ಹೊಂಬಾಳೆ ಬ್ಯಾನರ್ ಅಡಿಯಲ್ಲಿ, ರಿಷಬ್ ಶೆಟ್ಟಿ ಮನೋಜ್ಞ ನಿರ್ದೇಶನ ಮತ್ತು ನಟನೆಯಲ್ಲಿ ಮೂಡಿಬಂದ ಸಿನಿಮಾ ‘ಕಾಂತಾರ’. ತುಳುನಾಡಿನ ದೈವಾರಾಧನೆ ಮತ್ತು ಕಂಬಳದ ಪ್ರಸ್ತುತಿ ಈ ಚಿತ್ರದಲ್ಲಿದೆ. ಹಾಗೆ ಈ ಸಿನಿಮಾ ಕಂಡ ಪ್ರತಿಯೊಬ್ಬರೂ ಕೊಂಡಾಡಿದ್ದಾರೆ. ಎಲ್ಲಾ ವಿಭಾಗದಲ್ಲಿ ಸೂಪರ್ ರಿವ್ಯೂ ಸಿಕ್ಕಿದೆ. ಹೀಗಾಗಿ ಕಾಂತಾರ ಬಿಡುಗಡೆ ಆಗಿರೋ ಚಿತ್ರಮಂದಿರಗಳಲ್ಲಿ ಮೊದಲ ಶೋನಿಂದ ಹೌಸ್ ಫುಲ್ ಬೋರ್ಡ್ ಬಿದ್ದಿದೆ. ಈ ನಡುವೆಯೇ ಕಾಂತಾರ ಸಿನಿಮಾ ವೀಕ್ಷಿಸುತ್ತಿದ್ದ ಮಹಿಳೆಯೊಬ್ಬರ ಮೇಲೆ ದೈವ ಆವಾಹನೆಯಾಗಿದೆ ಎಂದು ತಿಳಿದುಬಂದಿದೆ.
ಈ ಸಿನಿಮಾದ ಕ್ಲೈಮ್ಯಾಕ್ಸ್ ನ 15 ರಿಂದ 20 ನಿಮಿಷ ಪ್ರೇಕ್ಷಕರನ್ನು ನಿಬ್ಬೆರಗಾಗಿಸುವಂತೆ ದೃಶ್ಯಗಳನ್ನು ಚಿತ್ರೀಕರಣ ಮಾಡಲಾಗಿದೆ. ಹೀಗಾಗಿ ಸಿನಿಮಾ ನೋಡುತ್ತಿರುವಂತೆಯೇ ಜನರು ರೋಮಾಂಚನವಾಗುತ್ತದೆ. ಈ ಕಾರಣದಿಂದಲೇ ಸಿನಿಮಾದ ಕ್ಲೈಮಾಕ್ಸ್ ನೋಡುತ್ತಿದ್ದಂತೆ ದೈವ ಮೈಮೇಲೆ ಬಂದಂತೆ ಮಹಿಳೆ ವರ್ತಿಸಿದ್ದಾರೆ. ಈ ಘಟನೆ ನಡೆದಿರುವುದು ಮಂಗಳೂರಿನ ಮಾಲ್ ಒಂದರಲ್ಲಿನ ಚಿತ್ರಮಂದಿರದಲ್ಲಿ. ಆದರೆ ಈ ಬಗ್ಗೆ ಅಧಿಕೃತವಾದ ಯಾವುದೇ ಮಾಹಿತಿಗಳನ್ನು ಚಿತ್ರತಂಡ ಪ್ರಕಟಿಸಿಲ್ಲ.
ಈ ಸೂಪರ್ ಚಿತ್ರದ ಪ್ರಯತ್ನದಿಂದ ಸಿನಿಮಾ ಎರಡು ದಿನದಲ್ಲಿ ಬರೋಬ್ಬರಿ 8 ರಿಂದ 9 ಕೋಟಿ ಕಲೆಕ್ಷನ್ ಮಾಡಿದೆ ಎಂದು ಹೇಳಲಾಗಿದೆ.
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…