ಹೊಂಬಾಳೆ ಬ್ಯಾನರ್ ಅಡಿಯಲ್ಲಿ, ರಿಷಬ್ ಶೆಟ್ಟಿ ಮನೋಜ್ಞ ನಿರ್ದೇಶನ ಮತ್ತು ನಟನೆಯಲ್ಲಿ ಮೂಡಿಬಂದ ಸಿನಿಮಾ ‘ಕಾಂತಾರ’. ತುಳುನಾಡಿನ ದೈವಾರಾಧನೆ ಮತ್ತು ಕಂಬಳದ ಪ್ರಸ್ತುತಿ ಈ ಚಿತ್ರದಲ್ಲಿದೆ. ಹಾಗೆ ಈ ಸಿನಿಮಾ ಕಂಡ ಪ್ರತಿಯೊಬ್ಬರೂ ಕೊಂಡಾಡಿದ್ದಾರೆ. ಎಲ್ಲಾ ವಿಭಾಗದಲ್ಲಿ ಸೂಪರ್ ರಿವ್ಯೂ ಸಿಕ್ಕಿದೆ. ಹೀಗಾಗಿ ಕಾಂತಾರ ಬಿಡುಗಡೆ ಆಗಿರೋ ಚಿತ್ರಮಂದಿರಗಳಲ್ಲಿ ಮೊದಲ ಶೋನಿಂದ ಹೌಸ್ ಫುಲ್ ಬೋರ್ಡ್ ಬಿದ್ದಿದೆ. ಈ ನಡುವೆಯೇ ಕಾಂತಾರ ಸಿನಿಮಾ ವೀಕ್ಷಿಸುತ್ತಿದ್ದ ಮಹಿಳೆಯೊಬ್ಬರ ಮೇಲೆ ದೈವ ಆವಾಹನೆಯಾಗಿದೆ ಎಂದು ತಿಳಿದುಬಂದಿದೆ.
ಈ ಸಿನಿಮಾದ ಕ್ಲೈಮ್ಯಾಕ್ಸ್ ನ 15 ರಿಂದ 20 ನಿಮಿಷ ಪ್ರೇಕ್ಷಕರನ್ನು ನಿಬ್ಬೆರಗಾಗಿಸುವಂತೆ ದೃಶ್ಯಗಳನ್ನು ಚಿತ್ರೀಕರಣ ಮಾಡಲಾಗಿದೆ. ಹೀಗಾಗಿ ಸಿನಿಮಾ ನೋಡುತ್ತಿರುವಂತೆಯೇ ಜನರು ರೋಮಾಂಚನವಾಗುತ್ತದೆ. ಈ ಕಾರಣದಿಂದಲೇ ಸಿನಿಮಾದ ಕ್ಲೈಮಾಕ್ಸ್ ನೋಡುತ್ತಿದ್ದಂತೆ ದೈವ ಮೈಮೇಲೆ ಬಂದಂತೆ ಮಹಿಳೆ ವರ್ತಿಸಿದ್ದಾರೆ. ಈ ಘಟನೆ ನಡೆದಿರುವುದು ಮಂಗಳೂರಿನ ಮಾಲ್ ಒಂದರಲ್ಲಿನ ಚಿತ್ರಮಂದಿರದಲ್ಲಿ. ಆದರೆ ಈ ಬಗ್ಗೆ ಅಧಿಕೃತವಾದ ಯಾವುದೇ ಮಾಹಿತಿಗಳನ್ನು ಚಿತ್ರತಂಡ ಪ್ರಕಟಿಸಿಲ್ಲ.
ಈ ಸೂಪರ್ ಚಿತ್ರದ ಪ್ರಯತ್ನದಿಂದ ಸಿನಿಮಾ ಎರಡು ದಿನದಲ್ಲಿ ಬರೋಬ್ಬರಿ 8 ರಿಂದ 9 ಕೋಟಿ ಕಲೆಕ್ಷನ್ ಮಾಡಿದೆ ಎಂದು ಹೇಳಲಾಗಿದೆ.
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…