ಅನುಕ್ರಮ

ಚಿಲಿಪಿಲಿ | ಈ ಜಾಗದ ಒಡೆಯ ಯಾರೆಂದು ಬಲ್ಲಿರೇನು? |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ತನ್ನ ಸ್ವರದಿಂದ ಸುತ್ತಮುತ್ತಲು ಪರಿಚಿತವಾಗಿರುವ ಹಕ್ಕಿ ಈ ಗೊರವಂಕ, ಮೈನಾ(Common Myna, Indian Myna) ಎಂಬಿತ್ಯಾದಿ ಹೆಸರುಗಳಿಂದ ಗುರುತಿಸಿಕೊಳ್ಳುವುದು. ಈ ಹಕ್ಕಿಯ ಮೂಲ ಏಶಿಯಾ. ಸಾಮಾನ್ಯವಾಗಿ ಭಾರತ, ಇರಾನ್, ಕಜಖಸ್ತಾನದಿಂದ ಮಲೇಶಿಯ ಹಾಗೂ ಚೀನಾದಲ್ಲಿ ಕಂಡುಬರುವುದಾದರೂ ಪ್ರಪಂಚದ ಇನ್ನಿತರ ಪ್ರದೇಶಗಳಲ್ಲೂ ಇದರ ವಾಸ್ತವ್ಯ ವಿಸ್ತರಿಸಿದೆ.

Advertisement
Advertisement

ಕಪ್ಪಗಿನ ಮಿರುಗುವ. ಮೈ ಬಣ್ಣ, ಚೆಂದದ, ಗಟ್ಟಿಯಾದ ಕೇಸರಿ ಕೊಕ್ಕು, ಕಣ್ಣಿನ ಸುತ್ತ ಕೇಸರಿಯ ವೃತ್ತ, ಕಣ್ಣಿನ ಕೆಳಭಾಗದಲ್ಲಿ ಹಾಗೂ ಹಿಂಬದಿ ಅರಶಿನ ಬಣ್ಣದ ಚಿತ್ತಾರ ಕಾಲುಗುರಿನ ಬಣ್ಣವೂ ಕೇಸರಿ ‌ರೆಕ್ಕೆಯ ಕೆಳಭಾಗದಲ್ಲಿ ಸಣ್ಣಕಿರುವ ಬಿಳಿಯ ಬಣ್ಣದ ಮಚ್ಚೆಯಂತ ಪುಟ್ಟ ಪುಕ್ಕಗಳು ಇದು ಗೊರವಾಂಕ ಹಕ್ಕಿ. ಈ ಹಕ್ಕಿಯು ಸುಮಾರು 29 ಸೆ.ಮೀ ನಷ್ಟು ಉದ್ದವಾಗಿರುತ್ತವೆ.  ಸಂಸ್ಕೃತ ದಲ್ಲಿ ಶಾರಿಕಾ, ಸಾರಿಕಾ ಗೋರಾಟಿಕಾ,ತೆಲುಗಿನಲ್ಲಿ ಗೊರಿಂಕಾ ಎಂದೂ, ಹಲಸಿನ ಹಕ್ಕಿ, ಉಣ್ಣೆ ಗೊರವಾ, ಕಾಮಳ್ಳಿ ಹಕ್ಕಿ, ಪೀತ ನೇತ್ರ ಮೊದಲಾದ ಹೆಸರುಗಳಿಂದ ಗುರುತಿಸಿ ಕೊಂಡಿದೆ.ಜನವಸತಿ ಪ್ರದೇಶದಲ್ಲೇ ಹೆಚ್ಚಾಗಿ ಇರ ಬಯಸುವ ಹಕ್ಕಿ ಇದಾಗಿದೆ. ಭಯಂಕರ ಸ್ವರದ ಹಕ್ಕಿ ಇದು. ಎಲ್ಲಿದೆಯೋ ಅಲ್ಲಿ ದೊಡ್ಡ ಸ್ವರದಲ್ಲಿ ಕಿರುಚುವ ಈ ಹಕ್ಕಿ ತನ್ನಿರವನ್ನು ಎಲ್ಲರ ಅರಿವಿಗೆ ಬರುವಂತೆ ಮಾಡುತ್ತದೆ.

