Advertisement
ಅನುಕ್ರಮ

ಚಿಲಿಪಿಲಿ | ಈ ಜಾಗದ ಒಡೆಯ ಯಾರೆಂದು ಬಲ್ಲಿರೇನು? |

Share

ತನ್ನ ಸ್ವರದಿಂದ ಸುತ್ತಮುತ್ತಲು ಪರಿಚಿತವಾಗಿರುವ ಹಕ್ಕಿ ಈ ಗೊರವಂಕ, ಮೈನಾ(Common Myna, Indian Myna) ಎಂಬಿತ್ಯಾದಿ ಹೆಸರುಗಳಿಂದ ಗುರುತಿಸಿಕೊಳ್ಳುವುದು. ಈ ಹಕ್ಕಿಯ ಮೂಲ ಏಶಿಯಾ. ಸಾಮಾನ್ಯವಾಗಿ ಭಾರತ, ಇರಾನ್, ಕಜಖಸ್ತಾನದಿಂದ ಮಲೇಶಿಯ ಹಾಗೂ ಚೀನಾದಲ್ಲಿ ಕಂಡುಬರುವುದಾದರೂ ಪ್ರಪಂಚದ ಇನ್ನಿತರ ಪ್ರದೇಶಗಳಲ್ಲೂ ಇದರ ವಾಸ್ತವ್ಯ ವಿಸ್ತರಿಸಿದೆ.

ಕಪ್ಪಗಿನ ಮಿರುಗುವ. ಮೈ ಬಣ್ಣ, ಚೆಂದದ, ಗಟ್ಟಿಯಾದ ಕೇಸರಿ ಕೊಕ್ಕು, ಕಣ್ಣಿನ ಸುತ್ತ ಕೇಸರಿಯ ವೃತ್ತ, ಕಣ್ಣಿನ ಕೆಳಭಾಗದಲ್ಲಿ ಹಾಗೂ ಹಿಂಬದಿ ಅರಶಿನ ಬಣ್ಣದ ಚಿತ್ತಾರ ಕಾಲುಗುರಿನ ಬಣ್ಣವೂ ಕೇಸರಿ ‌ರೆಕ್ಕೆಯ ಕೆಳಭಾಗದಲ್ಲಿ ಸಣ್ಣಕಿರುವ ಬಿಳಿಯ ಬಣ್ಣದ ಮಚ್ಚೆಯಂತ ಪುಟ್ಟ ಪುಕ್ಕಗಳು ಇದು ಗೊರವಾಂಕ ಹಕ್ಕಿ. ಈ ಹಕ್ಕಿಯು ಸುಮಾರು 29 ಸೆ.ಮೀ ನಷ್ಟು ಉದ್ದವಾಗಿರುತ್ತವೆ.  ಸಂಸ್ಕೃತ ದಲ್ಲಿ ಶಾರಿಕಾ, ಸಾರಿಕಾ ಗೋರಾಟಿಕಾ,ತೆಲುಗಿನಲ್ಲಿ ಗೊರಿಂಕಾ ಎಂದೂ, ಹಲಸಿನ ಹಕ್ಕಿ, ಉಣ್ಣೆ ಗೊರವಾ, ಕಾಮಳ್ಳಿ ಹಕ್ಕಿ, ಪೀತ ನೇತ್ರ ಮೊದಲಾದ ಹೆಸರುಗಳಿಂದ ಗುರುತಿಸಿ ಕೊಂಡಿದೆ.ಜನವಸತಿ ಪ್ರದೇಶದಲ್ಲೇ ಹೆಚ್ಚಾಗಿ ಇರ ಬಯಸುವ ಹಕ್ಕಿ ಇದಾಗಿದೆ. ಭಯಂಕರ ಸ್ವರದ ಹಕ್ಕಿ ಇದು. ಎಲ್ಲಿದೆಯೋ ಅಲ್ಲಿ ದೊಡ್ಡ ಸ್ವರದಲ್ಲಿ ಕಿರುಚುವ ಈ ಹಕ್ಕಿ ತನ್ನಿರವನ್ನು ಎಲ್ಲರ ಅರಿವಿಗೆ ಬರುವಂತೆ ಮಾಡುತ್ತದೆ.

ಹುಳು ಹುಪ್ಪಟೆ ಮುಖ್ಯ ಆಹಾರ. ಹುಳಗಳು ಸಿಕ್ಕಿಲ್ಲವೆಂದರೆ ಧಾನ್ಯಗಳನ್ನೇ ಹುಡುಕಿ ತಿನ್ನುತ್ತವೆ. ಈ ಹಕ್ಜಿ ಪೂರ್ತಿ ಶಾಕಾಹಾರಿಯೂ ಅಲ್ಲ, ಮಾಂಸಾಹಾರಿಯೂ ಅಲ್ಲ, ಮಿಶ್ರಾಹಾರಿ. ಹಾಗಾಗಿ ಹೊಸ ಪ್ರದೇಶಕ್ಕೆ ಸುಲಭವಾಗಿ ಹೊಂದಿಕೊಳ್ಳುತ್ತವೆ. ಆಹಾರ ಸಮಸ್ಯೆ ಕಾಡದು. ನೆಲದಲ್ಲಿ ಬಿದ್ದಿರುವ ಕಸಕಡ್ಡಿಗಳು, ನಾರು ಮತ್ತಿತರ ವಸ್ತುಗಳನ್ನು ಉಪಯೋಗಿಸಿ ಗೂಡು ಕಟ್ಟುತ್ತವೆ. ಬೇಸಿಗೆಯಲ್ಲಿ ಮೊಟ್ಟೆ ಇಡುತ್ತವೆ. ಶತ್ರುಗಳಿಂದ ಮೊಟ್ಟೆಯನ್ನು ಕಾಪಾಡಲು ತಮ್ಮ ಶಕ್ತಿ ಮೀರಿ ಪ್ರಯತ್ನಿಸುತ್ತವೆ.

# ಅಶ್ವಿನಿಮೂರ್ತಿ ಅಯ್ಯನಕಟ್ಟೆ
# ಛಾಯಾಚಿತ್ರ : ಯು ರಾಧಾಕೃಷ್ಣ ರಾವ್ ಬಾಳಿಲ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

5 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

6 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

7 hours ago

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

10 hours ago