ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗುತ್ತಿಲ್ಲ ಏಕೆ…? | ಹವಾಮಾನ ವಿಶ್ಲೇಷಣೆ ಏನು…?

June 22, 2024
10:36 PM

ಕಳೆದ ಎರಡು ದಿನಗಳಿಂದ ಸದ್ದು ಮಾಡಿದ ಸುದ್ದಿ ಭಾರೀ ಮಳೆ..!. ಮಲೆನಾಡು, ಕರಾವಳಿ ಪ್ರದೇಶದಲ್ಲಿ ರೆಡ್‌ ಎಲರ್ಟ್‌ ಸೇರಿದಂತೆ ವಿವಿಧ ಬಗೆಯ ಎಚ್ಚರಿಕೆಗಳು. ಆದರೆ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗಲಿಲ್ಲ. ಹಾಗಿದ್ದರೆ ಮಳೆಯಾಗದೇ ಇರಲು ಕಾರಣವೇನು..? ಹವಾಮಾನ ಇಲಾಖೆ, ವೆದರ್‌ ಮಾಹಿತಿ ಪ್ರಕಾರ ಕರಾವಳಿ, ಮಲೆನಾಡು ಭಾಗಕ್ಕೆ ಮೋಡಗಳ ಚಲನೆ ಇತ್ತು. ಎಲ್ಲವೂ ನಿರೀಕ್ಷೆ ಇತ್ತು. ಕೊನೆಯ ಕ್ಷಣದಲ್ಲಿ ಮಳೆ ಮಾತ್ರಾ ಬರಲಿಲ್ಲ..!. ಈ ಬಗ್ಗೆ ಹವಾಮಾನ ವಿಶ್ಲೇಷಕ ಸಾಯಿಶೇಖರ್‌ ಕರಿಕಳ ಅವರ ಜೊತೆಗಿನ ಮಾತುಕತೆ ಇಲ್ಲಿದೆ….

ಐಎಂಡಿ ಮಾಹಿತಿ ಪ್ರಕಾರ ಹಾಗೂ ಉಪಗ್ರಹದ ಮಾಹಿತಿ ಪ್ರಕಾರ ಶನಿವಾರದಿಂದ ಉತ್ತಮ ಮಳೆ ಕರಾವಳಿ, ಮಲೆನಾಡು ಭಾಗದಲ್ಲಿ ಇರಬೇಕಾಗಿತ್ತು. ಆದರೆ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗಿಲ್ಲ. ಮಳೆಗಾಲದ ಈ ಅವಧಿಯಲ್ಲಿ ಸಾಮಾನ್ಯವಾಗಿ ಉತ್ತಮವಾದ ಮಳೆ ನಿರೀಕ್ಷೆಯಂತೆಯೇ ಆಗುತ್ತದೆ. ಆದರೆ ಈಚೆಗೆ ಒಂದೆರಡು ವರ್ಷಗಳಿಂದ ಹವಾಮಾನದಲ್ಲಿ ಕೊನೆಯ ಕ್ಷಣದಲ್ಲಿ ಬದಲಾವಣೆಯಾಗುತ್ತಿದೆ. ಈ ಬಾರಿಯೂ ಅದೇ ರೀತಿಯ ಸಂದರ್ಭ ಎದುರಾಗಿದೆ. ಸಾಯಿಶೇಖರ್‌ ಅವರು ಹೇಳುವ ಪ್ರಕಾರ, ಮೋಡಗಳ ಚಲನೆ ಉಪಗ್ರಹದಲ್ಲಿ ತೋರಿಸಿದಂತೆಯೇ ಇತ್ತು. ಆದರೆ ಈಗಲೂ ಸಮುದ್ರದಲ್ಲಿ ಉತ್ತಮ ಮಳೆಯಾಗುತ್ತಿರುವ ಬಗ್ಗೆ ಹೇಳಬಹುದು, ಮೋಡಗಳು ಸಮುದ್ರದಿಂದ ಮುಂದೆ ಬಂದಿಲ್ಲ, ಇದಕ್ಕೆ ಗಾಳಿಯ ಕೊರತೆ ಕಾರಣವಿದೆ. ಉತ್ತಮ ಗಾಳಿ ಬೀಸಿದರೆ ಮೋಡದ ಚಲನೆಯಾಗು ಮಳೆಯಾಗಬೇಕಿತ್ತು. ಆದರೆ ಗಾಳಿಯ ಒತ್ತಡ ಕಡಿಮೆ ಇರಲು ಕಾರಣವೇನು? ಈ ಬಗ್ಗೆ ತಜ್ಞರು ವಿಶ್ಲೇಷಣೆ ಮಾಡಬೇಕಿದೆ, ವಿಜ್ಞಾನಿಗಳು ಈ ಬಗ್ಗೆ ತಿಳಿಸಬೇಕಿದೆ ಎನ್ನುತ್ತಾರೆ ಸಾಯಿಶೇಖರ್.…….ಮುಂದೆ ಓದಿ…..

ಈಗ ಉತ್ತರ ಭಾರತದಲ್ಲಿ ಬಿಸಿಗಾಳಿಯ ವಾತಾವರಣ ಇದೆ. ಹೀಗಾಗಿ ಗಾಳಿಯ ಒತ್ತಡ ಸಹಜವಾಗಿಯೇ ಕಡಿಮೆಯಾಗುವ ಸಾಧ್ಯತೆ ಉದೆ. ಈ ಕಾರಣದಿಂದಲೂ ಈಗ ಮಳೆಯ ಸೂಚನೆ ಇದ್ದರೂ ಗಾಳಿಯ ಒತ್ತಡ ಕಡಿಮೆಯಾಗಿರುವ ಸಾಧ್ಯತೆ ಇದೆ. ಹಾಗೆಂದು ಇದು ಅಧಿಕೃತವಾಗಿ ನಾವು ಹೇಳಲು ಬರುವುದಿಲ್ಲ, ತಜ್ಞರ ಅಧ್ಯಯನದ ಮೂಲಕವೇ ಸರಿಯಾದ ಮಾಹಿತಿ ಸಿಗಬಹುದು.

ಇಲಾಖೆಗಳ ಪ್ರಕಾರ ಈ ಬಾರಿ ಉತ್ತಮ ಮಳೆಯಾಗಬೇಕಿತ್ತು. ಇದುವರೆಗೂಈ ಸಾಕಷ್ಟು ಪ್ರಮಾಣದಲ್ಲಿ ಮಳೆಯಾಗಿಲ್ಲ. ಇದಕ್ಕೆ ಕಾರಣ ಏನು..? ಎಂಬುದರ ಮಾಹಿತಿ ಲಭ್ಯವಾದರೆ ರೈತರು ಕೂಡಾ ಮುಂಜಾಗ್ರತಾ ಕ್ರಮಗಳೊಂದಿಗೆ ಕೃಷಿ ಚಟುವಟಿಕೆ ಮಾಡಲು ಅನುಕೂಲವಾಗಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ |13-07-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ – ಮುಂದಿನ 10 ದಿನ ಜೋರು ಮಳೆ ಇಲ್ಲ
July 13, 2026
2:42 PM
by: ಸಾಯಿಶೇಖರ್ ಕರಿಕಳ
ಅಮರನಾಥದ ಹಿಮ ಶಿವಲಿಂಗ 90% ಕರಗಿತು…! ಹವಾಮಾನ ಬದಲಾವಣೆಯೇ ಕಾರಣವೇ?
July 13, 2026
7:17 AM
by: ದ ರೂರಲ್ ಮಿರರ್.ಕಾಂ
16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ನಿರ್ಬಂಧ – ಆಸ್ಟ್ರೇಲಿಯಾದ ಕ್ರಮಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ
July 12, 2026
9:03 PM
by: ದ ರೂರಲ್ ಮಿರರ್.ಕಾಂ
ಎಲ್‌ ನಿನೊ ಎಫೆಕ್ಟ್‌ – ಮುಂದಿನ ವರ್ಷ ಮತ್ಸ್ಯೋದ್ಯಮಕ್ಕೆ ಸಂಕಷ್ಟ?
July 12, 2026
8:39 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror