ಕಡಲ ತೀರದ ಸ್ವಚ್ಛತೆಯ 100ನೇ ವಾರದ ‘ಕ್ಲೀನ್ ಕಿನಾರ’ ಕಾರ್ಯಕ್ರಮಕ್ಕೆ ಶಾಸಕ ಗುರುರಾಜ್ ಗಂಟಿ ಹೊಳೆ ಅವರು ಸೋಮೇಶ್ವರ ಕಡಲ ತೀರದಲ್ಲಿ ಚಾಲನೆ ನೀಡಿದರು. ಈ ಸಂದರ್ಭ ಕಡಲಿನ ಸುತ್ತ ಸಂಗ್ರಹವಾದ ಕಸವನ್ನು ಸಂಗ್ರಹಿಸಿ, ವಿಲೇವಾರಿ ಮಾಡಲಾಯಿತು.
ಈ ಸಂದರ್ಭ ಮಾತನಾಡಿದ ಶಾಸಕ ಗುರುರಾಜ್ ಗಂಟಿಹೊಳೆ, ಕ್ಲೀನ್ ಕಿನಾರೆ ಕಾರ್ಯಕ್ರಮದ ಮೂಲಕ ಕಡಲಿನ ಪರಿಸರ ಸ್ವಚ್ಛವಾಗಿದ್ದು, ಕಡಲಾಮೆಗಳು ಸಮುದ್ರ ತೀರಕ್ಕೆ ಬಂದು ಮೊಟ್ಟೆ ಇಡುತ್ತಿರುವುದು ಸಂತಸದ ಸಂಗತಿ ಎಂದರು.
ಬೈಂದೂರು ಕ್ಷೇತ್ರದ ಶಿರೂರಿನಿಂದ ಗಂಗೊಳ್ಳಿವರೆಗಿನ ಕಡಲ ತಡಿ ಸ್ವಚ್ಛತೆ ಮಾಡಲಾಗಿದ್ದು, ಸುಮಾರು 50 ಟನ್ ಗಳಷ್ಟು ಕಸ ಸಂಗ್ರಹಿಸಿ ವಿಲೇವಾರಿ ಮಾಡಲಾಗಿದೆ ಎಂದು ಕ್ಲೀನ್ ಕಿನಾರ ಸಂಯೋಜಕ ಸುಬ್ರಹ್ಮಣ್ಯ ಶ್ಯಾನುಭಾಗ್ ತಿಳಿಸಿದರು.
ಕ್ಲೀನ್ ಕಿನಾರೆ ಸದಸ್ಯೆ ಸೌಮ್ಯ ಗುರುರಾಜ್, ಪ್ರಕೃತಿ ಎಲ್ಲರಿಗೂ ಜೀವಿಸುವ ಹಕ್ಕು ನೀಡಿದೆ. ಪರಿಸರವನ್ನು ಸ್ವಚ್ಛವಾಗಿಡುವುದು ನಮ್ಮೆಲ್ಲರ ಕರ್ತವ್ಯ ಎಂದರು.
ಈ ವೇಳೆ ಪರಿಸರ ಪ್ರೇಮಿ ಮಾನಸ ಭಟ್, ಕರಾವಳಿ ಕಾವಲು ಪಡೆಯ ಉಪ ನಿರೀಕ್ಷಕ ಸುಬ್ರಹ್ಮಣ್ಯ ಮತ್ತಿತರರು ಉಪಸ್ಥಿತರಿದ್ದರು.
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…