ಮಂಗಳೂರು | ಭರ್ಜರಿ ಯಶಸ್ಸು ಕಾಣುತ್ತಿರುವ “ಕಾಂತಾರ” | ಥಿಯೇಟರ್ ನಲ್ಲಿ ಕಾಂತಾರ ಸಿನಿಮಾ ವೀಕ್ಷಣೆ ಮಾಡಿದ ಮಹಿಳೆ ಮೇಲೆ ದೈವ ಅವಾಹನೆ…! |

October 2, 2022
11:25 AM

ಹೊಂಬಾಳೆ ಬ್ಯಾನರ್ ಅಡಿಯಲ್ಲಿ, ರಿಷಬ್ ಶೆಟ್ಟಿ ಮನೋಜ್ಞ ನಿರ್ದೇಶನ ಮತ್ತು ನಟನೆಯಲ್ಲಿ ಮೂಡಿಬಂದ ಸಿನಿಮಾ ‘ಕಾಂತಾರ’. ತುಳುನಾಡಿನ ದೈವಾರಾಧನೆ ಮತ್ತು ಕಂಬಳದ ಪ್ರಸ್ತುತಿ ಈ ಚಿತ್ರದಲ್ಲಿದೆ. ಹಾಗೆ ಈ ಸಿನಿಮಾ ಕಂಡ ಪ್ರತಿಯೊಬ್ಬರೂ ಕೊಂಡಾಡಿದ್ದಾರೆ. ಎಲ್ಲಾ ವಿಭಾಗದಲ್ಲಿ ಸೂಪರ್ ರಿವ್ಯೂ ಸಿಕ್ಕಿದೆ. ಹೀಗಾಗಿ ಕಾಂತಾರ ಬಿಡುಗಡೆ ಆಗಿರೋ ಚಿತ್ರಮಂದಿರಗಳಲ್ಲಿ ಮೊದಲ ಶೋನಿಂದ ಹೌಸ್​ ಫುಲ್ ಬೋರ್ಡ್​ ಬಿದ್ದಿದೆ. ಈ ನಡುವೆಯೇ  ಕಾಂತಾರ ಸಿನಿಮಾ ವೀಕ್ಷಿಸುತ್ತಿದ್ದ ಮಹಿಳೆಯೊಬ್ಬರ ಮೇಲೆ ದೈವ ಆವಾಹನೆಯಾಗಿದೆ ಎಂದು ತಿಳಿದುಬಂದಿದೆ.

ಈ ಸಿನಿಮಾದ  ಕ್ಲೈಮ್ಯಾಕ್ಸ್ ನ 15 ರಿಂದ 20 ನಿಮಿಷ ಪ್ರೇಕ್ಷಕರನ್ನು ನಿಬ್ಬೆರಗಾಗಿಸುವಂತೆ ದೃಶ್ಯಗಳನ್ನು ಚಿತ್ರೀಕರಣ ಮಾಡಲಾಗಿದೆ. ಹೀಗಾಗಿ ಸಿನಿಮಾ ನೋಡುತ್ತಿರುವಂತೆಯೇ ಜನರು  ರೋಮಾಂಚನವಾಗುತ್ತದೆ. ಈ ಕಾರಣದಿಂದಲೇ ಸಿನಿಮಾದ ಕ್ಲೈಮಾಕ್ಸ್ ನೋಡುತ್ತಿದ್ದಂತೆ ದೈವ ಮೈಮೇಲೆ ಬಂದಂತೆ ಮಹಿಳೆ ವರ್ತಿಸಿದ್ದಾರೆ. ಈ ಘಟನೆ ನಡೆದಿರುವುದು ಮಂಗಳೂರಿನ ಮಾಲ್ ಒಂದರಲ್ಲಿನ ಚಿತ್ರಮಂದಿರದಲ್ಲಿ. ಆದರೆ ಈ ಬಗ್ಗೆ ಅಧಿಕೃತವಾದ ಯಾವುದೇ ಮಾಹಿತಿಗಳನ್ನು ಚಿತ್ರತಂಡ ಪ್ರಕಟಿಸಿಲ್ಲ.

ಈ ಸೂಪರ್‌ ಚಿತ್ರದ ಪ್ರಯತ್ನದಿಂದ ಸಿನಿಮಾ ಎರಡು ದಿನದಲ್ಲಿ ಬರೋಬ್ಬರಿ 8 ರಿಂದ 9 ಕೋಟಿ ಕಲೆಕ್ಷನ್ ಮಾಡಿದೆ ಎಂದು ಹೇಳಲಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ
ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ
August 13, 2026
6:59 AM
by: ದ ರೂರಲ್ ಮಿರರ್.ಕಾಂ
ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?
August 13, 2026
6:50 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror