ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಗುತ್ತಿಗಾರು ಪೇಟೆಯ ಸ್ವಚ್ಛತಾ ಅಭಿಯಾನ ಮಂದುವರಿದಿದೆ. ಸ್ವಚ್ಛ ಗ್ರಾಮ ಟಾಸ್ಕ್ ಫೋರ್ಸ್ ಕಳೆದ 2 ತಿಂಗಳಿನಿಂದ ನಿರಂತರವಾಗಿ ಪ್ರತೀ ಗುರುವಾರ ಗುತ್ತಿಗಾರು ಪೇಟೆಯಲ್ಲಿ ಸ್ವಚ್ಛತಾ ಜಾಗೃತಿ ಕೆಲಸ ಮಾಡುತ್ತಿದೆ. ಇದೀಗ ಪೊರಕೆ ಹಿಡಿದು ಕಸ ಗುಡಿಸುವ ಮೂಲಕ ಜಾಗೃತಿ ಅಭಿಯಾನವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮಾಡುತ್ತಿದೆ.
ಗುತ್ತಿಗಾರು ಗ್ರಾಮ ಪಂಚಾಯತ್, ಸ್ವಚ್ಛಗ್ರಾಮ ಟಾಸ್ಕ್ಫೋರ್ಸ್, ವರ್ತಕ ಸಂಘ ಗುತ್ತಿಗಾರು, ಸಂಜೀವಿನಿ ಮಹಿಳಾ ಒಕ್ಕೂಟದ ಸದಸ್ಯರು ಹಾಗೂ ಇತರ ಎಲ್ಲಾ ಸಂಘಟನೆಗಳ ಪ್ರಮುಖರು ಪ್ರತೀ ಗುರುವಾರ ಸ್ವಚ್ಛತಾ ಜಾಗೃತಿ ಕಾರ್ಯಕ್ರಮ ನಡೆಸುತ್ತಿದ್ದಾರೆ. ಈ ಮೂಲಕ ಸ್ವಚ್ಛ ಗ್ರಾಮದ ಉದ್ದೇಶವನ್ನು ಹೊಂದಿದ್ದಾರೆ. ಈಗಾಗಲೇ ವರ್ತಕರಿಗೆ, ಸಾರ್ವಜನಿಕರಿಗೆ ಸ್ವಚ್ಛತೆಯ ಬಗ್ಗೆ, ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಲು, ಬಟ್ಟೆ ಚೀಲಗಳ ಬಳಕೆ ಸೇರಿದಂತೆ ಪರಿಸರ ಸ್ನೇಹಿಯ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡಲಾಗಿದೆ. ಇದೀಗ ಪೊರಕೆಯಿಂದ ಸ್ವಚ್ಛತೆ ಮಾಡುವ ಮೂಲಕ ಇನ್ನೊಂದು ಸುತ್ತಿನ ಅಭಿಯಾನ ಆರಂಭಿಸಿದೆ.
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…
ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…