Advertisement
Opinion

ವಿದೇಶಿ ಗೋವುಗಳ ತಳಿಯ ಹಾಲು ಮಕ್ಕಳಿಗೆ ಒಳ್ಳೆಯದಲ್ಲ..| ಆಯಾ ಪ್ರದೇಶದ ಹಸುಗಳ ಹಾಲು ಮಕ್ಕಳಿಗೆ ಅತೀ ಶ್ರೇಷ್ಠ |

Share

ಗುಜರಾತ್‌ನ ಜುಮ್ನಾರ್ಗ ಮೂಲದ ಆಯುರ್ವೇದ ಯೂನಿವರ್ಸಿಟಿಯ(Ayurvedic University) ಖ್ಯಾತ ಸಂಶೋಧಕ ಡಾ. ಹಿತೇಶ್ ಜಾನಿ, ಗೋವುಗಳ(Cattle) ಕುರಿತಂತೆ ನಡೆಸಿದ ಸಂಶೋಧನೆಯ(Research) ವರದಿ ವಿಶ್ವವ್ಯಾಪಿ ಚರ್ಚೆಯಾಗುತ್ತಿದೆ. ವಿಶ್ವದ ಖ್ಯಾತ ಸಂಶೋಧಕರು ಈ ಮಾಹಿತಿಯನ್ನು ಕಂಡು ಒಂದು ಕ್ಷಣ ಹೌಹಾರಿದ್ದಾರೆ. ಆ ವರದಿಯಲ್ಲಿ ವಿದೇಶಿ ತಳಿಗಳ ಹಾಲಿನಲ್ಲಿ ಬಿಸಿಎಂ-7 ಎಂಬ ರಾಸಾಯನಿಕ(Chemical) ಅಂಶವಿದ್ದು, ಇದರ ಸೇವನೆಯಿಂದ ದೇಹ ರೋಗಗಳ(Disease) ಗೂಡಾಗುತ್ತಿದೆ. ಅದರಲ್ಲೂ ಹೆಚ್ಚಾಗಿ ಮಕ್ಕಳ ಆರೋಗ್ಯದ(Children health) ಮೇಲೆ ಇದು ವ್ಯತಿರಿಕ್ತ ಪರಿಣಾಮ ಉಂಟುಮಾಡುತ್ತಿದೆ. ಸಣ್ಣ ವಯಸ್ಸಿನಲ್ಲಿಯೇ ದೊಡ್ಡ ರೋಗಗಳಿಗೆ ಮಕ್ಕಳು ತುತ್ತಾಗುತ್ತಿದ್ದಾರೆ.

ವಯಸ್ಸಿಗೆ ಮೀರಿದ ದೇಹ ರಚನೆಯೂ ಸೇರಿ ಸಾಕಷ್ಟು ಕಿವಿ ಹಾಗೂ ಮಿದುಳಿಗೆ ಸಂಬಂಧಿಸಿದ ರೋಗಗಳಿಗೆ ಮಕ್ಕಳು ಮತ್ತು ವಯಸ್ಕರು ಒಳಗಾಗುತ್ತಿದ್ದಾರೆ. ಅದೇ ಭಾರತೀಯ ಗೋತಳಿಗಳ ಹಾಲಿನ ಸೇವನೆಯು ಎಲ್ಲ ರೀತಿಯಲ್ಲಿಯೂ ಆರೋಗ್ಯಕ್ಕೆ ಅತ್ಯುತ್ತಮವಾಗಿದ್ದು, ಇದರ ಹಾಲಿನಲ್ಲಿ ಯಾವುದೇ ರೀತಿಯ ಹಾನಿಕಾರಕ ಅಂಶ ಕಂಡುಬರುವುದಿಲ್ಲ.

