ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಗುತ್ತಿಗಾರು ಪೇಟೆಯ ಸ್ವಚ್ಛತಾ ಅಭಿಯಾನ ಮಂದುವರಿದಿದೆ. ಸ್ವಚ್ಛ ಗ್ರಾಮ ಟಾಸ್ಕ್ ಫೋರ್ಸ್ ಕಳೆದ 2 ತಿಂಗಳಿನಿಂದ ನಿರಂತರವಾಗಿ ಪ್ರತೀ ಗುರುವಾರ ಗುತ್ತಿಗಾರು ಪೇಟೆಯಲ್ಲಿ ಸ್ವಚ್ಛತಾ ಜಾಗೃತಿ ಕೆಲಸ ಮಾಡುತ್ತಿದೆ. ಇದೀಗ ಪೊರಕೆ ಹಿಡಿದು ಕಸ ಗುಡಿಸುವ ಮೂಲಕ ಜಾಗೃತಿ ಅಭಿಯಾನವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮಾಡುತ್ತಿದೆ.
ಗುತ್ತಿಗಾರು ಗ್ರಾಮ ಪಂಚಾಯತ್, ಸ್ವಚ್ಛಗ್ರಾಮ ಟಾಸ್ಕ್ಫೋರ್ಸ್, ವರ್ತಕ ಸಂಘ ಗುತ್ತಿಗಾರು, ಸಂಜೀವಿನಿ ಮಹಿಳಾ ಒಕ್ಕೂಟದ ಸದಸ್ಯರು ಹಾಗೂ ಇತರ ಎಲ್ಲಾ ಸಂಘಟನೆಗಳ ಪ್ರಮುಖರು ಪ್ರತೀ ಗುರುವಾರ ಸ್ವಚ್ಛತಾ ಜಾಗೃತಿ ಕಾರ್ಯಕ್ರಮ ನಡೆಸುತ್ತಿದ್ದಾರೆ. ಈ ಮೂಲಕ ಸ್ವಚ್ಛ ಗ್ರಾಮದ ಉದ್ದೇಶವನ್ನು ಹೊಂದಿದ್ದಾರೆ. ಈಗಾಗಲೇ ವರ್ತಕರಿಗೆ, ಸಾರ್ವಜನಿಕರಿಗೆ ಸ್ವಚ್ಛತೆಯ ಬಗ್ಗೆ, ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಲು, ಬಟ್ಟೆ ಚೀಲಗಳ ಬಳಕೆ ಸೇರಿದಂತೆ ಪರಿಸರ ಸ್ನೇಹಿಯ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡಲಾಗಿದೆ. ಇದೀಗ ಪೊರಕೆಯಿಂದ ಸ್ವಚ್ಛತೆ ಮಾಡುವ ಮೂಲಕ ಇನ್ನೊಂದು ಸುತ್ತಿನ ಅಭಿಯಾನ ಆರಂಭಿಸಿದೆ.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…