Advertisement
MIRROR FOCUS

ಮಳೆಗಾಲ ಸಿದ್ಧತೆ | ಚರಂಡಿ ಹೂಳೆತ್ತಲು ಜಿಲ್ಲಾಧಿಕಾರಿ ಸೂಚನೆ

Share

ಮಂಗಳೂರು ಮಹಾನಗರಪಾಲಿಕೆಯ ಎಲ್ಲಾ 60 ವಾರ್ಡುಗಳಲ್ಲಿ  ತೆರೆದ ಚರಂಡಿಗಳಲ್ಲಿರುವ ಹೂಳೆತ್ತಲು ತಕ್ಷಣವೇ ಕ್ರಮ ಕೈಗೊಳ್ಳಲು ಮಹಾನಗರಪಾಲಿಕೆಯ ಆಡಳಿತಾಧಿಕಾರಿಯೂ ಆಗಿರುವ   ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚಿಸಿದ್ದಾರೆ.

ಅವರು ಮಹಾನಗರಪಾಲಿಕೆ ಕಚೇರಿಯಲ್ಲಿ  ಮಳೆಗಾಲಕ್ಕೆ ಕೈಗೊಳ್ಳಬಹುದಾದ ಪೂರ್ವ ಸಿದ್ಧತೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಮಳೆ ನೀರು ಹರಿದು ಹೋಗುವ  ಎಲ್ಲಾ ಚರಂಡಿ, ಮುಖ್ಯ ಚರಂಡಿ  ಹಾಗೂ ರಾಜಕಾಲುವೆಗಳಲ್ಲಿ   ತಕ್ಷಣದಿಂದಲೇ ಹೂಳೆತ್ತಲು ಪ್ರಾರಂಭಿಸಬೇಕು. ಮಳೆ ನೀರು ಸರಾಗವಾಗಿ ಹರಿದು  ನದಿ ಮತ್ತು ಸಮುದ್ರಗಳನ್ನು  ಯಾವುದೇ ಅಡೆತಡೆಗಳಿಲ್ಲದೆ  ಸೇರುವಂತಾಗಬೇಕು. ಈ ಬಗ್ಗೆ ಯಾವುದೇ ನಿರ್ಲಕ್ಷ್ಯ ವಹಿಸಿದರೆ ಅವರ ವಿರುದ್ಧ ಕ್ರಮಕೈಗೊಳ್ಳುವುದಾಗಿ  ಅವರು ಎಚ್ಚರಿಸಿದರು.

ಸಾರ್ವಜನಿಕರು ತಮ್ಮ ಮನೆಯ  ತ್ಯಾಜ್ಯ ವಸ್ತುಗಳು ಅಥವಾ ಕಟ್ಟಡದ ಅವಶೇಷಗಳನ್ನು ಮಳೆ ನೀರು ಹರಿಯುವ ಚರಂಡಿ ಅಥವಾ  ರಾಜ ಕಾಲುವೆಗಳಿಗೆ    ಎಸೆಯಬಾರದು. ಇಂತಹ  ಕೃತ್ಯ ಎಸಗುವವರ ವಿರುದ್ಧ ದಂಡನಾ ಕ್ರಮಗಳನ್ನು ಕೈಗೊಳ್ಳುವಂತೆ  ಅವರು ನಗರಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು.
ಮಹಾನಗರಪಾಲಿಕೆ ಆಯುಕ್ತ ರವಿಚಂದ್ರ ನಾಯಕ್ ಮಾತನಾಡಿ, ಜನವಸತಿ ಪ್ರದೇಶಗಳಲ್ಲಿ   ಚರಂಡಿ ಹೂಳೆತ್ತಲು ಈಗಾಗಲೇ ಆರಂಭಿಸಲಾಗಿದೆ. ಸಾರ್ವಜನಿಕರು ಚರಂಡಿ ಹೂಳೆತ್ತುವ ಸಂಬಂಧ  ದೂರುಗಳನ್ನು ನೀಡಲು  ಮಹಾನಗರ ಪಾಲಿಕೆ  ಸಹಾಯವಾಣಿ (0824-2220306/ ವಾಟ್ಸಾಪ್ ಸಂಖ್ಯೆ:9449007722) ಸಂಪರ್ಕಿಸಬಹುದು ಎಂದು ತಿಳಿಸಿದರು.

ಸಭೆಯಲ್ಲಿ ಮಹಾನಗರಪಾಲಿಕೆ ಕಾರ್ಯಪಾಲಕ ಅಭಿಯಂತರ  ನರೇಶ್ ಶಣೈ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು

ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…

12 hours ago

ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…

22 hours ago

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

1 day ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

2 days ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

2 days ago