ಹುಳು ಹುಪ್ಪಟೆ ಮುಖ್ಯ ಆಹಾರ. ಹುಳಗಳು ಸಿಕ್ಕಿಲ್ಲವೆಂದರೆ ಧಾನ್ಯಗಳನ್ನೇ ಹುಡುಕಿ ತಿನ್ನುತ್ತವೆ. ಈ ಹಕ್ಜಿ ಪೂರ್ತಿ ಶಾಕಾಹಾರಿಯೂ ಅಲ್ಲ, ಮಾಂಸಾಹಾರಿಯೂ ಅಲ್ಲ, ಮಿಶ್ರಾಹಾರಿ. ಹಾಗಾಗಿ ಹೊಸ ಪ್ರದೇಶಕ್ಕೆ ಸುಲಭವಾಗಿ ಹೊಂದಿಕೊಳ್ಳುತ್ತವೆ. ಆಹಾರ ಸಮಸ್ಯೆ ಕಾಡದು. ನೆಲದಲ್ಲಿ ಬಿದ್ದಿರುವ ಕಸಕಡ್ಡಿಗಳು, ನಾರು ಮತ್ತಿತರ ವಸ್ತುಗಳನ್ನು ಉಪಯೋಗಿಸಿ ಗೂಡು ಕಟ್ಟುತ್ತವೆ. ಬೇಸಿಗೆಯಲ್ಲಿ ಮೊಟ್ಟೆ ಇಡುತ್ತವೆ. ಶತ್ರುಗಳಿಂದ ಮೊಟ್ಟೆಯನ್ನು ಕಾಪಾಡಲು ತಮ್ಮ ಶಕ್ತಿ ಮೀರಿ ಪ್ರಯತ್ನಿಸುತ್ತವೆ.

Advertisement

# ಅಶ್ವಿನಿಮೂರ್ತಿ ಅಯ್ಯನಕಟ್ಟೆ
# ಛಾಯಾಚಿತ್ರ : ಯು ರಾಧಾಕೃಷ್ಣ ರಾವ್ ಬಾಳಿಲ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಬುಧನಿಂದ ಈ 4 ರಾಶಿಯವರ ಲಕ್ ಫುಲ್ ಚೇಂಜ್, ಸಕಲ ಐಶ್ವರ್ಯ ಪ್ರಾಪ್ತಿ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

12 hours ago

ಹವಾಮಾನ ವರದಿ | 02-06-2025 | ಸಾಮಾನ್ಯ ಮಳೆ ಮುಂದುವರಿಕೆ | ಜೂನ್ ತಿಂಗಳಲ್ಲಿ ದುರ್ಬಲ ಮುಂಗಾರು ಸಾಧ್ಯತೆ |

ಮುಂಗಾರು ದುರ್ಬಲಗೊಂಡಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ಚಟುವಟಿಕೆಗಳು ಉಂಟಾದರೆ ಮಾತ್ರ ಮುಂಗಾರು ಸ್ವಲ್ಪ…

1 day ago

ಕೊರೊನಾ ಬಗ್ಗೆ ಮುನ್ನೆಚ್ಚರಿಕೆಯ ಹೊರತು ಭಯಭೀತರಾಗುವ ಅವಶ್ಯಕತೆಯಿಲ್ಲ

ರಾಜ್ಯದಲ್ಲಿ  ಕೊರೋನ ವಿಚಾರದಲ್ಲಿ ಹೆಚ್ಚಿನ ಬದಲಾವಣೆ ಏನೂ ಇಲ್ಲ ಎಂದು  ಆರೋಗ್ಯ ಸಚಿವ…

1 day ago

ಭೂಕುಸಿತ ಹಿನ್ನೆಲೆ | ಪಶ್ಚಿಮಘಟ್ಟ ಧಾರಣ ಸಾಮರ್ಥ್ಯದ ಅಧ್ಯಯನಕ್ಕೆ ಸಚಿವ  ಈಶ್ವರ್ ಖಂಡ್ರೆ ಸೂಚನೆ

ದಕ್ಷಿಣ ಕನ್ನಡ, ಕೊಡಗು ಮೊದಲಾದ ಭಾಗದಲ್ಲಿ ಮಳೆಗೆ ಭೂಕುಸಿತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಪಶ್ಚಿಮಘಟ್ಟದ…

2 days ago

ರಾಜ್ಯದ ಹಲವೆಡೆ ಗುಡುಗು ಮಿಂಚು ಸಹಿತ ಮಳೆ ಸಾಧ್ಯತೆ | ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಹಲವೆಡೆ  ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ…

2 days ago

ಸಿಂಹ ರಾಶಿಯನ್ನು ಪ್ರವೇಶಿಸಲಿರುವ ಮಂಗಳ | ಜೂನ್ 7 ರಿಂದ 3 ರಾಶಿಯವರಿಗೆ ಶುಭ ಫಲ

2025ರ ಜೂನ್ 7 ರಿಂದ ಮಂಗಳ ಗ್ರಹವು ಸಿಂಹ ರಾಶಿಗೆ ಪ್ರವೇಶ ಮಾಡಲಿರುವುದು…

2 days ago