chemical) ಅಂಶವಿದ್ದು, ಇದರ ಸೇವನೆಯಿಂದ ದೇಹ ರೋಗಗಳ(Disease) ಗೂಡಾಗುತ್ತಿದೆ. ಅದರಲ್ಲೂ ಹೆಚ್ಚಾಗಿ ಮಕ್ಕಳ ಆರೋಗ್ಯದ(Children health) ಮೇಲೆ ಇದು ವ್ಯತಿರಿಕ್ತ ಪರಿಣಾಮ ಉಂಟುಮಾಡುತ್ತಿದೆ. ಸಣ್ಣ ವಯಸ್ಸಿನಲ್ಲಿಯೇ ದೊಡ್ಡ ರೋಗಗಳಿಗೆ ಮಕ್ಕಳು ತುತ್ತಾಗುತ್ತಿದ್ದಾರೆ.

Advertisement

ವಯಸ್ಸಿಗೆ ಮೀರಿದ ದೇಹ ರಚನೆಯೂ ಸೇರಿ ಸಾಕಷ್ಟು ಕಿವಿ ಹಾಗೂ ಮಿದುಳಿಗೆ ಸಂಬಂಧಿಸಿದ ರೋಗಗಳಿಗೆ ಮಕ್ಕಳು ಮತ್ತು ವಯಸ್ಕರು ಒಳಗಾಗುತ್ತಿದ್ದಾರೆ. ಅದೇ ಭಾರತೀಯ ಗೋತಳಿಗಳ ಹಾಲಿನ ಸೇವನೆಯು ಎಲ್ಲ ರೀತಿಯಲ್ಲಿಯೂ ಆರೋಗ್ಯಕ್ಕೆ ಅತ್ಯುತ್ತಮವಾಗಿದ್ದು, ಇದರ ಹಾಲಿನಲ್ಲಿ ಯಾವುದೇ ರೀತಿಯ ಹಾನಿಕಾರಕ ಅಂಶ ಕಂಡುಬರುವುದಿಲ್ಲ.

ಹಾಗೆಯೇ, ನಮ್ಮ ನಮ್ಮ ಕ್ಷೇತ್ರದ ತಳಿಯ ಗೋವುಗಳು ಹಾಲು ಆಯಾ ಪ್ರದೇಶದ ಸಿಗುವ ಹಾಲು ಮಕ್ಕಳಿಗೆ ಅತೀ ಶ್ರೇಷ್ಠ. ಇದು ಭಾರತೀಯರಿಗೆ ಪಕೃತಿ ನೀಡಿದ ಕೊಡುಗೆ. ಉದಾಹರಣೆ, ಕರ್ನಾಟಕ-ಮಹಾರಾಷ್ಟ್ರ ಮದ್ಯ ಸಿಗುವ ಕಿಲಾರ, ಮಲ್ಲಾಡ ಗಿಡ್ಡ, ಮೈಸೂರು ಹಳ್ಳಿಕಾರ, ಅಮೃತಮಹಲ, ಹೈದರಾಬಾದ್-ಕರ್ನಾಟಕ ದೇವಣಿ, ಗುಜರಾತ ಗೀರ, ರಾಜಸ್ಥಾನದ ಕಾಂಗ್ರಿಜ, ಪಂಗನೂರ್, ಶಾಹಿವಾಲ, ಶಿಂದಿ, ತಾರಪಾರಕರ, ವೆಂಚುರ, ರಾಟಿ ಇಂತಹ ಹಲವಾರು ದೇಶಿಯ ಗೋತಳಿ ನಮ್ಮನ್ನು ಅನಾದಿ ಕಾಲದಿಂದ ರಕ್ಷಣೆ ಮಾಡಿಕೊಂಡು ಬಂದಿದೆ. ಯಾವಾಗ ಮಿಶ್ರ ತಳಿಯ ಉಗಮವಾಯಿತೋ ಅಲ್ಲಿಂದ ಆರೋಗ್ಯ, ಆರ್ಥಿಕ, ಸಂಸ್ಕೃತಿಕ ಅಧಃಪತನ ಆರಂಭವಾಯಿತು. ಕಾರಣ ನಮ್ಮ ನಮ್ಮ ಕ್ಷೇತ್ರದಲ್ಲಿ ಗೋತಳಿ ಸಾಕಿ ಪ್ರಾಕೃತಿಕ ಸಮತೋಲನ ಕಾಯ್ದುಕೊಳ್ಳಲು ಮತ್ತು ವೈವಿಧ್ಯಮಯ ಜೀವ ವೈವಿಧ್ಯತೆ ಕಾಪಾಡುವ ಜವಾಬ್ದಾರಿ ನಮ್ಮದಲ್ಲವೆ? ಆ ಮೂಲಕ ಸ್ಥಳೀಯ ವೈವಿಧ್ಯಮಯ ಗೋತಳಿ ಬೆಳೆಸಿ.. ಮಕ್ಕಳು ಹಾಗೂ ನಮ್ಮೆಲ್ಲರ ಆರೋಗ್ಯ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಸಾಗೋಣ….

