ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಗುತ್ತಿಗಾರು ಪೇಟೆಯ ಸ್ವಚ್ಛತಾ ಅಭಿಯಾನ ಮಂದುವರಿದಿದೆ. ಸ್ವಚ್ಛ ಗ್ರಾಮ ಟಾಸ್ಕ್ ಫೋರ್ಸ್ ಕಳೆದ 2 ತಿಂಗಳಿನಿಂದ ನಿರಂತರವಾಗಿ ಪ್ರತೀ ಗುರುವಾರ ಗುತ್ತಿಗಾರು ಪೇಟೆಯಲ್ಲಿ ಸ್ವಚ್ಛತಾ ಜಾಗೃತಿ ಕೆಲಸ ಮಾಡುತ್ತಿದೆ. ಇದೀಗ ಪೊರಕೆ ಹಿಡಿದು ಕಸ ಗುಡಿಸುವ ಮೂಲಕ ಜಾಗೃತಿ ಅಭಿಯಾನವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮಾಡುತ್ತಿದೆ.
ಗುತ್ತಿಗಾರು ಗ್ರಾಮ ಪಂಚಾಯತ್, ಸ್ವಚ್ಛಗ್ರಾಮ ಟಾಸ್ಕ್ಫೋರ್ಸ್, ವರ್ತಕ ಸಂಘ ಗುತ್ತಿಗಾರು, ಸಂಜೀವಿನಿ ಮಹಿಳಾ ಒಕ್ಕೂಟದ ಸದಸ್ಯರು ಹಾಗೂ ಇತರ ಎಲ್ಲಾ ಸಂಘಟನೆಗಳ ಪ್ರಮುಖರು ಪ್ರತೀ ಗುರುವಾರ ಸ್ವಚ್ಛತಾ ಜಾಗೃತಿ ಕಾರ್ಯಕ್ರಮ ನಡೆಸುತ್ತಿದ್ದಾರೆ. ಈ ಮೂಲಕ ಸ್ವಚ್ಛ ಗ್ರಾಮದ ಉದ್ದೇಶವನ್ನು ಹೊಂದಿದ್ದಾರೆ. ಈಗಾಗಲೇ ವರ್ತಕರಿಗೆ, ಸಾರ್ವಜನಿಕರಿಗೆ ಸ್ವಚ್ಛತೆಯ ಬಗ್ಗೆ, ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಲು, ಬಟ್ಟೆ ಚೀಲಗಳ ಬಳಕೆ ಸೇರಿದಂತೆ ಪರಿಸರ ಸ್ನೇಹಿಯ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡಲಾಗಿದೆ. ಇದೀಗ ಪೊರಕೆಯಿಂದ ಸ್ವಚ್ಛತೆ ಮಾಡುವ ಮೂಲಕ ಇನ್ನೊಂದು ಸುತ್ತಿನ ಅಭಿಯಾನ ಆರಂಭಿಸಿದೆ.
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…
ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…