ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಟ 1 ಮೀಟರ್ ಸುತ್ತಳತೆಯಲ್ಲಿ ಹಾಕಲಾದ ಕಾಂಕ್ರೀಟ್, ಕಲ್ಲು ಮತ್ತು ಸಿಮೆಂಟ್ ಬ್ಲಾಕ್ಗಳನ್ನು ತೆರವುಗೊಳಿಸಲು ಅರಣ್ಯ, ಪರಿಸರ ಮತ್ತು ಹವಾಮಾನ ವೈಪರೀತ್ಯ ನಿರ್ವಹಣೆ ವಿಭಾಗದ ವಿಶೇಷ ಆಯುಕ್ತೆ ಪ್ರೀತಿ ಗೆಹ್ಲೋಟ್ ಆದೇಶಿಸಿದ್ದಾರೆ. ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ಸೂಚಿಸಿರುವಂತೆ ಪಾಲಿಕೆ ವ್ಯಾಪ್ತಿಯಲ್ಲಿನ ಪಾದಚಾರಿ ಮಾರ್ಗಗಳು ಅಥವಾ ರಸ್ತೆಗಳಲ್ಲಿ ಇರುವಂತಹ ಮರಗಳ ಸುತ್ತ ಕನಿಷ್ಠ 1 ಮೀಟರ್ ಸುತ್ತಳತೆಯಲ್ಲಿ ಹಾಕಲಾದ ಕಾಂಕ್ರೀಟ್, ಕಲ್ಲು ಮತ್ತು ಸಿಮೆಂಟ್ ಬ್ಲಾಕ್ಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕೂಡಲೇ ತೆರವುಗೊಳಿಸಬೇಕು. ಜೊತೆಗೆ ಕಿರಿದಾದ ರಸ್ತೆಗಳು ಮತ್ತು ಮಾರ್ಗಗಳಲ್ಲಿ, ಸಾಧ್ಯವಾದಷ್ಟು, ಮರಗಳ ಸುತ್ತಲೂ ಕನಿಷ್ಠ 1 ಚದರ ಮೀಟರ್ನಷ್ಟು ಡಾಂಬರು ಹಾಕದ ಅಥವಾ ಕಚ್ಚಾ ಪರಿಣಾಮಕಾರಿ ಪ್ರದೇಶವನ್ನು ಬಿಡಲು ಆದೇಶಿಸಿದ್ದಾರೆ.
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…
ಪರಿಸರ ನಾಶವು ಕೇವಲ ಸಮಸ್ಯೆಯಲ್ಲ, ಅದು ಅಪರಾಧ ಎಂಬುದನ್ನು “ಗ್ರೀನ್ ಕ್ರೈಮ್” ಪುಸ್ತಕ…
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…