Advertisement
ಅನುಕ್ರಮ

ಚಿಲಿಪಿಲಿ | ಈ ಜಾಗದ ಒಡೆಯ ಯಾರೆಂದು ಬಲ್ಲಿರೇನು? |

Share

ತನ್ನ ಸ್ವರದಿಂದ ಸುತ್ತಮುತ್ತಲು ಪರಿಚಿತವಾಗಿರುವ ಹಕ್ಕಿ ಈ ಗೊರವಂಕ, ಮೈನಾ(Common Myna, Indian Myna) ಎಂಬಿತ್ಯಾದಿ ಹೆಸರುಗಳಿಂದ ಗುರುತಿಸಿಕೊಳ್ಳುವುದು. ಈ ಹಕ್ಕಿಯ ಮೂಲ ಏಶಿಯಾ. ಸಾಮಾನ್ಯವಾಗಿ ಭಾರತ, ಇರಾನ್, ಕಜಖಸ್ತಾನದಿಂದ ಮಲೇಶಿಯ ಹಾಗೂ ಚೀನಾದಲ್ಲಿ ಕಂಡುಬರುವುದಾದರೂ ಪ್ರಪಂಚದ ಇನ್ನಿತರ ಪ್ರದೇಶಗಳಲ್ಲೂ ಇದರ ವಾಸ್ತವ್ಯ ವಿಸ್ತರಿಸಿದೆ.

Advertisement
Advertisement

ಕಪ್ಪಗಿನ ಮಿರುಗುವ. ಮೈ ಬಣ್ಣ, ಚೆಂದದ, ಗಟ್ಟಿಯಾದ ಕೇಸರಿ ಕೊಕ್ಕು, ಕಣ್ಣಿನ ಸುತ್ತ ಕೇಸರಿಯ ವೃತ್ತ, ಕಣ್ಣಿನ ಕೆಳಭಾಗದಲ್ಲಿ ಹಾಗೂ ಹಿಂಬದಿ ಅರಶಿನ ಬಣ್ಣದ ಚಿತ್ತಾರ ಕಾಲುಗುರಿನ ಬಣ್ಣವೂ ಕೇಸರಿ ‌ರೆಕ್ಕೆಯ ಕೆಳಭಾಗದಲ್ಲಿ ಸಣ್ಣಕಿರುವ ಬಿಳಿಯ ಬಣ್ಣದ ಮಚ್ಚೆಯಂತ ಪುಟ್ಟ ಪುಕ್ಕಗಳು ಇದು ಗೊರವಾಂಕ ಹಕ್ಕಿ. ಈ ಹಕ್ಕಿಯು ಸುಮಾರು 29 ಸೆ.ಮೀ ನಷ್ಟು ಉದ್ದವಾಗಿರುತ್ತವೆ.  ಸಂಸ್ಕೃತ ದಲ್ಲಿ ಶಾರಿಕಾ, ಸಾರಿಕಾ ಗೋರಾಟಿಕಾ,ತೆಲುಗಿನಲ್ಲಿ ಗೊರಿಂಕಾ ಎಂದೂ, ಹಲಸಿನ ಹಕ್ಕಿ, ಉಣ್ಣೆ ಗೊರವಾ, ಕಾಮಳ್ಳಿ ಹಕ್ಕಿ, ಪೀತ ನೇತ್ರ ಮೊದಲಾದ ಹೆಸರುಗಳಿಂದ ಗುರುತಿಸಿ ಕೊಂಡಿದೆ.ಜನವಸತಿ ಪ್ರದೇಶದಲ್ಲೇ ಹೆಚ್ಚಾಗಿ ಇರ ಬಯಸುವ ಹಕ್ಕಿ ಇದಾಗಿದೆ. ಭಯಂಕರ ಸ್ವರದ ಹಕ್ಕಿ ಇದು. ಎಲ್ಲಿದೆಯೋ ಅಲ್ಲಿ ದೊಡ್ಡ ಸ್ವರದಲ್ಲಿ ಕಿರುಚುವ ಈ ಹಕ್ಕಿ ತನ್ನಿರವನ್ನು ಎಲ್ಲರ ಅರಿವಿಗೆ ಬರುವಂತೆ ಮಾಡುತ್ತದೆ.

ಹುಳು ಹುಪ್ಪಟೆ ಮುಖ್ಯ ಆಹಾರ. ಹುಳಗಳು ಸಿಕ್ಕಿಲ್ಲವೆಂದರೆ ಧಾನ್ಯಗಳನ್ನೇ ಹುಡುಕಿ ತಿನ್ನುತ್ತವೆ. ಈ ಹಕ್ಜಿ ಪೂರ್ತಿ ಶಾಕಾಹಾರಿಯೂ ಅಲ್ಲ, ಮಾಂಸಾಹಾರಿಯೂ ಅಲ್ಲ, ಮಿಶ್ರಾಹಾರಿ. ಹಾಗಾಗಿ ಹೊಸ ಪ್ರದೇಶಕ್ಕೆ ಸುಲಭವಾಗಿ ಹೊಂದಿಕೊಳ್ಳುತ್ತವೆ. ಆಹಾರ ಸಮಸ್ಯೆ ಕಾಡದು. ನೆಲದಲ್ಲಿ ಬಿದ್ದಿರುವ ಕಸಕಡ್ಡಿಗಳು, ನಾರು ಮತ್ತಿತರ ವಸ್ತುಗಳನ್ನು ಉಪಯೋಗಿಸಿ ಗೂಡು ಕಟ್ಟುತ್ತವೆ. ಬೇಸಿಗೆಯಲ್ಲಿ ಮೊಟ್ಟೆ ಇಡುತ್ತವೆ. ಶತ್ರುಗಳಿಂದ ಮೊಟ್ಟೆಯನ್ನು ಕಾಪಾಡಲು ತಮ್ಮ ಶಕ್ತಿ ಮೀರಿ ಪ್ರಯತ್ನಿಸುತ್ತವೆ.

# ಅಶ್ವಿನಿಮೂರ್ತಿ ಅಯ್ಯನಕಟ್ಟೆ
# ಛಾಯಾಚಿತ್ರ : ಯು ರಾಧಾಕೃಷ್ಣ ರಾವ್ ಬಾಳಿಲ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

16 hours ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

2 days ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

2 days ago