ಬೈಂದೂರು | ಕಡಲ ತೀರದ ಸ್ವಚ್ಛತೆಯ 100ನೇ ವಾರದ ‘ಕ್ಲೀನ್ ಕಿನಾರ’ ಕಾರ್ಯಕ್ರಮ | 50 ಟನ್ ಗಳಷ್ಟು ಕಸ ಸಂಗ್ರಹಿಸಿ ವಿಲೇವಾರಿ |

April 29, 2025
9:00 AM

ಕಡಲ ತೀರದ ಸ್ವಚ್ಛತೆಯ 100ನೇ ವಾರದ ‘ಕ್ಲೀನ್ ಕಿನಾರ’ ಕಾರ್ಯಕ್ರಮಕ್ಕೆ ಶಾಸಕ ಗುರುರಾಜ್ ಗಂಟಿ ಹೊಳೆ ಅವರು ಸೋಮೇಶ್ವರ ಕಡಲ ತೀರದಲ್ಲಿ  ಚಾಲನೆ ನೀಡಿದರು. ಈ ಸಂದರ್ಭ ಕಡಲಿನ ಸುತ್ತ ಸಂಗ್ರಹವಾದ ಕಸವನ್ನು ಸಂಗ್ರಹಿಸಿ, ವಿಲೇವಾರಿ ಮಾಡಲಾಯಿತು.

ಈ ಸಂದರ್ಭ ಮಾತನಾಡಿದ ಶಾಸಕ ಗುರುರಾಜ್ ಗಂಟಿಹೊಳೆ, ಕ್ಲೀನ್ ಕಿನಾರೆ ಕಾರ್ಯಕ್ರಮದ ಮೂಲಕ ಕಡಲಿನ ಪರಿಸರ ಸ್ವಚ್ಛವಾಗಿದ್ದು, ಕಡಲಾಮೆಗಳು ಸಮುದ್ರ ತೀರಕ್ಕೆ ಬಂದು ಮೊಟ್ಟೆ ಇಡುತ್ತಿರುವುದು ಸಂತಸದ ಸಂಗತಿ ಎಂದರು.

ಬೈಂದೂರು ಕ್ಷೇತ್ರದ ಶಿರೂರಿನಿಂದ ಗಂಗೊಳ್ಳಿವರೆಗಿನ ಕಡಲ ತಡಿ ಸ್ವಚ್ಛತೆ ಮಾಡಲಾಗಿದ್ದು, ಸುಮಾರು 50 ಟನ್ ಗಳಷ್ಟು ಕಸ ಸಂಗ್ರಹಿಸಿ ವಿಲೇವಾರಿ ಮಾಡಲಾಗಿದೆ ಎಂದು ಕ್ಲೀನ್ ಕಿನಾರ ಸಂಯೋಜಕ ಸುಬ್ರಹ್ಮಣ್ಯ ಶ್ಯಾನುಭಾಗ್ ತಿಳಿಸಿದರು.

ಕ್ಲೀನ್ ಕಿನಾರೆ ಸದಸ್ಯೆ ಸೌಮ್ಯ ಗುರುರಾಜ್, ಪ್ರಕೃತಿ ಎಲ್ಲರಿಗೂ ಜೀವಿಸುವ ಹಕ್ಕು ನೀಡಿದೆ. ಪರಿಸರವನ್ನು ಸ್ವಚ್ಛವಾಗಿಡುವುದು ನಮ್ಮೆಲ್ಲರ ಕರ್ತವ್ಯ ಎಂದರು.

ಈ ವೇಳೆ ಪರಿಸರ ಪ್ರೇಮಿ ಮಾನಸ ಭಟ್, ಕರಾವಳಿ ಕಾವಲು ಪಡೆಯ ಉಪ ನಿರೀಕ್ಷಕ ಸುಬ್ರಹ್ಮಣ್ಯ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ಕತ್ತರಿಸಿ ಹಲಸು ನೆಟ್ಟ ಕೃಷಿಕ
July 5, 2026
11:19 PM
by: ದ ರೂರಲ್ ಮಿರರ್.ಕಾಂ
ಅಡಿಕೆಯಿಂದ ಹಲಸಿನತ್ತ “ಸಂತೋಷ” ಪಯಣ – ನೀರಿನ ಕೊರತೆಯ ಸವಾಲನ್ನು ಅವಕಾಶವಾಗಿಸಿದ ಕೃಷಿಕ
July 5, 2026
5:47 PM
by: ಮಹೇಶ್ ಪುಚ್ಚಪ್ಪಾಡಿ
ಬಾಳ ಮಧ್ಯಾಹ್ನದ ಲಹರಿ
July 5, 2026
3:10 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 05-07-2026 | ರಾಜ್ಯದಲ್ಲಿ ಮಳೆ ಇಳಿಮುಖದತ್ತ? ಜುಲೈ 8–10 ರಿಂದ ಹವಾಮಾನದಲ್ಲಿ ಬದಲಾವಣೆ ಸಾಧ್ಯತೆ
July 5, 2026
2:32 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror