ಕಡಲ ತೀರದ ಸ್ವಚ್ಛತೆಯ 100ನೇ ವಾರದ ‘ಕ್ಲೀನ್ ಕಿನಾರ’ ಕಾರ್ಯಕ್ರಮಕ್ಕೆ ಶಾಸಕ ಗುರುರಾಜ್ ಗಂಟಿ ಹೊಳೆ ಅವರು ಸೋಮೇಶ್ವರ ಕಡಲ ತೀರದಲ್ಲಿ ಚಾಲನೆ ನೀಡಿದರು. ಈ ಸಂದರ್ಭ ಕಡಲಿನ ಸುತ್ತ ಸಂಗ್ರಹವಾದ ಕಸವನ್ನು ಸಂಗ್ರಹಿಸಿ, ವಿಲೇವಾರಿ ಮಾಡಲಾಯಿತು.
ಈ ಸಂದರ್ಭ ಮಾತನಾಡಿದ ಶಾಸಕ ಗುರುರಾಜ್ ಗಂಟಿಹೊಳೆ, ಕ್ಲೀನ್ ಕಿನಾರೆ ಕಾರ್ಯಕ್ರಮದ ಮೂಲಕ ಕಡಲಿನ ಪರಿಸರ ಸ್ವಚ್ಛವಾಗಿದ್ದು, ಕಡಲಾಮೆಗಳು ಸಮುದ್ರ ತೀರಕ್ಕೆ ಬಂದು ಮೊಟ್ಟೆ ಇಡುತ್ತಿರುವುದು ಸಂತಸದ ಸಂಗತಿ ಎಂದರು.
ಬೈಂದೂರು ಕ್ಷೇತ್ರದ ಶಿರೂರಿನಿಂದ ಗಂಗೊಳ್ಳಿವರೆಗಿನ ಕಡಲ ತಡಿ ಸ್ವಚ್ಛತೆ ಮಾಡಲಾಗಿದ್ದು, ಸುಮಾರು 50 ಟನ್ ಗಳಷ್ಟು ಕಸ ಸಂಗ್ರಹಿಸಿ ವಿಲೇವಾರಿ ಮಾಡಲಾಗಿದೆ ಎಂದು ಕ್ಲೀನ್ ಕಿನಾರ ಸಂಯೋಜಕ ಸುಬ್ರಹ್ಮಣ್ಯ ಶ್ಯಾನುಭಾಗ್ ತಿಳಿಸಿದರು.
ಕ್ಲೀನ್ ಕಿನಾರೆ ಸದಸ್ಯೆ ಸೌಮ್ಯ ಗುರುರಾಜ್, ಪ್ರಕೃತಿ ಎಲ್ಲರಿಗೂ ಜೀವಿಸುವ ಹಕ್ಕು ನೀಡಿದೆ. ಪರಿಸರವನ್ನು ಸ್ವಚ್ಛವಾಗಿಡುವುದು ನಮ್ಮೆಲ್ಲರ ಕರ್ತವ್ಯ ಎಂದರು.
ಈ ವೇಳೆ ಪರಿಸರ ಪ್ರೇಮಿ ಮಾನಸ ಭಟ್, ಕರಾವಳಿ ಕಾವಲು ಪಡೆಯ ಉಪ ನಿರೀಕ್ಷಕ ಸುಬ್ರಹ್ಮಣ್ಯ ಮತ್ತಿತರರು ಉಪಸ್ಥಿತರಿದ್ದರು.
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…
ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…
ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…
ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…