ಹೊಂಬಾಳೆ ಬ್ಯಾನರ್ ಅಡಿಯಲ್ಲಿ, ರಿಷಬ್ ಶೆಟ್ಟಿ ಮನೋಜ್ಞ ನಿರ್ದೇಶನ ಮತ್ತು ನಟನೆಯಲ್ಲಿ ಮೂಡಿಬಂದ ಸಿನಿಮಾ ‘ಕಾಂತಾರ’. ತುಳುನಾಡಿನ ದೈವಾರಾಧನೆ ಮತ್ತು ಕಂಬಳದ ಪ್ರಸ್ತುತಿ ಈ ಚಿತ್ರದಲ್ಲಿದೆ. ಹಾಗೆ ಈ ಸಿನಿಮಾ ಕಂಡ ಪ್ರತಿಯೊಬ್ಬರೂ ಕೊಂಡಾಡಿದ್ದಾರೆ. ಎಲ್ಲಾ ವಿಭಾಗದಲ್ಲಿ ಸೂಪರ್ ರಿವ್ಯೂ ಸಿಕ್ಕಿದೆ. ಹೀಗಾಗಿ ಕಾಂತಾರ ಬಿಡುಗಡೆ ಆಗಿರೋ ಚಿತ್ರಮಂದಿರಗಳಲ್ಲಿ ಮೊದಲ ಶೋನಿಂದ ಹೌಸ್ ಫುಲ್ ಬೋರ್ಡ್ ಬಿದ್ದಿದೆ. ಈ ನಡುವೆಯೇ ಕಾಂತಾರ ಸಿನಿಮಾ ವೀಕ್ಷಿಸುತ್ತಿದ್ದ ಮಹಿಳೆಯೊಬ್ಬರ ಮೇಲೆ ದೈವ ಆವಾಹನೆಯಾಗಿದೆ ಎಂದು ತಿಳಿದುಬಂದಿದೆ.
ಈ ಸಿನಿಮಾದ ಕ್ಲೈಮ್ಯಾಕ್ಸ್ ನ 15 ರಿಂದ 20 ನಿಮಿಷ ಪ್ರೇಕ್ಷಕರನ್ನು ನಿಬ್ಬೆರಗಾಗಿಸುವಂತೆ ದೃಶ್ಯಗಳನ್ನು ಚಿತ್ರೀಕರಣ ಮಾಡಲಾಗಿದೆ. ಹೀಗಾಗಿ ಸಿನಿಮಾ ನೋಡುತ್ತಿರುವಂತೆಯೇ ಜನರು ರೋಮಾಂಚನವಾಗುತ್ತದೆ. ಈ ಕಾರಣದಿಂದಲೇ ಸಿನಿಮಾದ ಕ್ಲೈಮಾಕ್ಸ್ ನೋಡುತ್ತಿದ್ದಂತೆ ದೈವ ಮೈಮೇಲೆ ಬಂದಂತೆ ಮಹಿಳೆ ವರ್ತಿಸಿದ್ದಾರೆ. ಈ ಘಟನೆ ನಡೆದಿರುವುದು ಮಂಗಳೂರಿನ ಮಾಲ್ ಒಂದರಲ್ಲಿನ ಚಿತ್ರಮಂದಿರದಲ್ಲಿ. ಆದರೆ ಈ ಬಗ್ಗೆ ಅಧಿಕೃತವಾದ ಯಾವುದೇ ಮಾಹಿತಿಗಳನ್ನು ಚಿತ್ರತಂಡ ಪ್ರಕಟಿಸಿಲ್ಲ.
ಈ ಸೂಪರ್ ಚಿತ್ರದ ಪ್ರಯತ್ನದಿಂದ ಸಿನಿಮಾ ಎರಡು ದಿನದಲ್ಲಿ ಬರೋಬ್ಬರಿ 8 ರಿಂದ 9 ಕೋಟಿ ಕಲೆಕ್ಷನ್ ಮಾಡಿದೆ ಎಂದು ಹೇಳಲಾಗಿದೆ.
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…
ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.