Advertisement
ಸುದ್ದಿಗಳು

ಜನರೆಡೆಗೆ ಆಮ್‌ ಆದ್ಮಿ | ನಾಗರಿಕ ಸಮಸ್ಯೆಗಳ ಪರಿಹಾರದ ಕಡೆಗೆ ಹೆಜ್ಜೆ | ಸಾರ್ವಜನಿಕ ಗುಂಪು ಚರ್ಚೆ |

Share

ನಾಗರಿಕ ಸಮಸ್ಯೆಗಳ ಬಗ್ಗೆ ಪ್ರಜೆಗಳ ಸಮಾಲೋಚನೆ, ಸಂವಾದ ನಡೆಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಮೂಲಕ ಆಮ್‌ ಆದ್ಮಿ ಪಾರ್ಟಿಯು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊಸದೊಂದು ಪ್ರಯೋಗ ನಡೆಸುತ್ತಿದೆ.

ಮಂಗಳೂರನ್ನು ಉತ್ತಮ ನಾಗರಿಕ ಸ್ನೇಹಿ ನಗರವನ್ನಾಗಿಸುವ ನಿಟ್ಟಿನಲ್ಲಿ ನಾಗರಿಕ ಕುಂದುಕೊರತೆಗಳನ್ನು ಸಮಾಲೋಚನೆ ನಡೆಸಿ ಪರಿಹಾರ ಕಂಡುಕೊಳ್ಳಲು, ನಗರದ ಮೇಲೆ ಕಾಳಜಿ ಇರುವ ಪ್ರಜ್ಞಾವಂತ ನಾಗರಿಕರ ಗುಂಪು ರಚನೆ ಮಾಡುತ್ತಿದೆ. ಮಂಗಳೂರಿನಲ್ಲಿ ಆರಂಭದ ಹೆಜ್ಜೆ ಇರಿಸುತ್ತಿದ್ದು, ಸಾರ್ವಜನಿಕ ಕಾಳಜಿಯ ರಾಜಕೀಯ ರಹಿತ ಚಿಂತನೆ  ಜನರ ಗುಂಪು ರಚನೆ ಮಾಡಿ ಸಮಸ್ಯೆಗಳ ಬಗ್ಗೆ ಪ್ರಾಮಾಣಿಕ ಸಲಹೆಯನ್ನು ಪಡೆಯುತ್ತಿದೆ. ಈ ಸಮಸ್ಯೆಗಳಿಗೆ ಪರಿಹಾರವನ್ನೂ ಸಿದ್ಧಪಡಿಸಿ ಅಧಿಕಾರಿಗಳಿಗೆ ತಲಪಿಸಿ ಪರಿಹಾರ ಕಂಡುಕೊಳ್ಳುವುದು  ಇದರ ಮುಖ್ಯ ಉದ್ದೇಶ. ಆರಂಭದಲ್ಲಿ ಮಂಗಳೂರು ನಗರದಲ್ಲಿ ಈ ಯೋಜನೆ ಹಮ್ಮಿಕೊಂಡು ಮುಂದೆ ದ ಕ ಜಿಲ್ಲೆಯಾದ್ಯಂತ ವಿಸ್ತರಣೆಯಾಗಲಿದೆ ಎನ್ನುತ್ತಾರೆ ಆಮ್‌ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಸಂತೋಷ್‌ ಕಾಮತ್.

ಈ ಗುಂಪುಗಳಲ್ಲಿ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೂ ಭಾಗವಹಿಸಲು ಅವಕಾಶ ಇದೆ. ಅವರೂ ಈ ಸಮಸ್ಯೆಗಳಿಗೆ ತಮ್ಮ ದೃಷ್ಟಿಕೋನದ ಪರಿಹಾರದ ಬಗ್ಗೆ ಸಲಹೆ ನೀಡಬಹುದಾಗಿದೆ. ಪ್ರತೀ ವಾರ್ಡ್‌ ಗಳ ಅಭಿವೃದ್ಧಿ, ಗ್ರಾಮಗಳ ಅಭಿವೃದ್ಧಿಯ ಮೂಲಕ ನಗರ, ಗ್ರಾಮ, ತಾಲೂಕು ಕೇಂದ್ರಗಳ ಅಭಿವೃದ್ಧಿಯಾಗಲಿದೆ. ಇದಕ್ಕಾಗಿಯೇ ಜನರೊಂದಿಗೆ ಸಂವಾದ ನಡೆಯಬೇಕಿದೆ ಎನ್ನುವುದು  ಇದರ ಉದ್ದೇಶ. ಇಂದು ಹಲವು ಕಡೆಗಳಲ್ಲಿ ಜನರಿಂದಲೇ ಆಯ್ಕೆಯಾದ ಪ್ರತಿನಿಧಿಗಳು ತಮ್ಮ ಕೆಲಸದಲ್ಲಿ ಪ್ರಜೆಗಳು ಹಸ್ತಕ್ಷೇಪ ಮಾಡದಂತೆ ತಡೆಯುವ ಪ್ರಯತ್ನವಾಗುತ್ತದೆ. ಆದರೆ ಜನರಿಂದಲೇ ಆಯ್ಕೆಯಾದ ಬಳಿಕ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕಾದ್ದು ಕೂಡಾ ಕರ್ತವ್ಯ. ಇದರ ಜೊತೆಗೆ ನಮ್ಮ ತೆರಿಗೆ ಹಣ, ಪೋಲಾಗದಂತೆ, ಯಾರೂ ಮೋಸ ವಂಚನೆ ಮಾಡದಂತೆಯೂ ಎಚ್ಚರ ವಹಿಸಬೇಕಾಗಿದೆ. ಈ ಎಲ್ಲಾ ಕಾರಣಗಳಿಂದ ಜನರೊಂದಿಗೆ ಸಂವಾದವು ಹೆಚ್ಚು ಫಲ ನೀಡಲಿದೆ ಎನ್ನುವುದು  ಈ ಸಂವಾದಗಳ ಉದ್ದೇಶವಾಗಿದೆ. ಆಮ್‌ ಆದ್ಮಿ ಪಾರ್ಟಿ ಈ ಮೂಲಕ ಹೊಸದೊಂದು ಹೆಜ್ಜೆಯನ್ನು ಇರಿಸಿದೆ.

ಈಗಾಗಲೇ ಮಂಗಳೂರಿನ ಸಿವಿಕ್‌ ಗ್ರೂಪ್‌ ಜೊತೆ ಚರ್ಚೆ ನಡೆಸಿದ ಆಮ್‌ ಆದ್ಮಿ ಪಕ್ಷವು ಮಂಗಳೂರಿನ ನಗರದ ಹಲವು ಮೂಲಭೂತ ಸಮಸ್ಯೆಗಳ ಕಡೆಗೆ ಗಮನಹರಿಸಿದೆ. ರಾಜಕೀಯ ರಹಿತ ವ್ಯಕ್ತಿಗಳ ಜೊತೆಗೆ ನಿರಂತರ ಸಂಪರ್ಕದಲ್ಲಿದ್ದು ಅಂತಹ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಈಗಾಗಲೇ ಮಂಗಳೂರಿನಲ್ಲಿ ಆಮ್‌ ಆದ್ಮಿ ಪಕ್ಷ ಹೆಜ್ಜೆ ಇರಿಸಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

3 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

9 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

17 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

20 hours ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

1 day ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

1 day ago