Advertisement
ಸುದ್ದಿಗಳು

ಜನರೆಡೆಗೆ ಆಮ್‌ ಆದ್ಮಿ | ನಾಗರಿಕ ಸಮಸ್ಯೆಗಳ ಪರಿಹಾರದ ಕಡೆಗೆ ಹೆಜ್ಜೆ | ಸಾರ್ವಜನಿಕ ಗುಂಪು ಚರ್ಚೆ |

Share

ನಾಗರಿಕ ಸಮಸ್ಯೆಗಳ ಬಗ್ಗೆ ಪ್ರಜೆಗಳ ಸಮಾಲೋಚನೆ, ಸಂವಾದ ನಡೆಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಮೂಲಕ ಆಮ್‌ ಆದ್ಮಿ ಪಾರ್ಟಿಯು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊಸದೊಂದು ಪ್ರಯೋಗ ನಡೆಸುತ್ತಿದೆ.

ಮಂಗಳೂರನ್ನು ಉತ್ತಮ ನಾಗರಿಕ ಸ್ನೇಹಿ ನಗರವನ್ನಾಗಿಸುವ ನಿಟ್ಟಿನಲ್ಲಿ ನಾಗರಿಕ ಕುಂದುಕೊರತೆಗಳನ್ನು ಸಮಾಲೋಚನೆ ನಡೆಸಿ ಪರಿಹಾರ ಕಂಡುಕೊಳ್ಳಲು, ನಗರದ ಮೇಲೆ ಕಾಳಜಿ ಇರುವ ಪ್ರಜ್ಞಾವಂತ ನಾಗರಿಕರ ಗುಂಪು ರಚನೆ ಮಾಡುತ್ತಿದೆ. ಮಂಗಳೂರಿನಲ್ಲಿ ಆರಂಭದ ಹೆಜ್ಜೆ ಇರಿಸುತ್ತಿದ್ದು, ಸಾರ್ವಜನಿಕ ಕಾಳಜಿಯ ರಾಜಕೀಯ ರಹಿತ ಚಿಂತನೆ  ಜನರ ಗುಂಪು ರಚನೆ ಮಾಡಿ ಸಮಸ್ಯೆಗಳ ಬಗ್ಗೆ ಪ್ರಾಮಾಣಿಕ ಸಲಹೆಯನ್ನು ಪಡೆಯುತ್ತಿದೆ. ಈ ಸಮಸ್ಯೆಗಳಿಗೆ ಪರಿಹಾರವನ್ನೂ ಸಿದ್ಧಪಡಿಸಿ ಅಧಿಕಾರಿಗಳಿಗೆ ತಲಪಿಸಿ ಪರಿಹಾರ ಕಂಡುಕೊಳ್ಳುವುದು  ಇದರ ಮುಖ್ಯ ಉದ್ದೇಶ. ಆರಂಭದಲ್ಲಿ ಮಂಗಳೂರು ನಗರದಲ್ಲಿ ಈ ಯೋಜನೆ ಹಮ್ಮಿಕೊಂಡು ಮುಂದೆ ದ ಕ ಜಿಲ್ಲೆಯಾದ್ಯಂತ ವಿಸ್ತರಣೆಯಾಗಲಿದೆ ಎನ್ನುತ್ತಾರೆ ಆಮ್‌ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಸಂತೋಷ್‌ ಕಾಮತ್.

ಈ ಗುಂಪುಗಳಲ್ಲಿ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೂ ಭಾಗವಹಿಸಲು ಅವಕಾಶ ಇದೆ. ಅವರೂ ಈ ಸಮಸ್ಯೆಗಳಿಗೆ ತಮ್ಮ ದೃಷ್ಟಿಕೋನದ ಪರಿಹಾರದ ಬಗ್ಗೆ ಸಲಹೆ ನೀಡಬಹುದಾಗಿದೆ. ಪ್ರತೀ ವಾರ್ಡ್‌ ಗಳ ಅಭಿವೃದ್ಧಿ, ಗ್ರಾಮಗಳ ಅಭಿವೃದ್ಧಿಯ ಮೂಲಕ ನಗರ, ಗ್ರಾಮ, ತಾಲೂಕು ಕೇಂದ್ರಗಳ ಅಭಿವೃದ್ಧಿಯಾಗಲಿದೆ. ಇದಕ್ಕಾಗಿಯೇ ಜನರೊಂದಿಗೆ ಸಂವಾದ ನಡೆಯಬೇಕಿದೆ ಎನ್ನುವುದು  ಇದರ ಉದ್ದೇಶ. ಇಂದು ಹಲವು ಕಡೆಗಳಲ್ಲಿ ಜನರಿಂದಲೇ ಆಯ್ಕೆಯಾದ ಪ್ರತಿನಿಧಿಗಳು ತಮ್ಮ ಕೆಲಸದಲ್ಲಿ ಪ್ರಜೆಗಳು ಹಸ್ತಕ್ಷೇಪ ಮಾಡದಂತೆ ತಡೆಯುವ ಪ್ರಯತ್ನವಾಗುತ್ತದೆ. ಆದರೆ ಜನರಿಂದಲೇ ಆಯ್ಕೆಯಾದ ಬಳಿಕ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕಾದ್ದು ಕೂಡಾ ಕರ್ತವ್ಯ. ಇದರ ಜೊತೆಗೆ ನಮ್ಮ ತೆರಿಗೆ ಹಣ, ಪೋಲಾಗದಂತೆ, ಯಾರೂ ಮೋಸ ವಂಚನೆ ಮಾಡದಂತೆಯೂ ಎಚ್ಚರ ವಹಿಸಬೇಕಾಗಿದೆ. ಈ ಎಲ್ಲಾ ಕಾರಣಗಳಿಂದ ಜನರೊಂದಿಗೆ ಸಂವಾದವು ಹೆಚ್ಚು ಫಲ ನೀಡಲಿದೆ ಎನ್ನುವುದು  ಈ ಸಂವಾದಗಳ ಉದ್ದೇಶವಾಗಿದೆ. ಆಮ್‌ ಆದ್ಮಿ ಪಾರ್ಟಿ ಈ ಮೂಲಕ ಹೊಸದೊಂದು ಹೆಜ್ಜೆಯನ್ನು ಇರಿಸಿದೆ.

ಈಗಾಗಲೇ ಮಂಗಳೂರಿನ ಸಿವಿಕ್‌ ಗ್ರೂಪ್‌ ಜೊತೆ ಚರ್ಚೆ ನಡೆಸಿದ ಆಮ್‌ ಆದ್ಮಿ ಪಕ್ಷವು ಮಂಗಳೂರಿನ ನಗರದ ಹಲವು ಮೂಲಭೂತ ಸಮಸ್ಯೆಗಳ ಕಡೆಗೆ ಗಮನಹರಿಸಿದೆ. ರಾಜಕೀಯ ರಹಿತ ವ್ಯಕ್ತಿಗಳ ಜೊತೆಗೆ ನಿರಂತರ ಸಂಪರ್ಕದಲ್ಲಿದ್ದು ಅಂತಹ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಈಗಾಗಲೇ ಮಂಗಳೂರಿನಲ್ಲಿ ಆಮ್‌ ಆದ್ಮಿ ಪಕ್ಷ ಹೆಜ್ಜೆ ಇರಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

14 hours ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

21 hours ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

21 hours ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

22 hours ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

1 day ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

1 day ago