ಹೊಂಬಾಳೆ ಬ್ಯಾನರ್ ಅಡಿಯಲ್ಲಿ, ರಿಷಬ್ ಶೆಟ್ಟಿ ಮನೋಜ್ಞ ನಿರ್ದೇಶನ ಮತ್ತು ನಟನೆಯಲ್ಲಿ ಮೂಡಿಬಂದ ಸಿನಿಮಾ ‘ಕಾಂತಾರ’. ತುಳುನಾಡಿನ ದೈವಾರಾಧನೆ ಮತ್ತು ಕಂಬಳದ ಪ್ರಸ್ತುತಿ ಈ ಚಿತ್ರದಲ್ಲಿದೆ. ಹಾಗೆ ಈ ಸಿನಿಮಾ ಕಂಡ ಪ್ರತಿಯೊಬ್ಬರೂ ಕೊಂಡಾಡಿದ್ದಾರೆ. ಎಲ್ಲಾ ವಿಭಾಗದಲ್ಲಿ ಸೂಪರ್ ರಿವ್ಯೂ ಸಿಕ್ಕಿದೆ. ಹೀಗಾಗಿ ಕಾಂತಾರ ಬಿಡುಗಡೆ ಆಗಿರೋ ಚಿತ್ರಮಂದಿರಗಳಲ್ಲಿ ಮೊದಲ ಶೋನಿಂದ ಹೌಸ್ ಫುಲ್ ಬೋರ್ಡ್ ಬಿದ್ದಿದೆ. ಈ ನಡುವೆಯೇ ಕಾಂತಾರ ಸಿನಿಮಾ ವೀಕ್ಷಿಸುತ್ತಿದ್ದ ಮಹಿಳೆಯೊಬ್ಬರ ಮೇಲೆ ದೈವ ಆವಾಹನೆಯಾಗಿದೆ ಎಂದು ತಿಳಿದುಬಂದಿದೆ.
ಈ ಸಿನಿಮಾದ ಕ್ಲೈಮ್ಯಾಕ್ಸ್ ನ 15 ರಿಂದ 20 ನಿಮಿಷ ಪ್ರೇಕ್ಷಕರನ್ನು ನಿಬ್ಬೆರಗಾಗಿಸುವಂತೆ ದೃಶ್ಯಗಳನ್ನು ಚಿತ್ರೀಕರಣ ಮಾಡಲಾಗಿದೆ. ಹೀಗಾಗಿ ಸಿನಿಮಾ ನೋಡುತ್ತಿರುವಂತೆಯೇ ಜನರು ರೋಮಾಂಚನವಾಗುತ್ತದೆ. ಈ ಕಾರಣದಿಂದಲೇ ಸಿನಿಮಾದ ಕ್ಲೈಮಾಕ್ಸ್ ನೋಡುತ್ತಿದ್ದಂತೆ ದೈವ ಮೈಮೇಲೆ ಬಂದಂತೆ ಮಹಿಳೆ ವರ್ತಿಸಿದ್ದಾರೆ. ಈ ಘಟನೆ ನಡೆದಿರುವುದು ಮಂಗಳೂರಿನ ಮಾಲ್ ಒಂದರಲ್ಲಿನ ಚಿತ್ರಮಂದಿರದಲ್ಲಿ. ಆದರೆ ಈ ಬಗ್ಗೆ ಅಧಿಕೃತವಾದ ಯಾವುದೇ ಮಾಹಿತಿಗಳನ್ನು ಚಿತ್ರತಂಡ ಪ್ರಕಟಿಸಿಲ್ಲ.
ಈ ಸೂಪರ್ ಚಿತ್ರದ ಪ್ರಯತ್ನದಿಂದ ಸಿನಿಮಾ ಎರಡು ದಿನದಲ್ಲಿ ಬರೋಬ್ಬರಿ 8 ರಿಂದ 9 ಕೋಟಿ ಕಲೆಕ್ಷನ್ ಮಾಡಿದೆ ಎಂದು ಹೇಳಲಾಗಿದೆ.
ವಯನಾಡಿನಲ್ಲಿ ಮತ್ತೊಂದು ಶಿಗೆಲ್ಲಾ ಸೋಂಕು ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ ಹೆಚ್ಚಳವಾಗಿದೆ. ಮಕ್ಕಳಲ್ಲಿ ಸೋಂಕು…
ಕೇರಳ ಮತ್ತು ತ್ರಿಪುರ ನಂತರ ಅಸ್ಸಾಂ ದೇಶದ ಮೂರನೇ ಅತಿದೊಡ್ಡ ರಬ್ಬರ್ ಉತ್ಪಾದಕ…
ಹೆಲಿಕಾಪ್ಟರ್ ಟಿಕೆಟ್ ಬುಕ್ಕಿಂಗ್ ಹೆಸರಿನಲ್ಲಿ ಲಕ್ಷಾಂತರ ವಂಚನೆ ನಡೆಸಿದ ಜಾಲವನ್ನು ದೆಹಲಿ ಪೊಲೀಸರು…
ಮುಂಗಾರು ಮಳೆಯಿಂದ ಅಪಘಾತ ಸಂಭವಿಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ…
ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ಬೆಂಗಳೂರಿನಲ್ಲಿ 30-40…
ದಕ್ಷಿಣ ಭಾರತದ ತೆಂಗು ಹಾಗೂ ಕೊಬ್ಬರಿ ಮಾರುಕಟ್ಟೆಯಲ್ಲಿ ಬೆಲೆಗಳು ಭಾರೀ ಕುಸಿತ ಕಂಡಿದ್ದು,…