ಕಡಲ ತೀರದ ಸ್ವಚ್ಛತೆಯ 100ನೇ ವಾರದ ‘ಕ್ಲೀನ್ ಕಿನಾರ’ ಕಾರ್ಯಕ್ರಮಕ್ಕೆ ಶಾಸಕ ಗುರುರಾಜ್ ಗಂಟಿ ಹೊಳೆ ಅವರು ಸೋಮೇಶ್ವರ ಕಡಲ ತೀರದಲ್ಲಿ ಚಾಲನೆ ನೀಡಿದರು. ಈ ಸಂದರ್ಭ ಕಡಲಿನ ಸುತ್ತ ಸಂಗ್ರಹವಾದ ಕಸವನ್ನು ಸಂಗ್ರಹಿಸಿ, ವಿಲೇವಾರಿ ಮಾಡಲಾಯಿತು.
ಈ ಸಂದರ್ಭ ಮಾತನಾಡಿದ ಶಾಸಕ ಗುರುರಾಜ್ ಗಂಟಿಹೊಳೆ, ಕ್ಲೀನ್ ಕಿನಾರೆ ಕಾರ್ಯಕ್ರಮದ ಮೂಲಕ ಕಡಲಿನ ಪರಿಸರ ಸ್ವಚ್ಛವಾಗಿದ್ದು, ಕಡಲಾಮೆಗಳು ಸಮುದ್ರ ತೀರಕ್ಕೆ ಬಂದು ಮೊಟ್ಟೆ ಇಡುತ್ತಿರುವುದು ಸಂತಸದ ಸಂಗತಿ ಎಂದರು.
ಬೈಂದೂರು ಕ್ಷೇತ್ರದ ಶಿರೂರಿನಿಂದ ಗಂಗೊಳ್ಳಿವರೆಗಿನ ಕಡಲ ತಡಿ ಸ್ವಚ್ಛತೆ ಮಾಡಲಾಗಿದ್ದು, ಸುಮಾರು 50 ಟನ್ ಗಳಷ್ಟು ಕಸ ಸಂಗ್ರಹಿಸಿ ವಿಲೇವಾರಿ ಮಾಡಲಾಗಿದೆ ಎಂದು ಕ್ಲೀನ್ ಕಿನಾರ ಸಂಯೋಜಕ ಸುಬ್ರಹ್ಮಣ್ಯ ಶ್ಯಾನುಭಾಗ್ ತಿಳಿಸಿದರು.
ಕ್ಲೀನ್ ಕಿನಾರೆ ಸದಸ್ಯೆ ಸೌಮ್ಯ ಗುರುರಾಜ್, ಪ್ರಕೃತಿ ಎಲ್ಲರಿಗೂ ಜೀವಿಸುವ ಹಕ್ಕು ನೀಡಿದೆ. ಪರಿಸರವನ್ನು ಸ್ವಚ್ಛವಾಗಿಡುವುದು ನಮ್ಮೆಲ್ಲರ ಕರ್ತವ್ಯ ಎಂದರು.
ಈ ವೇಳೆ ಪರಿಸರ ಪ್ರೇಮಿ ಮಾನಸ ಭಟ್, ಕರಾವಳಿ ಕಾವಲು ಪಡೆಯ ಉಪ ನಿರೀಕ್ಷಕ ಸುಬ್ರಹ್ಮಣ್ಯ ಮತ್ತಿತರರು ಉಪಸ್ಥಿತರಿದ್ದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…