ಸುದ್ದಿಗಳು

ಜನರೆಡೆಗೆ ಆಮ್‌ ಆದ್ಮಿ | ನಾಗರಿಕ ಸಮಸ್ಯೆಗಳ ಪರಿಹಾರದ ಕಡೆಗೆ ಹೆಜ್ಜೆ | ಸಾರ್ವಜನಿಕ ಗುಂಪು ಚರ್ಚೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ನಾಗರಿಕ ಸಮಸ್ಯೆಗಳ ಬಗ್ಗೆ ಪ್ರಜೆಗಳ ಸಮಾಲೋಚನೆ, ಸಂವಾದ ನಡೆಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಮೂಲಕ ಆಮ್‌ ಆದ್ಮಿ ಪಾರ್ಟಿಯು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊಸದೊಂದು ಪ್ರಯೋಗ ನಡೆಸುತ್ತಿದೆ.

Advertisement
Advertisement

ಮಂಗಳೂರನ್ನು ಉತ್ತಮ ನಾಗರಿಕ ಸ್ನೇಹಿ ನಗರವನ್ನಾಗಿಸುವ ನಿಟ್ಟಿನಲ್ಲಿ ನಾಗರಿಕ ಕುಂದುಕೊರತೆಗಳನ್ನು ಸಮಾಲೋಚನೆ ನಡೆಸಿ ಪರಿಹಾರ ಕಂಡುಕೊಳ್ಳಲು, ನಗರದ ಮೇಲೆ ಕಾಳಜಿ ಇರುವ ಪ್ರಜ್ಞಾವಂತ ನಾಗರಿಕರ ಗುಂಪು ರಚನೆ ಮಾಡುತ್ತಿದೆ. ಮಂಗಳೂರಿನಲ್ಲಿ ಆರಂಭದ ಹೆಜ್ಜೆ ಇರಿಸುತ್ತಿದ್ದು, ಸಾರ್ವಜನಿಕ ಕಾಳಜಿಯ ರಾಜಕೀಯ ರಹಿತ ಚಿಂತನೆ  ಜನರ ಗುಂಪು ರಚನೆ ಮಾಡಿ ಸಮಸ್ಯೆಗಳ ಬಗ್ಗೆ ಪ್ರಾಮಾಣಿಕ ಸಲಹೆಯನ್ನು ಪಡೆಯುತ್ತಿದೆ. ಈ ಸಮಸ್ಯೆಗಳಿಗೆ ಪರಿಹಾರವನ್ನೂ ಸಿದ್ಧಪಡಿಸಿ ಅಧಿಕಾರಿಗಳಿಗೆ ತಲಪಿಸಿ ಪರಿಹಾರ ಕಂಡುಕೊಳ್ಳುವುದು  ಇದರ ಮುಖ್ಯ ಉದ್ದೇಶ. ಆರಂಭದಲ್ಲಿ ಮಂಗಳೂರು ನಗರದಲ್ಲಿ ಈ ಯೋಜನೆ ಹಮ್ಮಿಕೊಂಡು ಮುಂದೆ ದ ಕ ಜಿಲ್ಲೆಯಾದ್ಯಂತ ವಿಸ್ತರಣೆಯಾಗಲಿದೆ ಎನ್ನುತ್ತಾರೆ ಆಮ್‌ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಸಂತೋಷ್‌ ಕಾಮತ್.

ಈ ಗುಂಪುಗಳಲ್ಲಿ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೂ ಭಾಗವಹಿಸಲು ಅವಕಾಶ ಇದೆ. ಅವರೂ ಈ ಸಮಸ್ಯೆಗಳಿಗೆ ತಮ್ಮ ದೃಷ್ಟಿಕೋನದ ಪರಿಹಾರದ ಬಗ್ಗೆ ಸಲಹೆ ನೀಡಬಹುದಾಗಿದೆ. ಪ್ರತೀ ವಾರ್ಡ್‌ ಗಳ ಅಭಿವೃದ್ಧಿ, ಗ್ರಾಮಗಳ ಅಭಿವೃದ್ಧಿಯ ಮೂಲಕ ನಗರ, ಗ್ರಾಮ, ತಾಲೂಕು ಕೇಂದ್ರಗಳ ಅಭಿವೃದ್ಧಿಯಾಗಲಿದೆ. ಇದಕ್ಕಾಗಿಯೇ ಜನರೊಂದಿಗೆ ಸಂವಾದ ನಡೆಯಬೇಕಿದೆ ಎನ್ನುವುದು  ಇದರ ಉದ್ದೇಶ. ಇಂದು ಹಲವು ಕಡೆಗಳಲ್ಲಿ ಜನರಿಂದಲೇ ಆಯ್ಕೆಯಾದ ಪ್ರತಿನಿಧಿಗಳು ತಮ್ಮ ಕೆಲಸದಲ್ಲಿ ಪ್ರಜೆಗಳು ಹಸ್ತಕ್ಷೇಪ ಮಾಡದಂತೆ ತಡೆಯುವ ಪ್ರಯತ್ನವಾಗುತ್ತದೆ. ಆದರೆ ಜನರಿಂದಲೇ ಆಯ್ಕೆಯಾದ ಬಳಿಕ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕಾದ್ದು ಕೂಡಾ ಕರ್ತವ್ಯ. ಇದರ ಜೊತೆಗೆ ನಮ್ಮ ತೆರಿಗೆ ಹಣ, ಪೋಲಾಗದಂತೆ, ಯಾರೂ ಮೋಸ ವಂಚನೆ ಮಾಡದಂತೆಯೂ ಎಚ್ಚರ ವಹಿಸಬೇಕಾಗಿದೆ. ಈ ಎಲ್ಲಾ ಕಾರಣಗಳಿಂದ ಜನರೊಂದಿಗೆ ಸಂವಾದವು ಹೆಚ್ಚು ಫಲ ನೀಡಲಿದೆ ಎನ್ನುವುದು  ಈ ಸಂವಾದಗಳ ಉದ್ದೇಶವಾಗಿದೆ. ಆಮ್‌ ಆದ್ಮಿ ಪಾರ್ಟಿ ಈ ಮೂಲಕ ಹೊಸದೊಂದು ಹೆಜ್ಜೆಯನ್ನು ಇರಿಸಿದೆ.

