ಮಂಗಳೂರು | ಭರ್ಜರಿ ಯಶಸ್ಸು ಕಾಣುತ್ತಿರುವ “ಕಾಂತಾರ” | ಥಿಯೇಟರ್ ನಲ್ಲಿ ಕಾಂತಾರ ಸಿನಿಮಾ ವೀಕ್ಷಣೆ ಮಾಡಿದ ಮಹಿಳೆ ಮೇಲೆ ದೈವ ಅವಾಹನೆ…! |

October 2, 2022
11:25 AM

ಹೊಂಬಾಳೆ ಬ್ಯಾನರ್ ಅಡಿಯಲ್ಲಿ, ರಿಷಬ್ ಶೆಟ್ಟಿ ಮನೋಜ್ಞ ನಿರ್ದೇಶನ ಮತ್ತು ನಟನೆಯಲ್ಲಿ ಮೂಡಿಬಂದ ಸಿನಿಮಾ ‘ಕಾಂತಾರ’. ತುಳುನಾಡಿನ ದೈವಾರಾಧನೆ ಮತ್ತು ಕಂಬಳದ ಪ್ರಸ್ತುತಿ ಈ ಚಿತ್ರದಲ್ಲಿದೆ. ಹಾಗೆ ಈ ಸಿನಿಮಾ ಕಂಡ ಪ್ರತಿಯೊಬ್ಬರೂ ಕೊಂಡಾಡಿದ್ದಾರೆ. ಎಲ್ಲಾ ವಿಭಾಗದಲ್ಲಿ ಸೂಪರ್ ರಿವ್ಯೂ ಸಿಕ್ಕಿದೆ. ಹೀಗಾಗಿ ಕಾಂತಾರ ಬಿಡುಗಡೆ ಆಗಿರೋ ಚಿತ್ರಮಂದಿರಗಳಲ್ಲಿ ಮೊದಲ ಶೋನಿಂದ ಹೌಸ್​ ಫುಲ್ ಬೋರ್ಡ್​ ಬಿದ್ದಿದೆ. ಈ ನಡುವೆಯೇ  ಕಾಂತಾರ ಸಿನಿಮಾ ವೀಕ್ಷಿಸುತ್ತಿದ್ದ ಮಹಿಳೆಯೊಬ್ಬರ ಮೇಲೆ ದೈವ ಆವಾಹನೆಯಾಗಿದೆ ಎಂದು ತಿಳಿದುಬಂದಿದೆ.

ಈ ಸಿನಿಮಾದ  ಕ್ಲೈಮ್ಯಾಕ್ಸ್ ನ 15 ರಿಂದ 20 ನಿಮಿಷ ಪ್ರೇಕ್ಷಕರನ್ನು ನಿಬ್ಬೆರಗಾಗಿಸುವಂತೆ ದೃಶ್ಯಗಳನ್ನು ಚಿತ್ರೀಕರಣ ಮಾಡಲಾಗಿದೆ. ಹೀಗಾಗಿ ಸಿನಿಮಾ ನೋಡುತ್ತಿರುವಂತೆಯೇ ಜನರು  ರೋಮಾಂಚನವಾಗುತ್ತದೆ. ಈ ಕಾರಣದಿಂದಲೇ ಸಿನಿಮಾದ ಕ್ಲೈಮಾಕ್ಸ್ ನೋಡುತ್ತಿದ್ದಂತೆ ದೈವ ಮೈಮೇಲೆ ಬಂದಂತೆ ಮಹಿಳೆ ವರ್ತಿಸಿದ್ದಾರೆ. ಈ ಘಟನೆ ನಡೆದಿರುವುದು ಮಂಗಳೂರಿನ ಮಾಲ್ ಒಂದರಲ್ಲಿನ ಚಿತ್ರಮಂದಿರದಲ್ಲಿ. ಆದರೆ ಈ ಬಗ್ಗೆ ಅಧಿಕೃತವಾದ ಯಾವುದೇ ಮಾಹಿತಿಗಳನ್ನು ಚಿತ್ರತಂಡ ಪ್ರಕಟಿಸಿಲ್ಲ.

ಈ ಸೂಪರ್‌ ಚಿತ್ರದ ಪ್ರಯತ್ನದಿಂದ ಸಿನಿಮಾ ಎರಡು ದಿನದಲ್ಲಿ ಬರೋಬ್ಬರಿ 8 ರಿಂದ 9 ಕೋಟಿ ಕಲೆಕ್ಷನ್ ಮಾಡಿದೆ ಎಂದು ಹೇಳಲಾಗಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?
September 5, 2026
7:23 AM
by: ಮಹೇಶ್ ಪುಚ್ಚಪ್ಪಾಡಿ
ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?
September 5, 2026
6:54 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?
September 4, 2026
10:47 PM
by: ದ ರೂರಲ್ ಮಿರರ್.ಕಾಂ
3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ
September 4, 2026
8:50 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror