ಹವಾಮಾನ

ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗುತ್ತಿಲ್ಲ ಏಕೆ…? | ಹವಾಮಾನ ವಿಶ್ಲೇಷಣೆ ಏನು…?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕಳೆದ ಎರಡು ದಿನಗಳಿಂದ ಸದ್ದು ಮಾಡಿದ ಸುದ್ದಿ ಭಾರೀ ಮಳೆ..!. ಮಲೆನಾಡು, ಕರಾವಳಿ ಪ್ರದೇಶದಲ್ಲಿ ರೆಡ್‌ ಎಲರ್ಟ್‌ ಸೇರಿದಂತೆ ವಿವಿಧ ಬಗೆಯ ಎಚ್ಚರಿಕೆಗಳು. ಆದರೆ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗಲಿಲ್ಲ. ಹಾಗಿದ್ದರೆ ಮಳೆಯಾಗದೇ ಇರಲು ಕಾರಣವೇನು..? ಹವಾಮಾನ ಇಲಾಖೆ, ವೆದರ್‌ ಮಾಹಿತಿ ಪ್ರಕಾರ ಕರಾವಳಿ, ಮಲೆನಾಡು ಭಾಗಕ್ಕೆ ಮೋಡಗಳ ಚಲನೆ ಇತ್ತು. ಎಲ್ಲವೂ ನಿರೀಕ್ಷೆ ಇತ್ತು. ಕೊನೆಯ ಕ್ಷಣದಲ್ಲಿ ಮಳೆ ಮಾತ್ರಾ ಬರಲಿಲ್ಲ..!. ಈ ಬಗ್ಗೆ ಹವಾಮಾನ ವಿಶ್ಲೇಷಕ ಸಾಯಿಶೇಖರ್‌ ಕರಿಕಳ ಅವರ ಜೊತೆಗಿನ ಮಾತುಕತೆ ಇಲ್ಲಿದೆ….

Advertisement
Advertisement

ಐಎಂಡಿ ಮಾಹಿತಿ ಪ್ರಕಾರ ಹಾಗೂ ಉಪಗ್ರಹದ ಮಾಹಿತಿ ಪ್ರಕಾರ ಶನಿವಾರದಿಂದ ಉತ್ತಮ ಮಳೆ ಕರಾವಳಿ, ಮಲೆನಾಡು ಭಾಗದಲ್ಲಿ ಇರಬೇಕಾಗಿತ್ತು. ಆದರೆ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗಿಲ್ಲ. ಮಳೆಗಾಲದ ಈ ಅವಧಿಯಲ್ಲಿ ಸಾಮಾನ್ಯವಾಗಿ ಉತ್ತಮವಾದ ಮಳೆ ನಿರೀಕ್ಷೆಯಂತೆಯೇ ಆಗುತ್ತದೆ. ಆದರೆ ಈಚೆಗೆ ಒಂದೆರಡು ವರ್ಷಗಳಿಂದ ಹವಾಮಾನದಲ್ಲಿ ಕೊನೆಯ ಕ್ಷಣದಲ್ಲಿ ಬದಲಾವಣೆಯಾಗುತ್ತಿದೆ. ಈ ಬಾರಿಯೂ ಅದೇ ರೀತಿಯ ಸಂದರ್ಭ ಎದುರಾಗಿದೆ. ಸಾಯಿಶೇಖರ್‌ ಅವರು ಹೇಳುವ ಪ್ರಕಾರ, ಮೋಡಗಳ ಚಲನೆ ಉಪಗ್ರಹದಲ್ಲಿ ತೋರಿಸಿದಂತೆಯೇ ಇತ್ತು. ಆದರೆ ಈಗಲೂ ಸಮುದ್ರದಲ್ಲಿ ಉತ್ತಮ ಮಳೆಯಾಗುತ್ತಿರುವ ಬಗ್ಗೆ ಹೇಳಬಹುದು, ಮೋಡಗಳು ಸಮುದ್ರದಿಂದ ಮುಂದೆ ಬಂದಿಲ್ಲ, ಇದಕ್ಕೆ ಗಾಳಿಯ ಕೊರತೆ ಕಾರಣವಿದೆ. ಉತ್ತಮ ಗಾಳಿ ಬೀಸಿದರೆ ಮೋಡದ ಚಲನೆಯಾಗು ಮಳೆಯಾಗಬೇಕಿತ್ತು. ಆದರೆ ಗಾಳಿಯ ಒತ್ತಡ ಕಡಿಮೆ ಇರಲು ಕಾರಣವೇನು? ಈ ಬಗ್ಗೆ ತಜ್ಞರು ವಿಶ್ಲೇಷಣೆ ಮಾಡಬೇಕಿದೆ, ವಿಜ್ಞಾನಿಗಳು ಈ ಬಗ್ಗೆ ತಿಳಿಸಬೇಕಿದೆ ಎನ್ನುತ್ತಾರೆ ಸಾಯಿಶೇಖರ್.…….ಮುಂದೆ ಓದಿ…..

ಈಗ ಉತ್ತರ ಭಾರತದಲ್ಲಿ ಬಿಸಿಗಾಳಿಯ ವಾತಾವರಣ ಇದೆ. ಹೀಗಾಗಿ ಗಾಳಿಯ ಒತ್ತಡ ಸಹಜವಾಗಿಯೇ ಕಡಿಮೆಯಾಗುವ ಸಾಧ್ಯತೆ ಉದೆ. ಈ ಕಾರಣದಿಂದಲೂ ಈಗ ಮಳೆಯ ಸೂಚನೆ ಇದ್ದರೂ ಗಾಳಿಯ ಒತ್ತಡ ಕಡಿಮೆಯಾಗಿರುವ ಸಾಧ್ಯತೆ ಇದೆ. ಹಾಗೆಂದು ಇದು ಅಧಿಕೃತವಾಗಿ ನಾವು ಹೇಳಲು ಬರುವುದಿಲ್ಲ, ತಜ್ಞರ ಅಧ್ಯಯನದ ಮೂಲಕವೇ ಸರಿಯಾದ ಮಾಹಿತಿ ಸಿಗಬಹುದು.

ಇಲಾಖೆಗಳ ಪ್ರಕಾರ ಈ ಬಾರಿ ಉತ್ತಮ ಮಳೆಯಾಗಬೇಕಿತ್ತು. ಇದುವರೆಗೂಈ ಸಾಕಷ್ಟು ಪ್ರಮಾಣದಲ್ಲಿ ಮಳೆಯಾಗಿಲ್ಲ. ಇದಕ್ಕೆ ಕಾರಣ ಏನು..? ಎಂಬುದರ ಮಾಹಿತಿ ಲಭ್ಯವಾದರೆ ರೈತರು ಕೂಡಾ ಮುಂಜಾಗ್ರತಾ ಕ್ರಮಗಳೊಂದಿಗೆ ಕೃಷಿ ಚಟುವಟಿಕೆ ಮಾಡಲು ಅನುಕೂಲವಾಗಬಹುದು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂದುವರಿದ ಮಳೆಯಬ್ಬರ | 4 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ |

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.  ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ…

8 hours ago

ಹವಾಮಾನ ವರದಿ | 15.06.2025 | ಜೂನ್.18ರಿಂದ ಮಳೆ ಪ್ರಮಾಣ ಕಡಿಮೆ ನಿರೀಕ್ಷೆ| ವಾಯುಭಾರ ಕುಸಿತ -ಮುಂಗಾರು ದುರ್ಬಲ ಸಾಧ್ಯತೆ

16.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

18 hours ago

ವಿದೇಶದಿಂದ ಹಳ್ಳಿಗೆ ಬಂದು ಕೃಷಿ ಸಾಧನೆ ಮಾಡಿದ ಯುವಕ

ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ  ಯೋಗೇಶ್ ತೋರಿಸಿಕೊಟ್ಟಿದ್ದಾರೆ.…

19 hours ago

ಬದುಕು ಪುರಾಣ | ‘ಅವನೇನು.. ಹರಿಶ್ಚಂದ್ರನೋ!’

ನುಡಿದಂತೆ ನಡೆದಾತ ‘ರಾಜಾ ಹರಿಶ್ಚಂದ್ರ’. ಸತ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ತ್ಯಾಗಿ. ಅನೃತವನ್ನಾಡದೆ…

23 hours ago

ಗುರು ಆದಿತ್ಯ ರಾಜಯೋಗ | ಯಾರಿಗೆಲ್ಲಾ ಕುಬೇರ ಯೋಗ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

24 hours ago

ಸೆ.30 ವರೆಗೆ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿರ್ಬಂಧ

ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…

1 day ago