Advertisement
ಅನುಕ್ರಮ

ಚಿಲಿಪಿಲಿ | ಈ ಜಾಗದ ಒಡೆಯ ಯಾರೆಂದು ಬಲ್ಲಿರೇನು? |

Share

ತನ್ನ ಸ್ವರದಿಂದ ಸುತ್ತಮುತ್ತಲು ಪರಿಚಿತವಾಗಿರುವ ಹಕ್ಕಿ ಈ ಗೊರವಂಕ, ಮೈನಾ(Common Myna, Indian Myna) ಎಂಬಿತ್ಯಾದಿ ಹೆಸರುಗಳಿಂದ ಗುರುತಿಸಿಕೊಳ್ಳುವುದು. ಈ ಹಕ್ಕಿಯ ಮೂಲ ಏಶಿಯಾ. ಸಾಮಾನ್ಯವಾಗಿ ಭಾರತ, ಇರಾನ್, ಕಜಖಸ್ತಾನದಿಂದ ಮಲೇಶಿಯ ಹಾಗೂ ಚೀನಾದಲ್ಲಿ ಕಂಡುಬರುವುದಾದರೂ ಪ್ರಪಂಚದ ಇನ್ನಿತರ ಪ್ರದೇಶಗಳಲ್ಲೂ ಇದರ ವಾಸ್ತವ್ಯ ವಿಸ್ತರಿಸಿದೆ.

ಕಪ್ಪಗಿನ ಮಿರುಗುವ. ಮೈ ಬಣ್ಣ, ಚೆಂದದ, ಗಟ್ಟಿಯಾದ ಕೇಸರಿ ಕೊಕ್ಕು, ಕಣ್ಣಿನ ಸುತ್ತ ಕೇಸರಿಯ ವೃತ್ತ, ಕಣ್ಣಿನ ಕೆಳಭಾಗದಲ್ಲಿ ಹಾಗೂ ಹಿಂಬದಿ ಅರಶಿನ ಬಣ್ಣದ ಚಿತ್ತಾರ ಕಾಲುಗುರಿನ ಬಣ್ಣವೂ ಕೇಸರಿ ‌ರೆಕ್ಕೆಯ ಕೆಳಭಾಗದಲ್ಲಿ ಸಣ್ಣಕಿರುವ ಬಿಳಿಯ ಬಣ್ಣದ ಮಚ್ಚೆಯಂತ ಪುಟ್ಟ ಪುಕ್ಕಗಳು ಇದು ಗೊರವಾಂಕ ಹಕ್ಕಿ. ಈ ಹಕ್ಕಿಯು ಸುಮಾರು 29 ಸೆ.ಮೀ ನಷ್ಟು ಉದ್ದವಾಗಿರುತ್ತವೆ.  ಸಂಸ್ಕೃತ ದಲ್ಲಿ ಶಾರಿಕಾ, ಸಾರಿಕಾ ಗೋರಾಟಿಕಾ,ತೆಲುಗಿನಲ್ಲಿ ಗೊರಿಂಕಾ ಎಂದೂ, ಹಲಸಿನ ಹಕ್ಕಿ, ಉಣ್ಣೆ ಗೊರವಾ, ಕಾಮಳ್ಳಿ ಹಕ್ಕಿ, ಪೀತ ನೇತ್ರ ಮೊದಲಾದ ಹೆಸರುಗಳಿಂದ ಗುರುತಿಸಿ ಕೊಂಡಿದೆ.ಜನವಸತಿ ಪ್ರದೇಶದಲ್ಲೇ ಹೆಚ್ಚಾಗಿ ಇರ ಬಯಸುವ ಹಕ್ಕಿ ಇದಾಗಿದೆ. ಭಯಂಕರ ಸ್ವರದ ಹಕ್ಕಿ ಇದು. ಎಲ್ಲಿದೆಯೋ ಅಲ್ಲಿ ದೊಡ್ಡ ಸ್ವರದಲ್ಲಿ ಕಿರುಚುವ ಈ ಹಕ್ಕಿ ತನ್ನಿರವನ್ನು ಎಲ್ಲರ ಅರಿವಿಗೆ ಬರುವಂತೆ ಮಾಡುತ್ತದೆ.

ಹುಳು ಹುಪ್ಪಟೆ ಮುಖ್ಯ ಆಹಾರ. ಹುಳಗಳು ಸಿಕ್ಕಿಲ್ಲವೆಂದರೆ ಧಾನ್ಯಗಳನ್ನೇ ಹುಡುಕಿ ತಿನ್ನುತ್ತವೆ. ಈ ಹಕ್ಜಿ ಪೂರ್ತಿ ಶಾಕಾಹಾರಿಯೂ ಅಲ್ಲ, ಮಾಂಸಾಹಾರಿಯೂ ಅಲ್ಲ, ಮಿಶ್ರಾಹಾರಿ. ಹಾಗಾಗಿ ಹೊಸ ಪ್ರದೇಶಕ್ಕೆ ಸುಲಭವಾಗಿ ಹೊಂದಿಕೊಳ್ಳುತ್ತವೆ. ಆಹಾರ ಸಮಸ್ಯೆ ಕಾಡದು. ನೆಲದಲ್ಲಿ ಬಿದ್ದಿರುವ ಕಸಕಡ್ಡಿಗಳು, ನಾರು ಮತ್ತಿತರ ವಸ್ತುಗಳನ್ನು ಉಪಯೋಗಿಸಿ ಗೂಡು ಕಟ್ಟುತ್ತವೆ. ಬೇಸಿಗೆಯಲ್ಲಿ ಮೊಟ್ಟೆ ಇಡುತ್ತವೆ. ಶತ್ರುಗಳಿಂದ ಮೊಟ್ಟೆಯನ್ನು ಕಾಪಾಡಲು ತಮ್ಮ ಶಕ್ತಿ ಮೀರಿ ಪ್ರಯತ್ನಿಸುತ್ತವೆ.

# ಅಶ್ವಿನಿಮೂರ್ತಿ ಅಯ್ಯನಕಟ್ಟೆ
# ಛಾಯಾಚಿತ್ರ : ಯು ರಾಧಾಕೃಷ್ಣ ರಾವ್ ಬಾಳಿಲ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

2 hours ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

13 hours ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

18 hours ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

19 hours ago

ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…

21 hours ago

ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ

ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…

21 hours ago