ಹೊಂಬಾಳೆ ಬ್ಯಾನರ್ ಅಡಿಯಲ್ಲಿ, ರಿಷಬ್ ಶೆಟ್ಟಿ ಮನೋಜ್ಞ ನಿರ್ದೇಶನ ಮತ್ತು ನಟನೆಯಲ್ಲಿ ಮೂಡಿಬಂದ ಸಿನಿಮಾ ‘ಕಾಂತಾರ’. ತುಳುನಾಡಿನ ದೈವಾರಾಧನೆ ಮತ್ತು ಕಂಬಳದ ಪ್ರಸ್ತುತಿ ಈ ಚಿತ್ರದಲ್ಲಿದೆ. ಹಾಗೆ ಈ ಸಿನಿಮಾ ಕಂಡ ಪ್ರತಿಯೊಬ್ಬರೂ ಕೊಂಡಾಡಿದ್ದಾರೆ. ಎಲ್ಲಾ ವಿಭಾಗದಲ್ಲಿ ಸೂಪರ್ ರಿವ್ಯೂ ಸಿಕ್ಕಿದೆ. ಹೀಗಾಗಿ ಕಾಂತಾರ ಬಿಡುಗಡೆ ಆಗಿರೋ ಚಿತ್ರಮಂದಿರಗಳಲ್ಲಿ ಮೊದಲ ಶೋನಿಂದ ಹೌಸ್ ಫುಲ್ ಬೋರ್ಡ್ ಬಿದ್ದಿದೆ. ಈ ನಡುವೆಯೇ ಕಾಂತಾರ ಸಿನಿಮಾ ವೀಕ್ಷಿಸುತ್ತಿದ್ದ ಮಹಿಳೆಯೊಬ್ಬರ ಮೇಲೆ ದೈವ ಆವಾಹನೆಯಾಗಿದೆ ಎಂದು ತಿಳಿದುಬಂದಿದೆ.
ಈ ಸಿನಿಮಾದ ಕ್ಲೈಮ್ಯಾಕ್ಸ್ ನ 15 ರಿಂದ 20 ನಿಮಿಷ ಪ್ರೇಕ್ಷಕರನ್ನು ನಿಬ್ಬೆರಗಾಗಿಸುವಂತೆ ದೃಶ್ಯಗಳನ್ನು ಚಿತ್ರೀಕರಣ ಮಾಡಲಾಗಿದೆ. ಹೀಗಾಗಿ ಸಿನಿಮಾ ನೋಡುತ್ತಿರುವಂತೆಯೇ ಜನರು ರೋಮಾಂಚನವಾಗುತ್ತದೆ. ಈ ಕಾರಣದಿಂದಲೇ ಸಿನಿಮಾದ ಕ್ಲೈಮಾಕ್ಸ್ ನೋಡುತ್ತಿದ್ದಂತೆ ದೈವ ಮೈಮೇಲೆ ಬಂದಂತೆ ಮಹಿಳೆ ವರ್ತಿಸಿದ್ದಾರೆ. ಈ ಘಟನೆ ನಡೆದಿರುವುದು ಮಂಗಳೂರಿನ ಮಾಲ್ ಒಂದರಲ್ಲಿನ ಚಿತ್ರಮಂದಿರದಲ್ಲಿ. ಆದರೆ ಈ ಬಗ್ಗೆ ಅಧಿಕೃತವಾದ ಯಾವುದೇ ಮಾಹಿತಿಗಳನ್ನು ಚಿತ್ರತಂಡ ಪ್ರಕಟಿಸಿಲ್ಲ.
ಈ ಸೂಪರ್ ಚಿತ್ರದ ಪ್ರಯತ್ನದಿಂದ ಸಿನಿಮಾ ಎರಡು ದಿನದಲ್ಲಿ ಬರೋಬ್ಬರಿ 8 ರಿಂದ 9 ಕೋಟಿ ಕಲೆಕ್ಷನ್ ಮಾಡಿದೆ ಎಂದು ಹೇಳಲಾಗಿದೆ.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…