ಹಾಗೆಯೇ, ನಮ್ಮ ನಮ್ಮ ಕ್ಷೇತ್ರದ ತಳಿಯ ಗೋವುಗಳು ಹಾಲು ಆಯಾ ಪ್ರದೇಶದ ಸಿಗುವ ಹಾಲು ಮಕ್ಕಳಿಗೆ ಅತೀ ಶ್ರೇಷ್ಠ. ಇದು ಭಾರತೀಯರಿಗೆ ಪಕೃತಿ ನೀಡಿದ ಕೊಡುಗೆ. ಉದಾಹರಣೆ, ಕರ್ನಾಟಕ-ಮಹಾರಾಷ್ಟ್ರ ಮದ್ಯ ಸಿಗುವ ಕಿಲಾರ, ಮಲ್ಲಾಡ ಗಿಡ್ಡ, ಮೈಸೂರು ಹಳ್ಳಿಕಾರ, ಅಮೃತಮಹಲ, ಹೈದರಾಬಾದ್-ಕರ್ನಾಟಕ ದೇವಣಿ, ಗುಜರಾತ ಗೀರ, ರಾಜಸ್ಥಾನದ ಕಾಂಗ್ರಿಜ, ಪಂಗನೂರ್, ಶಾಹಿವಾಲ, ಶಿಂದಿ, ತಾರಪಾರಕರ, ವೆಂಚುರ, ರಾಟಿ ಇಂತಹ ಹಲವಾರು ದೇಶಿಯ ಗೋತಳಿ ನಮ್ಮನ್ನು ಅನಾದಿ ಕಾಲದಿಂದ ರಕ್ಷಣೆ ಮಾಡಿಕೊಂಡು ಬಂದಿದೆ. ಯಾವಾಗ ಮಿಶ್ರ ತಳಿಯ ಉಗಮವಾಯಿತೋ ಅಲ್ಲಿಂದ ಆರೋಗ್ಯ, ಆರ್ಥಿಕ, ಸಂಸ್ಕೃತಿಕ ಅಧಃಪತನ ಆರಂಭವಾಯಿತು. ಕಾರಣ ನಮ್ಮ ನಮ್ಮ ಕ್ಷೇತ್ರದಲ್ಲಿ ಗೋತಳಿ ಸಾಕಿ ಪ್ರಾಕೃತಿಕ ಸಮತೋಲನ ಕಾಯ್ದುಕೊಳ್ಳಲು ಮತ್ತು ವೈವಿಧ್ಯಮಯ ಜೀವ ವೈವಿಧ್ಯತೆ ಕಾಪಾಡುವ ಜವಾಬ್ದಾರಿ ನಮ್ಮದಲ್ಲವೆ? ಆ ಮೂಲಕ ಸ್ಥಳೀಯ ವೈವಿಧ್ಯಮಯ ಗೋತಳಿ ಬೆಳೆಸಿ.. ಮಕ್ಕಳು ಹಾಗೂ ನಮ್ಮೆಲ್ಲರ ಆರೋಗ್ಯ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಸಾಗೋಣ….

ಬರಹ :
ಕೆ.ಎನ್.ಶೈಲೇಶ್ ಹೊಳ್ಳ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…

11 hours ago

ಹುಬ್ಬಳ್ಳಿಯಲ್ಲಿ ಹಲಸು ಮೇಳಕ್ಕೆ ಚಾಲನೆ – 50ಕ್ಕೂ ಹೆಚ್ಚು ಮಳಿಗೆಗಳು, ಹಲಸಿನ ಬಿರಿಯಾನಿಯಿಂದ ಕಬಾಬ್‌ವರೆಗೆ ಸವಿಯುವ ಅವಕಾಶ

ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…

11 hours ago

ರಾಜ್ಯಾದ್ಯಂತ ಆರ್ಭಟಿಸುತ್ತಿರುವ ವರುಣ – ಭದ್ರಾ-ನೇತ್ರಾವತಿ ಅಪಾಯದ ಮಟ್ಟ ಮೀರಿ ಪ್ರವಾಹ

ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರಿ ಮಳೆ ಮುಂದುವರಿದಿದ್ದು, ಭದ್ರಾ ಹಾಗೂ ನೇತ್ರಾವತಿ, ಕುಮಾರಧಾರಾ…

11 hours ago

ಶಿರಾಡಿ ಘಾಟ್‌ನಲ್ಲಿ ಭೂಕುಸಿತ – ರೈಲು ಸಂಚಾರಕ್ಕೆ ತಾತ್ಕಾಲಿಕ ಅಡ್ಡಿ

ಶಿರಾಡಿ ಘಾಟ್‌ನ ಎಡಕುಮರಿ–ಶಿರಿಬಾಗಿಲು ನಡುವೆ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಪರಿಹಾರ…

12 hours ago

ಮೊಬೈಲ್ ನೋಡುತ್ತಾ ಊಟ ಮಾಡಬೇಡಿ, ಶಿಸ್ತಿನ ಜೀವನವೇ ಆರೋಗ್ಯದ ರಹಸ್ಯ – ರಾಘವೇಶ್ವರ ಶ್ರೀ

ಆಹಾರ, ನಿದ್ರೆ ಮತ್ತು ಬ್ರಹ್ಮಚರ್ಯ ಸಮತೋಲನದಲ್ಲಿದ್ದಾಗ ಮಾತ್ರ ಆರೋಗ್ಯ ಹಾಗೂ ಆಧ್ಯಾತ್ಮಿಕ ಪ್ರಗತಿ…

23 hours ago

ಭಾರೀ ಮಳೆಯ ಎಚ್ಚರಿಕೆ | ಕರಾವಳಿ ಕರ್ನಾಟಕದಲ್ಲಿ ಅತಿ ಭಾರೀ ಮಳೆ – ಪ್ರವಾಹ- ಭೂಕುಸಿತದ ಎಚ್ಚರಿಕೆ

ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡು ಕರ್ನಾಟಕ ಹಾಗೂ ಕೇರಳದಲ್ಲಿ ಇಂದು ಭಾರೀ ಮಳೆಯ…

1 day ago