Advertisement
ಅನುಕ್ರಮ

ಚಿಲಿಪಿಲಿ | ಈ ಜಾಗದ ಒಡೆಯ ಯಾರೆಂದು ಬಲ್ಲಿರೇನು? |

Share

ತನ್ನ ಸ್ವರದಿಂದ ಸುತ್ತಮುತ್ತಲು ಪರಿಚಿತವಾಗಿರುವ ಹಕ್ಕಿ ಈ ಗೊರವಂಕ, ಮೈನಾ(Common Myna, Indian Myna) ಎಂಬಿತ್ಯಾದಿ ಹೆಸರುಗಳಿಂದ ಗುರುತಿಸಿಕೊಳ್ಳುವುದು. ಈ ಹಕ್ಕಿಯ ಮೂಲ ಏಶಿಯಾ. ಸಾಮಾನ್ಯವಾಗಿ ಭಾರತ, ಇರಾನ್, ಕಜಖಸ್ತಾನದಿಂದ ಮಲೇಶಿಯ ಹಾಗೂ ಚೀನಾದಲ್ಲಿ ಕಂಡುಬರುವುದಾದರೂ ಪ್ರಪಂಚದ ಇನ್ನಿತರ ಪ್ರದೇಶಗಳಲ್ಲೂ ಇದರ ವಾಸ್ತವ್ಯ ವಿಸ್ತರಿಸಿದೆ.

ಕಪ್ಪಗಿನ ಮಿರುಗುವ. ಮೈ ಬಣ್ಣ, ಚೆಂದದ, ಗಟ್ಟಿಯಾದ ಕೇಸರಿ ಕೊಕ್ಕು, ಕಣ್ಣಿನ ಸುತ್ತ ಕೇಸರಿಯ ವೃತ್ತ, ಕಣ್ಣಿನ ಕೆಳಭಾಗದಲ್ಲಿ ಹಾಗೂ ಹಿಂಬದಿ ಅರಶಿನ ಬಣ್ಣದ ಚಿತ್ತಾರ ಕಾಲುಗುರಿನ ಬಣ್ಣವೂ ಕೇಸರಿ ‌ರೆಕ್ಕೆಯ ಕೆಳಭಾಗದಲ್ಲಿ ಸಣ್ಣಕಿರುವ ಬಿಳಿಯ ಬಣ್ಣದ ಮಚ್ಚೆಯಂತ ಪುಟ್ಟ ಪುಕ್ಕಗಳು ಇದು ಗೊರವಾಂಕ ಹಕ್ಕಿ. ಈ ಹಕ್ಕಿಯು ಸುಮಾರು 29 ಸೆ.ಮೀ ನಷ್ಟು ಉದ್ದವಾಗಿರುತ್ತವೆ.  ಸಂಸ್ಕೃತ ದಲ್ಲಿ ಶಾರಿಕಾ, ಸಾರಿಕಾ ಗೋರಾಟಿಕಾ,ತೆಲುಗಿನಲ್ಲಿ ಗೊರಿಂಕಾ ಎಂದೂ, ಹಲಸಿನ ಹಕ್ಕಿ, ಉಣ್ಣೆ ಗೊರವಾ, ಕಾಮಳ್ಳಿ ಹಕ್ಕಿ, ಪೀತ ನೇತ್ರ ಮೊದಲಾದ ಹೆಸರುಗಳಿಂದ ಗುರುತಿಸಿ ಕೊಂಡಿದೆ.ಜನವಸತಿ ಪ್ರದೇಶದಲ್ಲೇ ಹೆಚ್ಚಾಗಿ ಇರ ಬಯಸುವ ಹಕ್ಕಿ ಇದಾಗಿದೆ. ಭಯಂಕರ ಸ್ವರದ ಹಕ್ಕಿ ಇದು. ಎಲ್ಲಿದೆಯೋ ಅಲ್ಲಿ ದೊಡ್ಡ ಸ್ವರದಲ್ಲಿ ಕಿರುಚುವ ಈ ಹಕ್ಕಿ ತನ್ನಿರವನ್ನು ಎಲ್ಲರ ಅರಿವಿಗೆ ಬರುವಂತೆ ಮಾಡುತ್ತದೆ.

ಹುಳು ಹುಪ್ಪಟೆ ಮುಖ್ಯ ಆಹಾರ. ಹುಳಗಳು ಸಿಕ್ಕಿಲ್ಲವೆಂದರೆ ಧಾನ್ಯಗಳನ್ನೇ ಹುಡುಕಿ ತಿನ್ನುತ್ತವೆ. ಈ ಹಕ್ಜಿ ಪೂರ್ತಿ ಶಾಕಾಹಾರಿಯೂ ಅಲ್ಲ, ಮಾಂಸಾಹಾರಿಯೂ ಅಲ್ಲ, ಮಿಶ್ರಾಹಾರಿ. ಹಾಗಾಗಿ ಹೊಸ ಪ್ರದೇಶಕ್ಕೆ ಸುಲಭವಾಗಿ ಹೊಂದಿಕೊಳ್ಳುತ್ತವೆ. ಆಹಾರ ಸಮಸ್ಯೆ ಕಾಡದು. ನೆಲದಲ್ಲಿ ಬಿದ್ದಿರುವ ಕಸಕಡ್ಡಿಗಳು, ನಾರು ಮತ್ತಿತರ ವಸ್ತುಗಳನ್ನು ಉಪಯೋಗಿಸಿ ಗೂಡು ಕಟ್ಟುತ್ತವೆ. ಬೇಸಿಗೆಯಲ್ಲಿ ಮೊಟ್ಟೆ ಇಡುತ್ತವೆ. ಶತ್ರುಗಳಿಂದ ಮೊಟ್ಟೆಯನ್ನು ಕಾಪಾಡಲು ತಮ್ಮ ಶಕ್ತಿ ಮೀರಿ ಪ್ರಯತ್ನಿಸುತ್ತವೆ.

# ಅಶ್ವಿನಿಮೂರ್ತಿ ಅಯ್ಯನಕಟ್ಟೆ
# ಛಾಯಾಚಿತ್ರ : ಯು ರಾಧಾಕೃಷ್ಣ ರಾವ್ ಬಾಳಿಲ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

9 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ

ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…

10 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ

ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…

10 hours ago

ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ

ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…

13 hours ago

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

1 day ago