Advertisement
MIRROR FOCUS

ಮಳೆಗಾಲ ಸಿದ್ಧತೆ | ಚರಂಡಿ ಹೂಳೆತ್ತಲು ಜಿಲ್ಲಾಧಿಕಾರಿ ಸೂಚನೆ

Share

ಮಂಗಳೂರು ಮಹಾನಗರಪಾಲಿಕೆಯ ಎಲ್ಲಾ 60 ವಾರ್ಡುಗಳಲ್ಲಿ  ತೆರೆದ ಚರಂಡಿಗಳಲ್ಲಿರುವ ಹೂಳೆತ್ತಲು ತಕ್ಷಣವೇ ಕ್ರಮ ಕೈಗೊಳ್ಳಲು ಮಹಾನಗರಪಾಲಿಕೆಯ ಆಡಳಿತಾಧಿಕಾರಿಯೂ ಆಗಿರುವ   ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚಿಸಿದ್ದಾರೆ.

ಅವರು ಮಹಾನಗರಪಾಲಿಕೆ ಕಚೇರಿಯಲ್ಲಿ  ಮಳೆಗಾಲಕ್ಕೆ ಕೈಗೊಳ್ಳಬಹುದಾದ ಪೂರ್ವ ಸಿದ್ಧತೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಮಳೆ ನೀರು ಹರಿದು ಹೋಗುವ  ಎಲ್ಲಾ ಚರಂಡಿ, ಮುಖ್ಯ ಚರಂಡಿ  ಹಾಗೂ ರಾಜಕಾಲುವೆಗಳಲ್ಲಿ   ತಕ್ಷಣದಿಂದಲೇ ಹೂಳೆತ್ತಲು ಪ್ರಾರಂಭಿಸಬೇಕು. ಮಳೆ ನೀರು ಸರಾಗವಾಗಿ ಹರಿದು  ನದಿ ಮತ್ತು ಸಮುದ್ರಗಳನ್ನು  ಯಾವುದೇ ಅಡೆತಡೆಗಳಿಲ್ಲದೆ  ಸೇರುವಂತಾಗಬೇಕು. ಈ ಬಗ್ಗೆ ಯಾವುದೇ ನಿರ್ಲಕ್ಷ್ಯ ವಹಿಸಿದರೆ ಅವರ ವಿರುದ್ಧ ಕ್ರಮಕೈಗೊಳ್ಳುವುದಾಗಿ  ಅವರು ಎಚ್ಚರಿಸಿದರು.

Advertisement

ಸಾರ್ವಜನಿಕರು ತಮ್ಮ ಮನೆಯ  ತ್ಯಾಜ್ಯ ವಸ್ತುಗಳು ಅಥವಾ ಕಟ್ಟಡದ ಅವಶೇಷಗಳನ್ನು ಮಳೆ ನೀರು ಹರಿಯುವ ಚರಂಡಿ ಅಥವಾ  ರಾಜ ಕಾಲುವೆಗಳಿಗೆ    ಎಸೆಯಬಾರದು. ಇಂತಹ  ಕೃತ್ಯ ಎಸಗುವವರ ವಿರುದ್ಧ ದಂಡನಾ ಕ್ರಮಗಳನ್ನು ಕೈಗೊಳ್ಳುವಂತೆ  ಅವರು ನಗರಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು.
ಮಹಾನಗರಪಾಲಿಕೆ ಆಯುಕ್ತ ರವಿಚಂದ್ರ ನಾಯಕ್ ಮಾತನಾಡಿ, ಜನವಸತಿ ಪ್ರದೇಶಗಳಲ್ಲಿ   ಚರಂಡಿ ಹೂಳೆತ್ತಲು ಈಗಾಗಲೇ ಆರಂಭಿಸಲಾಗಿದೆ. ಸಾರ್ವಜನಿಕರು ಚರಂಡಿ ಹೂಳೆತ್ತುವ ಸಂಬಂಧ  ದೂರುಗಳನ್ನು ನೀಡಲು  ಮಹಾನಗರ ಪಾಲಿಕೆ  ಸಹಾಯವಾಣಿ (0824-2220306/ ವಾಟ್ಸಾಪ್ ಸಂಖ್ಯೆ:9449007722) ಸಂಪರ್ಕಿಸಬಹುದು ಎಂದು ತಿಳಿಸಿದರು.

ಸಭೆಯಲ್ಲಿ ಮಹಾನಗರಪಾಲಿಕೆ ಕಾರ್ಯಪಾಲಕ ಅಭಿಯಂತರ  ನರೇಶ್ ಶಣೈ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ

ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…

3 hours ago

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

1 day ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

1 day ago

ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ

ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

1 day ago

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…

2 days ago

ಭಾರೀ ಮಳೆ ಎಚ್ಚರಿಕೆ : 13 ರಾಜ್ಯಗಳಿಗೆ IMD ಅಲರ್ಟ್‌ | ಉಳಿದೆಡೆ ಉಷ್ಣ ಅಲೆ ಮುಂದುವರಿಕೆ

ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…

2 days ago