ಬರಹ :
ಕೆ.ಎನ್.ಶೈಲೇಶ್ ಹೊಳ್ಳ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಇಳಿಮುಖ

ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವೆಡೆ ಅಬ್ಬರಿಸಿದ್ದ ಮಳೆ ಇಂದು ಇಳಿಮುಖವಾಗಿದೆ. ಕರಾವಳಿ…

7 hours ago

ವಿದ್ಯಾರ್ಥಿಗಳ ಓದಿನ ವಿಷಯದ ಆಯ್ಕೆ ಹೇಗಿರಬೇಕು..?

ಹಲವಾರು ವಿದ್ಯಾರ್ಥಿಗಳಿಗೆ, ಪೋಷಕರಿಗೆ ತಮ್ಮ ಮಕ್ಕಳು ಎಸ್‌ಎಸ್‌ ಎಲ್‌ಸಿ , ಪಿಯುಸಿ ಆದ…

7 hours ago

ರೈತರು ಗಮನಿಸಿ | ಭತ್ತದ ಬೆಳೆಗೆ ಫಸಲ್‌ ಭಿಮಾ ಯೋಜನೆ ವಿಮಾ ಪ್ರೀಮಿಯಂ ಪಾವತಿ ಪ್ರಾರಂಭ

ಭತ್ತದ ಬೆಳೆ ಬೆಳೆಯುವ ರೈತರಿಗೆ ಪ್ರಧಾನಮಂತ್ರಿ ಫಸಲ್‌ ಭಿಮಾ ಯೋಜನೆಯ ವಿಮಾ ಪ್ರೀಮಿಯಂ…

7 hours ago

ಕೇರಳದ ವಯನಾಡಿನಲ್ಲಿ ಧಾರಾಕಾರ ಮಳೆ | ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ

ಕೇರಳದ ವಯನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ  ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿಯಲ್ಲಿರುವ…

7 hours ago

ಪ್ಲೈಓವರ್‌ ನಿರ್ಮಾಣದ ಬಳಿಕ ಹೇಗಿದೆ ಕಲ್ಲಡ್ಕ..?

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕದಲ್ಲಿ ಪ್ಲೈಓವರ್‌ ಮೂಲಕ ವಾಹನ ಓಡಾಟ ಆರಂಭವಾಗಿದೆ. ಹೀಗಾಗಿ…

8 hours ago

ಗೇರು ವಾಣಿಜ್ಯ ಬೆಳೆ ಗ್ರಾಮೀಣ ಭಾಗದ ರೈತರ ಮೂಲಸಂಪತ್ತು

‌ ಗೇರು ಒಂದು ವಾಣಿಜ್ಯ ಬೆಳೆಯಾಗಿದ್ದು ಇದು ಗ್ರಾಮೀಣ ಭಾಗದ ರೈತರ ಮೂಲಸಂಪತ್ತು.…

8 hours ago