ಈಗಾಗಲೇ ಮಂಗಳೂರಿನ ಸಿವಿಕ್‌ ಗ್ರೂಪ್‌ ಜೊತೆ ಚರ್ಚೆ ನಡೆಸಿದ ಆಮ್‌ ಆದ್ಮಿ ಪಕ್ಷವು ಮಂಗಳೂರಿನ ನಗರದ ಹಲವು ಮೂಲಭೂತ ಸಮಸ್ಯೆಗಳ ಕಡೆಗೆ ಗಮನಹರಿಸಿದೆ. ರಾಜಕೀಯ ರಹಿತ ವ್ಯಕ್ತಿಗಳ ಜೊತೆಗೆ ನಿರಂತರ ಸಂಪರ್ಕದಲ್ಲಿದ್ದು ಅಂತಹ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಈಗಾಗಲೇ ಮಂಗಳೂರಿನಲ್ಲಿ ಆಮ್‌ ಆದ್ಮಿ ಪಕ್ಷ ಹೆಜ್ಜೆ ಇರಿಸಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಇಂದಿನಿಂದ ಕರಾವಳಿ-ಮಲೆನಾಡು ಜಿಲ್ಲೆಗಳಲ್ಲಿ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಆರಂಭವಾಗಲಿದೆ. ಅಲ್ಲಲ್ಲಿ ಸಾಧಾರಣ…

6 minutes ago

ಮೃಗಶಿರ ನಕ್ಷತ್ರಕ್ಕೆ ಸೂರ್ಯನ ಪ್ರವೇಶ | ಈ ಮೂರು ರಾಶಿಗಳ ಅದೃಷ್ಟ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರವ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕತೆ 9535156490

18 minutes ago

ಬದುಕು ಪುರಾಣ | ಅಂದು ಒಬ್ಬ ಬಕಾಸುರ.. ಇಂದು?

ಭೋಜನವೆಂದರೆ ಉದರಾಗ್ನಿಯನ್ನು ತಣಿಸುವ ಯಜ್ಞ. ಉದರಾಗ್ನಿಗೆ ಖಾದ್ಯಗಳೇ ಆಜ್ಯಗಳು. ಯಜ್ಞವೆಂದಾಗ ಶ್ರದ್ಧೆ, ಭಕ್ತಿ ಮತ್ತು…

23 hours ago

ಪರಿಘ ಯೋಗ, ಈ 5 ರಾಶಿಗೆ ಅತ್ಯಂತ ಶುಭ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

24 hours ago

ಹವಾಮಾನ ವರದಿ | 07-06-2025 | ಜೂನ್ 11 ರಿಂದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆ

ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಇದರ ಪ್ರಭಾವದಿಂದ ಜೂನ್ 11 ರಿಂದ…

2 days ago

ಸುಸ್ಥಿರ ಅಭಿವೃದ್ಧಿ ಯಾವಾಗಲೂ ತತ್ವಶಾಸ್ತ್ರ ಮತ್ತು ಸಿದ್ಧಾಂತದ ಮೂಲತತ್ವಾಗಿದೆ

ಇತ್ತೀಚಿನ  ದಿನಗಳಲ್ಲಿ ಮಾಲಿನ್ಯದ ಬಗ್ಗೆ ಹೆಚ್ಚುತ್ತಿರುವ ಕಾಳಜಿ, ಪರಿಸರ ಸಂರಕ್ಷಣೆಯ ಬಗ್ಗೆ ಚಿಂತಿಸುವಂತೆ…

2 days ago