ಹೊಂಬಾಳೆ ಬ್ಯಾನರ್ ಅಡಿಯಲ್ಲಿ, ರಿಷಬ್ ಶೆಟ್ಟಿ ಮನೋಜ್ಞ ನಿರ್ದೇಶನ ಮತ್ತು ನಟನೆಯಲ್ಲಿ ಮೂಡಿಬಂದ ಸಿನಿಮಾ ‘ಕಾಂತಾರ’. ತುಳುನಾಡಿನ ದೈವಾರಾಧನೆ ಮತ್ತು ಕಂಬಳದ ಪ್ರಸ್ತುತಿ ಈ ಚಿತ್ರದಲ್ಲಿದೆ. ಹಾಗೆ ಈ ಸಿನಿಮಾ ಕಂಡ ಪ್ರತಿಯೊಬ್ಬರೂ ಕೊಂಡಾಡಿದ್ದಾರೆ. ಎಲ್ಲಾ ವಿಭಾಗದಲ್ಲಿ ಸೂಪರ್ ರಿವ್ಯೂ ಸಿಕ್ಕಿದೆ. ಹೀಗಾಗಿ ಕಾಂತಾರ ಬಿಡುಗಡೆ ಆಗಿರೋ ಚಿತ್ರಮಂದಿರಗಳಲ್ಲಿ ಮೊದಲ ಶೋನಿಂದ ಹೌಸ್ ಫುಲ್ ಬೋರ್ಡ್ ಬಿದ್ದಿದೆ. ಈ ನಡುವೆಯೇ ಕಾಂತಾರ ಸಿನಿಮಾ ವೀಕ್ಷಿಸುತ್ತಿದ್ದ ಮಹಿಳೆಯೊಬ್ಬರ ಮೇಲೆ ದೈವ ಆವಾಹನೆಯಾಗಿದೆ ಎಂದು ತಿಳಿದುಬಂದಿದೆ.
ಈ ಸಿನಿಮಾದ ಕ್ಲೈಮ್ಯಾಕ್ಸ್ ನ 15 ರಿಂದ 20 ನಿಮಿಷ ಪ್ರೇಕ್ಷಕರನ್ನು ನಿಬ್ಬೆರಗಾಗಿಸುವಂತೆ ದೃಶ್ಯಗಳನ್ನು ಚಿತ್ರೀಕರಣ ಮಾಡಲಾಗಿದೆ. ಹೀಗಾಗಿ ಸಿನಿಮಾ ನೋಡುತ್ತಿರುವಂತೆಯೇ ಜನರು ರೋಮಾಂಚನವಾಗುತ್ತದೆ. ಈ ಕಾರಣದಿಂದಲೇ ಸಿನಿಮಾದ ಕ್ಲೈಮಾಕ್ಸ್ ನೋಡುತ್ತಿದ್ದಂತೆ ದೈವ ಮೈಮೇಲೆ ಬಂದಂತೆ ಮಹಿಳೆ ವರ್ತಿಸಿದ್ದಾರೆ. ಈ ಘಟನೆ ನಡೆದಿರುವುದು ಮಂಗಳೂರಿನ ಮಾಲ್ ಒಂದರಲ್ಲಿನ ಚಿತ್ರಮಂದಿರದಲ್ಲಿ. ಆದರೆ ಈ ಬಗ್ಗೆ ಅಧಿಕೃತವಾದ ಯಾವುದೇ ಮಾಹಿತಿಗಳನ್ನು ಚಿತ್ರತಂಡ ಪ್ರಕಟಿಸಿಲ್ಲ.
ಈ ಸೂಪರ್ ಚಿತ್ರದ ಪ್ರಯತ್ನದಿಂದ ಸಿನಿಮಾ ಎರಡು ದಿನದಲ್ಲಿ ಬರೋಬ್ಬರಿ 8 ರಿಂದ 9 ಕೋಟಿ ಕಲೆಕ್ಷನ್ ಮಾಡಿದೆ ಎಂದು ಹೇಳಲಾಗಿದೆ.
ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…
ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…
ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…
ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…
ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…
17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…