ಬೈಂದೂರು | ಕಡಲ ತೀರದ ಸ್ವಚ್ಛತೆಯ 100ನೇ ವಾರದ ‘ಕ್ಲೀನ್ ಕಿನಾರ’ ಕಾರ್ಯಕ್ರಮ | 50 ಟನ್ ಗಳಷ್ಟು ಕಸ ಸಂಗ್ರಹಿಸಿ ವಿಲೇವಾರಿ |

April 29, 2025
9:00 AM

ಕಡಲ ತೀರದ ಸ್ವಚ್ಛತೆಯ 100ನೇ ವಾರದ ‘ಕ್ಲೀನ್ ಕಿನಾರ’ ಕಾರ್ಯಕ್ರಮಕ್ಕೆ ಶಾಸಕ ಗುರುರಾಜ್ ಗಂಟಿ ಹೊಳೆ ಅವರು ಸೋಮೇಶ್ವರ ಕಡಲ ತೀರದಲ್ಲಿ  ಚಾಲನೆ ನೀಡಿದರು. ಈ ಸಂದರ್ಭ ಕಡಲಿನ ಸುತ್ತ ಸಂಗ್ರಹವಾದ ಕಸವನ್ನು ಸಂಗ್ರಹಿಸಿ, ವಿಲೇವಾರಿ ಮಾಡಲಾಯಿತು.

ಈ ಸಂದರ್ಭ ಮಾತನಾಡಿದ ಶಾಸಕ ಗುರುರಾಜ್ ಗಂಟಿಹೊಳೆ, ಕ್ಲೀನ್ ಕಿನಾರೆ ಕಾರ್ಯಕ್ರಮದ ಮೂಲಕ ಕಡಲಿನ ಪರಿಸರ ಸ್ವಚ್ಛವಾಗಿದ್ದು, ಕಡಲಾಮೆಗಳು ಸಮುದ್ರ ತೀರಕ್ಕೆ ಬಂದು ಮೊಟ್ಟೆ ಇಡುತ್ತಿರುವುದು ಸಂತಸದ ಸಂಗತಿ ಎಂದರು.

ಬೈಂದೂರು ಕ್ಷೇತ್ರದ ಶಿರೂರಿನಿಂದ ಗಂಗೊಳ್ಳಿವರೆಗಿನ ಕಡಲ ತಡಿ ಸ್ವಚ್ಛತೆ ಮಾಡಲಾಗಿದ್ದು, ಸುಮಾರು 50 ಟನ್ ಗಳಷ್ಟು ಕಸ ಸಂಗ್ರಹಿಸಿ ವಿಲೇವಾರಿ ಮಾಡಲಾಗಿದೆ ಎಂದು ಕ್ಲೀನ್ ಕಿನಾರ ಸಂಯೋಜಕ ಸುಬ್ರಹ್ಮಣ್ಯ ಶ್ಯಾನುಭಾಗ್ ತಿಳಿಸಿದರು.

ಕ್ಲೀನ್ ಕಿನಾರೆ ಸದಸ್ಯೆ ಸೌಮ್ಯ ಗುರುರಾಜ್, ಪ್ರಕೃತಿ ಎಲ್ಲರಿಗೂ ಜೀವಿಸುವ ಹಕ್ಕು ನೀಡಿದೆ. ಪರಿಸರವನ್ನು ಸ್ವಚ್ಛವಾಗಿಡುವುದು ನಮ್ಮೆಲ್ಲರ ಕರ್ತವ್ಯ ಎಂದರು.

ಈ ವೇಳೆ ಪರಿಸರ ಪ್ರೇಮಿ ಮಾನಸ ಭಟ್, ಕರಾವಳಿ ಕಾವಲು ಪಡೆಯ ಉಪ ನಿರೀಕ್ಷಕ ಸುಬ್ರಹ್ಮಣ್ಯ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’
April 15, 2026
10:40 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!
April 15, 2026
2:01 PM
by: ಸಾಯಿಶೇಖರ್ ಕರಿಕಳ
ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!
April 15, 2026
8:02 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ
April 15, 2026
7:47 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror