Advertisement
ಹವಾಮಾನ

ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗುತ್ತಿಲ್ಲ ಏಕೆ…? | ಹವಾಮಾನ ವಿಶ್ಲೇಷಣೆ ಏನು…?

Share

ಕಳೆದ ಎರಡು ದಿನಗಳಿಂದ ಸದ್ದು ಮಾಡಿದ ಸುದ್ದಿ ಭಾರೀ ಮಳೆ..!. ಮಲೆನಾಡು, ಕರಾವಳಿ ಪ್ರದೇಶದಲ್ಲಿ ರೆಡ್‌ ಎಲರ್ಟ್‌ ಸೇರಿದಂತೆ ವಿವಿಧ ಬಗೆಯ ಎಚ್ಚರಿಕೆಗಳು. ಆದರೆ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗಲಿಲ್ಲ. ಹಾಗಿದ್ದರೆ ಮಳೆಯಾಗದೇ ಇರಲು ಕಾರಣವೇನು..? ಹವಾಮಾನ ಇಲಾಖೆ, ವೆದರ್‌ ಮಾಹಿತಿ ಪ್ರಕಾರ ಕರಾವಳಿ, ಮಲೆನಾಡು ಭಾಗಕ್ಕೆ ಮೋಡಗಳ ಚಲನೆ ಇತ್ತು. ಎಲ್ಲವೂ ನಿರೀಕ್ಷೆ ಇತ್ತು. ಕೊನೆಯ ಕ್ಷಣದಲ್ಲಿ ಮಳೆ ಮಾತ್ರಾ ಬರಲಿಲ್ಲ..!. ಈ ಬಗ್ಗೆ ಹವಾಮಾನ ವಿಶ್ಲೇಷಕ ಸಾಯಿಶೇಖರ್‌ ಕರಿಕಳ ಅವರ ಜೊತೆಗಿನ ಮಾತುಕತೆ ಇಲ್ಲಿದೆ….

ಐಎಂಡಿ ಮಾಹಿತಿ ಪ್ರಕಾರ ಹಾಗೂ ಉಪಗ್ರಹದ ಮಾಹಿತಿ ಪ್ರಕಾರ ಶನಿವಾರದಿಂದ ಉತ್ತಮ ಮಳೆ ಕರಾವಳಿ, ಮಲೆನಾಡು ಭಾಗದಲ್ಲಿ ಇರಬೇಕಾಗಿತ್ತು. ಆದರೆ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗಿಲ್ಲ. ಮಳೆಗಾಲದ ಈ ಅವಧಿಯಲ್ಲಿ ಸಾಮಾನ್ಯವಾಗಿ ಉತ್ತಮವಾದ ಮಳೆ ನಿರೀಕ್ಷೆಯಂತೆಯೇ ಆಗುತ್ತದೆ. ಆದರೆ ಈಚೆಗೆ ಒಂದೆರಡು ವರ್ಷಗಳಿಂದ ಹವಾಮಾನದಲ್ಲಿ ಕೊನೆಯ ಕ್ಷಣದಲ್ಲಿ ಬದಲಾವಣೆಯಾಗುತ್ತಿದೆ. ಈ ಬಾರಿಯೂ ಅದೇ ರೀತಿಯ ಸಂದರ್ಭ ಎದುರಾಗಿದೆ. ಸಾಯಿಶೇಖರ್‌ ಅವರು ಹೇಳುವ ಪ್ರಕಾರ, ಮೋಡಗಳ ಚಲನೆ ಉಪಗ್ರಹದಲ್ಲಿ ತೋರಿಸಿದಂತೆಯೇ ಇತ್ತು. ಆದರೆ ಈಗಲೂ ಸಮುದ್ರದಲ್ಲಿ ಉತ್ತಮ ಮಳೆಯಾಗುತ್ತಿರುವ ಬಗ್ಗೆ ಹೇಳಬಹುದು, ಮೋಡಗಳು ಸಮುದ್ರದಿಂದ ಮುಂದೆ ಬಂದಿಲ್ಲ, ಇದಕ್ಕೆ ಗಾಳಿಯ ಕೊರತೆ ಕಾರಣವಿದೆ. ಉತ್ತಮ ಗಾಳಿ ಬೀಸಿದರೆ ಮೋಡದ ಚಲನೆಯಾಗು ಮಳೆಯಾಗಬೇಕಿತ್ತು. ಆದರೆ ಗಾಳಿಯ ಒತ್ತಡ ಕಡಿಮೆ ಇರಲು ಕಾರಣವೇನು? ಈ ಬಗ್ಗೆ ತಜ್ಞರು ವಿಶ್ಲೇಷಣೆ ಮಾಡಬೇಕಿದೆ, ವಿಜ್ಞಾನಿಗಳು ಈ ಬಗ್ಗೆ ತಿಳಿಸಬೇಕಿದೆ ಎನ್ನುತ್ತಾರೆ ಸಾಯಿಶೇಖರ್.…….ಮುಂದೆ ಓದಿ…..

ಈಗ ಉತ್ತರ ಭಾರತದಲ್ಲಿ ಬಿಸಿಗಾಳಿಯ ವಾತಾವರಣ ಇದೆ. ಹೀಗಾಗಿ ಗಾಳಿಯ ಒತ್ತಡ ಸಹಜವಾಗಿಯೇ ಕಡಿಮೆಯಾಗುವ ಸಾಧ್ಯತೆ ಉದೆ. ಈ ಕಾರಣದಿಂದಲೂ ಈಗ ಮಳೆಯ ಸೂಚನೆ ಇದ್ದರೂ ಗಾಳಿಯ ಒತ್ತಡ ಕಡಿಮೆಯಾಗಿರುವ ಸಾಧ್ಯತೆ ಇದೆ. ಹಾಗೆಂದು ಇದು ಅಧಿಕೃತವಾಗಿ ನಾವು ಹೇಳಲು ಬರುವುದಿಲ್ಲ, ತಜ್ಞರ ಅಧ್ಯಯನದ ಮೂಲಕವೇ ಸರಿಯಾದ ಮಾಹಿತಿ ಸಿಗಬಹುದು.

ಇಲಾಖೆಗಳ ಪ್ರಕಾರ ಈ ಬಾರಿ ಉತ್ತಮ ಮಳೆಯಾಗಬೇಕಿತ್ತು. ಇದುವರೆಗೂಈ ಸಾಕಷ್ಟು ಪ್ರಮಾಣದಲ್ಲಿ ಮಳೆಯಾಗಿಲ್ಲ. ಇದಕ್ಕೆ ಕಾರಣ ಏನು..? ಎಂಬುದರ ಮಾಹಿತಿ ಲಭ್ಯವಾದರೆ ರೈತರು ಕೂಡಾ ಮುಂಜಾಗ್ರತಾ ಕ್ರಮಗಳೊಂದಿಗೆ ಕೃಷಿ ಚಟುವಟಿಕೆ ಮಾಡಲು ಅನುಕೂಲವಾಗಬಹುದು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

4 hours ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

4 hours ago

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

15 hours ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

19 hours ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

1 day ago

ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?

ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…

2 days ago