Advertisement
ಅನುಕ್ರಮ

ಚಿಲಿಪಿಲಿ | ಈ ಜಾಗದ ಒಡೆಯ ಯಾರೆಂದು ಬಲ್ಲಿರೇನು? |

Share

ತನ್ನ ಸ್ವರದಿಂದ ಸುತ್ತಮುತ್ತಲು ಪರಿಚಿತವಾಗಿರುವ ಹಕ್ಕಿ ಈ ಗೊರವಂಕ, ಮೈನಾ(Common Myna, Indian Myna) ಎಂಬಿತ್ಯಾದಿ ಹೆಸರುಗಳಿಂದ ಗುರುತಿಸಿಕೊಳ್ಳುವುದು. ಈ ಹಕ್ಕಿಯ ಮೂಲ ಏಶಿಯಾ. ಸಾಮಾನ್ಯವಾಗಿ ಭಾರತ, ಇರಾನ್, ಕಜಖಸ್ತಾನದಿಂದ ಮಲೇಶಿಯ ಹಾಗೂ ಚೀನಾದಲ್ಲಿ ಕಂಡುಬರುವುದಾದರೂ ಪ್ರಪಂಚದ ಇನ್ನಿತರ ಪ್ರದೇಶಗಳಲ್ಲೂ ಇದರ ವಾಸ್ತವ್ಯ ವಿಸ್ತರಿಸಿದೆ.

ಕಪ್ಪಗಿನ ಮಿರುಗುವ. ಮೈ ಬಣ್ಣ, ಚೆಂದದ, ಗಟ್ಟಿಯಾದ ಕೇಸರಿ ಕೊಕ್ಕು, ಕಣ್ಣಿನ ಸುತ್ತ ಕೇಸರಿಯ ವೃತ್ತ, ಕಣ್ಣಿನ ಕೆಳಭಾಗದಲ್ಲಿ ಹಾಗೂ ಹಿಂಬದಿ ಅರಶಿನ ಬಣ್ಣದ ಚಿತ್ತಾರ ಕಾಲುಗುರಿನ ಬಣ್ಣವೂ ಕೇಸರಿ ‌ರೆಕ್ಕೆಯ ಕೆಳಭಾಗದಲ್ಲಿ ಸಣ್ಣಕಿರುವ ಬಿಳಿಯ ಬಣ್ಣದ ಮಚ್ಚೆಯಂತ ಪುಟ್ಟ ಪುಕ್ಕಗಳು ಇದು ಗೊರವಾಂಕ ಹಕ್ಕಿ. ಈ ಹಕ್ಕಿಯು ಸುಮಾರು 29 ಸೆ.ಮೀ ನಷ್ಟು ಉದ್ದವಾಗಿರುತ್ತವೆ.  ಸಂಸ್ಕೃತ ದಲ್ಲಿ ಶಾರಿಕಾ, ಸಾರಿಕಾ ಗೋರಾಟಿಕಾ,ತೆಲುಗಿನಲ್ಲಿ ಗೊರಿಂಕಾ ಎಂದೂ, ಹಲಸಿನ ಹಕ್ಕಿ, ಉಣ್ಣೆ ಗೊರವಾ, ಕಾಮಳ್ಳಿ ಹಕ್ಕಿ, ಪೀತ ನೇತ್ರ ಮೊದಲಾದ ಹೆಸರುಗಳಿಂದ ಗುರುತಿಸಿ ಕೊಂಡಿದೆ.ಜನವಸತಿ ಪ್ರದೇಶದಲ್ಲೇ ಹೆಚ್ಚಾಗಿ ಇರ ಬಯಸುವ ಹಕ್ಕಿ ಇದಾಗಿದೆ. ಭಯಂಕರ ಸ್ವರದ ಹಕ್ಕಿ ಇದು. ಎಲ್ಲಿದೆಯೋ ಅಲ್ಲಿ ದೊಡ್ಡ ಸ್ವರದಲ್ಲಿ ಕಿರುಚುವ ಈ ಹಕ್ಕಿ ತನ್ನಿರವನ್ನು ಎಲ್ಲರ ಅರಿವಿಗೆ ಬರುವಂತೆ ಮಾಡುತ್ತದೆ.

ಹುಳು ಹುಪ್ಪಟೆ ಮುಖ್ಯ ಆಹಾರ. ಹುಳಗಳು ಸಿಕ್ಕಿಲ್ಲವೆಂದರೆ ಧಾನ್ಯಗಳನ್ನೇ ಹುಡುಕಿ ತಿನ್ನುತ್ತವೆ. ಈ ಹಕ್ಜಿ ಪೂರ್ತಿ ಶಾಕಾಹಾರಿಯೂ ಅಲ್ಲ, ಮಾಂಸಾಹಾರಿಯೂ ಅಲ್ಲ, ಮಿಶ್ರಾಹಾರಿ. ಹಾಗಾಗಿ ಹೊಸ ಪ್ರದೇಶಕ್ಕೆ ಸುಲಭವಾಗಿ ಹೊಂದಿಕೊಳ್ಳುತ್ತವೆ. ಆಹಾರ ಸಮಸ್ಯೆ ಕಾಡದು. ನೆಲದಲ್ಲಿ ಬಿದ್ದಿರುವ ಕಸಕಡ್ಡಿಗಳು, ನಾರು ಮತ್ತಿತರ ವಸ್ತುಗಳನ್ನು ಉಪಯೋಗಿಸಿ ಗೂಡು ಕಟ್ಟುತ್ತವೆ. ಬೇಸಿಗೆಯಲ್ಲಿ ಮೊಟ್ಟೆ ಇಡುತ್ತವೆ. ಶತ್ರುಗಳಿಂದ ಮೊಟ್ಟೆಯನ್ನು ಕಾಪಾಡಲು ತಮ್ಮ ಶಕ್ತಿ ಮೀರಿ ಪ್ರಯತ್ನಿಸುತ್ತವೆ.

# ಅಶ್ವಿನಿಮೂರ್ತಿ ಅಯ್ಯನಕಟ್ಟೆ
# ಛಾಯಾಚಿತ್ರ : ಯು ರಾಧಾಕೃಷ್ಣ ರಾವ್ ಬಾಳಿಲ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

11 hours ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

18 hours ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

19 hours ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

1 day ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

1 day ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

2 days ago